Homeಮುಖಪುಟಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

ಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

- Advertisement -
- Advertisement -

ಲಾಕ್ ಡೌನ್ ನಿಂದ ಕೆಲಸವಿಲ್ಲ, ಕೂಲಿ ಇಲ್ಲ, ಹಣವಿಲ್ಲ ಏನ್ ಮಾಡೋದು? ಕೇವಲ ಪಡಿತರ ದಾನ್ಯಗಳನ್ನು ನೀಡಿದರೆ ಸಾಕೇ? ಹಾಲು, ತರಕಾರಿಗೆ ಹಣ ಬೇಡವೇ, ನಮ್ಮ ಏರಿಯಾದ ಸೀಲ್‌ಡೌನ್‌ ತೆರವುಗೊಳಿಸಿ ಎಂದು ಪ್ರಶ್ನಿಸಿದ ನೂರಾರು ಮಹಿಳೆಯರು ಮನೆಗಳಿಂದ ಹೊರಬಂದು ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಪ್ರಸಂಗ ತುಮಕೂರಿನಲ್ಲಿ ನಡೆದಿದೆ.

ನಗರದ ಪೂರ್ ಹೌಸ್  ಕಾಲೋನಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಪಿಎಚ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಸೋಂಕಿತ ವ್ಯಕ್ತಿ ಇದೀಗ ಗುಣಮುಖನಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದು ಕಾಲೋನಿಯಲ್ಲಿ ಕ್ವಾರಂಟೈನ್ ನಲ್ಲಿಟ್ಟಿದ್ದ ಎಲ್ಲರಿಗೂ ನೆಗೆಟೀವ್ ಬಂದಿದೆ. ಹೀಗಾಗಿ ಲಾಕ್ ಡೌನ್ ತೆರವುಗೊಳಿಸಿ ಕೆಲಸ ಮಾಡಲು ಅವಕಾಶ ಕೊಡುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದರು.

10ನೇ ವಾರ್ಡ್ ಸೇರಿದಂತೆ ಎಲ್ಲೆಡೆಯೂ ಮೇ 1 ರಿಂದ ಹಾಲು ನಿಲ್ಲಿಸಲಾಗಿದೆ. ಕಾರ್ಪೋರೇಟರ್ ತಮ್ಮ ಸ್ವಂತ ಹಣದಲ್ಲೂ ಕೆಲ ದಿನಗಳು ಹಾಲು ವಿತರಣೆ ಮಾಡಿದರು. ಮನೆಯಲ್ಲಿ ಮಕ್ಕಳಿದ್ದಾರೆ. ಅವರಿಗೆ ಹಾಲು ಇಲ್ಲದೆ ಸುಮ್ಮನಿರಿಸಲು ಆಗುತ್ತಿಲ್ಲ. ಮೊದಲು ಗಂಡಸರಿಗೆ ಕೆಲಸ ಕೊಡಿ. ಅವರು ದುಡಿದು ತಂದು ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ. ಮನೆಯಲ್ಲಿ ತರಕಾರಿ, ಹಾಲಿಗೂ ದುಡ್ಡಿಲ್ಲ ಎಂದು ನೊಂದ ಮಹಿಳೆಯರು ದೂರಿದರು.

‌ಇದರಿಂದ ಕೆರಳಿದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನವೀನ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದಾರೆ. ನೀವು ಗುಂಪುಗೂಡಲು ಅವಕಾಶ ಕೊಟ್ಟಿದ್ಯಾರು? ಒಬ್ಬರಿಗೆ ಪಾಸಿಟಿವ್‌ ಬಂದರೂ ನೀವೆಲ್ಲರೂ ಜವಾಬ್ದಾರರಾಗುತ್ತೀರಿ. ನಿಮಗೇನು ಬೇಕು ನನಗೆ ಹೇಳಿ ಕೊಡಿಸುತ್ತೇನೆ ಎಂದು ಧಮಕಿ ಹಾಕಿದ್ದಾರೆ. ಆದರೆ ಮಹಿಳೆಯರು ಕೇಳುವ ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರ ಇರಲಿಲ್ಲ. ಆಗ ಪೊಲೀಸರು ನೀವು ದಿಢೀರ್ ಪ್ರತಿಭಟನೆ ಮಾಡುತ್ತಿದ್ದೀರಿ. ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಬೆದಿರಿಸುವ ತಂತ್ರ ಮಾಡಿದರು. ಆದರೂ ಮಹಿಳೆಯರು ತಮ್ಮ ನೋವನ್ನು ತೋಡಿಕೊಂಡರು. ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡರು. ಹಾಗಾಗಿ ಪೊಲೀಸರು ಕೂಡ ಮೌನಕ್ಕೆ ಶರಣಾದರು.

ಈ ಕುರಿತು ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್, “ತುಮಕೂರು ನಗರದೆಲ್ಲಡೆ ಲಾಕ್ ಡೌನ್ ಸಡಿಲಗೊಳಿಸಲಾಗಿದೆ. ಎಂ.ಜಿ.ರಸ್ತೆಯಲ್ಲಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೂ ಪಿ.ಎಚ್.ಕಾಲೋನಿಯನ್ನು ಸೀಲ್ ಡೌನ್ ಮಾಡಿ ತಾರತಮ್ಯ ಮಾಡಲಾಗುತ್ತಿದೆ. ಹಾಗಾಗಿ ಮಹಿಳೆಯರು ಪ್ರತಿಭಟಿಸುವ ಅನಿವಾರ್ಯತೆ ಎದುರಾಗಿದೆ” ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಪಿ ಎಚ್ ಕಾಲೋನಿಯಲ್ಲಿ ವಾಸಿಸುವ ಕುಟುಂಬಗಳಿಗೆ ರೆಡ್ ಕ್ರಾಸ್ ನಿಂದ ಬಂದಿರುವ ಬೇಳೆ ಮತ್ತು ಆಹಾರದ ಕಿಟ್ ಗಳನ್ನು ಕೊಡುತ್ತೇನೆಂದು ಖಚಿತ ಭರವಸೆ ನೀಡಿದ್ದರು. ಆದರೆ ಈಗ ಮೌನ ವಹಿಸಿದ್ದಾರೆ. ಬೇರೆಯವರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ, ಇಲ್ಲಿನ ಜನರನ್ನು ಕತ್ತಲೆಯಲ್ಲಿಡಲಾಗಿದೆ. ಈಗ ಪಿ.ಎಚ್. ಕಾಲೋನಿಯಲ್ಲಿ ಸೋಂಕಿತರು ಇಲ್ಲ. ಹೀಗಾಗಿ ಅವರಿಗೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ಕಳೆದ 14 ದಿನಗಳಿಂದ ತುಮಕೂರು ನಗರದಲ್ಲಿ ಒಂದೂ ಕೊರೊನ ಸೋಂಕಿತ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ದೈಹಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವ್ಯಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...