Homeಚಳವಳಿಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೇಶದ ಅರ್ಧದಷ್ಟಿರುವ ಮಹಿಳೆಯರಲ್ಲಿ/ಮಹಿಳಾ ಮತದಾರರಲ್ಲಿ ಈ ಚುನಾವಣೆಯಲ್ಲಿ ಅವರಿಗೆ ಸಿಕ್ಕಿದ್ದೆಷ್ಟು? ಈ ಪ್ರಶ್ನೆಗೆ ಉತ್ತರ ಹುಡುಕಿದರೆ ತೀವ್ರ ನಿರಾಶೆ ಆವರಿಸುತ್ತದೆ. ಆದರೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಒಡಿಸ್ಸಾದಲ್ಲಿ ನವೀನ್ ಪಟ್ನಾಯಕ್‍ರವರ ಮಾದರಿ ಮೆಚ್ಚುವಂತಾದ್ದಾಗಿದೆ.

ಮೊದಲಿಗೆ ಒಡಿಸ್ಸಾದ ಮುಖ್ಯಮಂತ್ರಿ ನವೀನ ಪಟ್ನಾಯಕ್‍ರವರು 33% ಟಿಕೆಟ್‍ಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಘೋಷಿಸಿದರು. ಅಂತೆಯೇ ಅಲ್ಲಿನ 21 ಲೋಕಸಭಾ ಕ್ಷೇತ್ರಗಳಲ್ಲಿ 7 ಸ್ಥಾನಗಳನ್ನು ಮಹಿಳೆಯರಿಗೆ ಟಿಕೆಟ್ ನೀಡಿದರು. 7ರಲ್ಲಿ 5 ಜನ ಮಹಿಳೆಯರು ವಿಜಯ ಸಾಧಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 41% ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವ ಮೂಲಕ ಪುರುಷರ ಹುಬ್ಬೇರುವಂತೆ ಮಾಡಿದ್ದರು. ಅಂದರೆ ಬಂಗಾಳದ 42 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಹಿಳೆಯರಿಗೆ ನೀಡಿ ಚುನಾವಣೆ ಎದುರಿಸಿದರು. 17ರಲ್ಲಿ 09 ಕ್ಷೇತ್ರಗಳಲ್ಲಿ ಮಹಿಳೆರು ಜಯ ಸಾಧಿಸಿದ್ದಾರೆ.

ಒಟ್ಟು ಅಲ್ಲಿ ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ. ಮಹಿಳೆಯರಿಗೆ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎನ್ನುವುದನ್ನು ಈ ಮಹಿಳೆಯರು ಸುಳ್ಳು ಮಾಡಿದ್ದಾರೆ.

ಇವೆರೆಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಇದಕ್ಕಾಗಿ ನಾವು ಮುಕ್ತಕಂಠದಿಂದ ಶ್ಲಾಘಿಸಬೇಕಿದೆ. ರಾಷ್ಟ್ರೀಯ ಪಕ್ಷಗಳ ಮಾಡಲಾಗದ ಈ ಅಭೂತಪೂರ್ವ ಸಾಧನೆಯನ್ನು ಸ್ಥಳೀಯ ನಾಯಕರು ಮಾಡಿ ತೋರಿಸಿದ್ದಾರೆ. ಇವರ ನಡೆ ಮಾದರಿಯಾಗಿದ್ದು ಉಳಿದ ರಾಜ್ಯಗಳು ಇವರನ್ನು ಅನುಸರಿಸಬೇಕಿದೆ.

ಇನ್ನುಳಿದಂತೆ ಈ ಲೋಕಸಭಾ ಚುನಾವನೆಯಲ್ಲಿ ಒಟ್ಟು 8049 ಅಭ್ಯರ್ಥಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿದ್ದುದು ಕೇವಲ 750 ಮಾತ್ರ. ಅಂದರೆ 9.21% ಮಾತ್ರ. ಇನ್ನು 750ರಲ್ಲಿ ಗೆದ್ದವರ ಸಂಖ್ಯೆ 72 ಮಾತ್ರ. ಅಂದರೆ 9.6% ಮಾತ್ರ. ಇನ್ನು 542 ಕ್ಷೇತ್ರಗಳಲ್ಲಿ 72 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಅಂದರೆ 13.28% ಮಹಿಳೆಯರು ಸಂಸತ್ ಪ್ರವೇಶಿಸಿದ್ದಾರೆ ಅಷ್ಟೇ.

50% ಅಥವಾ ಕನಿಷ್ಠ 33% ಮಹಿಳಾ ಮೀಸಲಾತಿ ಯಾಕೆ ಜಾರಿಗೆ ಬರಬೇಕು ಎಂಬುದನ್ನು ಈ ಮೇಲಿನ ಅಂಶಗಳು ತಿಳಿಸುತ್ತವೆ. ಇದಕ್ಕಾಗಿ ಈ ಹೋರಾಟವನ್ನು ತೀವ್ರಗೊಳಿಸಬೇಕಿದೆ. ಇದೇ ಸಂದರ್ಭದಲ್ಲಿ ತಾವು ಅಧಿಕಾರಕ್ಕೆ ಬಂದರೆ ರಾಜಕೀಯ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ದನ್ನು ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...