Homeಚಳವಳಿಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೇಶದ ಅರ್ಧದಷ್ಟಿರುವ ಮಹಿಳೆಯರಲ್ಲಿ/ಮಹಿಳಾ ಮತದಾರರಲ್ಲಿ ಈ ಚುನಾವಣೆಯಲ್ಲಿ ಅವರಿಗೆ ಸಿಕ್ಕಿದ್ದೆಷ್ಟು? ಈ ಪ್ರಶ್ನೆಗೆ ಉತ್ತರ ಹುಡುಕಿದರೆ ತೀವ್ರ ನಿರಾಶೆ ಆವರಿಸುತ್ತದೆ. ಆದರೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಒಡಿಸ್ಸಾದಲ್ಲಿ ನವೀನ್ ಪಟ್ನಾಯಕ್‍ರವರ ಮಾದರಿ ಮೆಚ್ಚುವಂತಾದ್ದಾಗಿದೆ.

ಮೊದಲಿಗೆ ಒಡಿಸ್ಸಾದ ಮುಖ್ಯಮಂತ್ರಿ ನವೀನ ಪಟ್ನಾಯಕ್‍ರವರು 33% ಟಿಕೆಟ್‍ಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಘೋಷಿಸಿದರು. ಅಂತೆಯೇ ಅಲ್ಲಿನ 21 ಲೋಕಸಭಾ ಕ್ಷೇತ್ರಗಳಲ್ಲಿ 7 ಸ್ಥಾನಗಳನ್ನು ಮಹಿಳೆಯರಿಗೆ ಟಿಕೆಟ್ ನೀಡಿದರು. 7ರಲ್ಲಿ 5 ಜನ ಮಹಿಳೆಯರು ವಿಜಯ ಸಾಧಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 41% ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವ ಮೂಲಕ ಪುರುಷರ ಹುಬ್ಬೇರುವಂತೆ ಮಾಡಿದ್ದರು. ಅಂದರೆ ಬಂಗಾಳದ 42 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಹಿಳೆಯರಿಗೆ ನೀಡಿ ಚುನಾವಣೆ ಎದುರಿಸಿದರು. 17ರಲ್ಲಿ 09 ಕ್ಷೇತ್ರಗಳಲ್ಲಿ ಮಹಿಳೆರು ಜಯ ಸಾಧಿಸಿದ್ದಾರೆ.

ಒಟ್ಟು ಅಲ್ಲಿ ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ. ಮಹಿಳೆಯರಿಗೆ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎನ್ನುವುದನ್ನು ಈ ಮಹಿಳೆಯರು ಸುಳ್ಳು ಮಾಡಿದ್ದಾರೆ.

ಇವೆರೆಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಇದಕ್ಕಾಗಿ ನಾವು ಮುಕ್ತಕಂಠದಿಂದ ಶ್ಲಾಘಿಸಬೇಕಿದೆ. ರಾಷ್ಟ್ರೀಯ ಪಕ್ಷಗಳ ಮಾಡಲಾಗದ ಈ ಅಭೂತಪೂರ್ವ ಸಾಧನೆಯನ್ನು ಸ್ಥಳೀಯ ನಾಯಕರು ಮಾಡಿ ತೋರಿಸಿದ್ದಾರೆ. ಇವರ ನಡೆ ಮಾದರಿಯಾಗಿದ್ದು ಉಳಿದ ರಾಜ್ಯಗಳು ಇವರನ್ನು ಅನುಸರಿಸಬೇಕಿದೆ.

ಇನ್ನುಳಿದಂತೆ ಈ ಲೋಕಸಭಾ ಚುನಾವನೆಯಲ್ಲಿ ಒಟ್ಟು 8049 ಅಭ್ಯರ್ಥಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿದ್ದುದು ಕೇವಲ 750 ಮಾತ್ರ. ಅಂದರೆ 9.21% ಮಾತ್ರ. ಇನ್ನು 750ರಲ್ಲಿ ಗೆದ್ದವರ ಸಂಖ್ಯೆ 72 ಮಾತ್ರ. ಅಂದರೆ 9.6% ಮಾತ್ರ. ಇನ್ನು 542 ಕ್ಷೇತ್ರಗಳಲ್ಲಿ 72 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಅಂದರೆ 13.28% ಮಹಿಳೆಯರು ಸಂಸತ್ ಪ್ರವೇಶಿಸಿದ್ದಾರೆ ಅಷ್ಟೇ.

50% ಅಥವಾ ಕನಿಷ್ಠ 33% ಮಹಿಳಾ ಮೀಸಲಾತಿ ಯಾಕೆ ಜಾರಿಗೆ ಬರಬೇಕು ಎಂಬುದನ್ನು ಈ ಮೇಲಿನ ಅಂಶಗಳು ತಿಳಿಸುತ್ತವೆ. ಇದಕ್ಕಾಗಿ ಈ ಹೋರಾಟವನ್ನು ತೀವ್ರಗೊಳಿಸಬೇಕಿದೆ. ಇದೇ ಸಂದರ್ಭದಲ್ಲಿ ತಾವು ಅಧಿಕಾರಕ್ಕೆ ಬಂದರೆ ರಾಜಕೀಯ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ದನ್ನು ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...