Homeಚಳವಳಿಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೇಶದ ಅರ್ಧದಷ್ಟಿರುವ ಮಹಿಳೆಯರಲ್ಲಿ/ಮಹಿಳಾ ಮತದಾರರಲ್ಲಿ ಈ ಚುನಾವಣೆಯಲ್ಲಿ ಅವರಿಗೆ ಸಿಕ್ಕಿದ್ದೆಷ್ಟು? ಈ ಪ್ರಶ್ನೆಗೆ ಉತ್ತರ ಹುಡುಕಿದರೆ ತೀವ್ರ ನಿರಾಶೆ ಆವರಿಸುತ್ತದೆ. ಆದರೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಒಡಿಸ್ಸಾದಲ್ಲಿ ನವೀನ್ ಪಟ್ನಾಯಕ್‍ರವರ ಮಾದರಿ ಮೆಚ್ಚುವಂತಾದ್ದಾಗಿದೆ.

ಮೊದಲಿಗೆ ಒಡಿಸ್ಸಾದ ಮುಖ್ಯಮಂತ್ರಿ ನವೀನ ಪಟ್ನಾಯಕ್‍ರವರು 33% ಟಿಕೆಟ್‍ಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಘೋಷಿಸಿದರು. ಅಂತೆಯೇ ಅಲ್ಲಿನ 21 ಲೋಕಸಭಾ ಕ್ಷೇತ್ರಗಳಲ್ಲಿ 7 ಸ್ಥಾನಗಳನ್ನು ಮಹಿಳೆಯರಿಗೆ ಟಿಕೆಟ್ ನೀಡಿದರು. 7ರಲ್ಲಿ 5 ಜನ ಮಹಿಳೆಯರು ವಿಜಯ ಸಾಧಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 41% ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವ ಮೂಲಕ ಪುರುಷರ ಹುಬ್ಬೇರುವಂತೆ ಮಾಡಿದ್ದರು. ಅಂದರೆ ಬಂಗಾಳದ 42 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಹಿಳೆಯರಿಗೆ ನೀಡಿ ಚುನಾವಣೆ ಎದುರಿಸಿದರು. 17ರಲ್ಲಿ 09 ಕ್ಷೇತ್ರಗಳಲ್ಲಿ ಮಹಿಳೆರು ಜಯ ಸಾಧಿಸಿದ್ದಾರೆ.

ಒಟ್ಟು ಅಲ್ಲಿ ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ. ಮಹಿಳೆಯರಿಗೆ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎನ್ನುವುದನ್ನು ಈ ಮಹಿಳೆಯರು ಸುಳ್ಳು ಮಾಡಿದ್ದಾರೆ.

ಇವೆರೆಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಇದಕ್ಕಾಗಿ ನಾವು ಮುಕ್ತಕಂಠದಿಂದ ಶ್ಲಾಘಿಸಬೇಕಿದೆ. ರಾಷ್ಟ್ರೀಯ ಪಕ್ಷಗಳ ಮಾಡಲಾಗದ ಈ ಅಭೂತಪೂರ್ವ ಸಾಧನೆಯನ್ನು ಸ್ಥಳೀಯ ನಾಯಕರು ಮಾಡಿ ತೋರಿಸಿದ್ದಾರೆ. ಇವರ ನಡೆ ಮಾದರಿಯಾಗಿದ್ದು ಉಳಿದ ರಾಜ್ಯಗಳು ಇವರನ್ನು ಅನುಸರಿಸಬೇಕಿದೆ.

ಇನ್ನುಳಿದಂತೆ ಈ ಲೋಕಸಭಾ ಚುನಾವನೆಯಲ್ಲಿ ಒಟ್ಟು 8049 ಅಭ್ಯರ್ಥಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿದ್ದುದು ಕೇವಲ 750 ಮಾತ್ರ. ಅಂದರೆ 9.21% ಮಾತ್ರ. ಇನ್ನು 750ರಲ್ಲಿ ಗೆದ್ದವರ ಸಂಖ್ಯೆ 72 ಮಾತ್ರ. ಅಂದರೆ 9.6% ಮಾತ್ರ. ಇನ್ನು 542 ಕ್ಷೇತ್ರಗಳಲ್ಲಿ 72 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಅಂದರೆ 13.28% ಮಹಿಳೆಯರು ಸಂಸತ್ ಪ್ರವೇಶಿಸಿದ್ದಾರೆ ಅಷ್ಟೇ.

50% ಅಥವಾ ಕನಿಷ್ಠ 33% ಮಹಿಳಾ ಮೀಸಲಾತಿ ಯಾಕೆ ಜಾರಿಗೆ ಬರಬೇಕು ಎಂಬುದನ್ನು ಈ ಮೇಲಿನ ಅಂಶಗಳು ತಿಳಿಸುತ್ತವೆ. ಇದಕ್ಕಾಗಿ ಈ ಹೋರಾಟವನ್ನು ತೀವ್ರಗೊಳಿಸಬೇಕಿದೆ. ಇದೇ ಸಂದರ್ಭದಲ್ಲಿ ತಾವು ಅಧಿಕಾರಕ್ಕೆ ಬಂದರೆ ರಾಜಕೀಯ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ದನ್ನು ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...