Homeಮುಖಪುಟಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

ಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

- Advertisement -
- Advertisement -

ಲಾಕ್ ಡೌನ್ ನಿಂದ ಕೆಲಸವಿಲ್ಲ, ಕೂಲಿ ಇಲ್ಲ, ಹಣವಿಲ್ಲ ಏನ್ ಮಾಡೋದು? ಕೇವಲ ಪಡಿತರ ದಾನ್ಯಗಳನ್ನು ನೀಡಿದರೆ ಸಾಕೇ? ಹಾಲು, ತರಕಾರಿಗೆ ಹಣ ಬೇಡವೇ, ನಮ್ಮ ಏರಿಯಾದ ಸೀಲ್‌ಡೌನ್‌ ತೆರವುಗೊಳಿಸಿ ಎಂದು ಪ್ರಶ್ನಿಸಿದ ನೂರಾರು ಮಹಿಳೆಯರು ಮನೆಗಳಿಂದ ಹೊರಬಂದು ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಪ್ರಸಂಗ ತುಮಕೂರಿನಲ್ಲಿ ನಡೆದಿದೆ.

ನಗರದ ಪೂರ್ ಹೌಸ್  ಕಾಲೋನಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಪಿಎಚ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಸೋಂಕಿತ ವ್ಯಕ್ತಿ ಇದೀಗ ಗುಣಮುಖನಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದು ಕಾಲೋನಿಯಲ್ಲಿ ಕ್ವಾರಂಟೈನ್ ನಲ್ಲಿಟ್ಟಿದ್ದ ಎಲ್ಲರಿಗೂ ನೆಗೆಟೀವ್ ಬಂದಿದೆ. ಹೀಗಾಗಿ ಲಾಕ್ ಡೌನ್ ತೆರವುಗೊಳಿಸಿ ಕೆಲಸ ಮಾಡಲು ಅವಕಾಶ ಕೊಡುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದರು.

10ನೇ ವಾರ್ಡ್ ಸೇರಿದಂತೆ ಎಲ್ಲೆಡೆಯೂ ಮೇ 1 ರಿಂದ ಹಾಲು ನಿಲ್ಲಿಸಲಾಗಿದೆ. ಕಾರ್ಪೋರೇಟರ್ ತಮ್ಮ ಸ್ವಂತ ಹಣದಲ್ಲೂ ಕೆಲ ದಿನಗಳು ಹಾಲು ವಿತರಣೆ ಮಾಡಿದರು. ಮನೆಯಲ್ಲಿ ಮಕ್ಕಳಿದ್ದಾರೆ. ಅವರಿಗೆ ಹಾಲು ಇಲ್ಲದೆ ಸುಮ್ಮನಿರಿಸಲು ಆಗುತ್ತಿಲ್ಲ. ಮೊದಲು ಗಂಡಸರಿಗೆ ಕೆಲಸ ಕೊಡಿ. ಅವರು ದುಡಿದು ತಂದು ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ. ಮನೆಯಲ್ಲಿ ತರಕಾರಿ, ಹಾಲಿಗೂ ದುಡ್ಡಿಲ್ಲ ಎಂದು ನೊಂದ ಮಹಿಳೆಯರು ದೂರಿದರು.

‌ಇದರಿಂದ ಕೆರಳಿದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನವೀನ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದಾರೆ. ನೀವು ಗುಂಪುಗೂಡಲು ಅವಕಾಶ ಕೊಟ್ಟಿದ್ಯಾರು? ಒಬ್ಬರಿಗೆ ಪಾಸಿಟಿವ್‌ ಬಂದರೂ ನೀವೆಲ್ಲರೂ ಜವಾಬ್ದಾರರಾಗುತ್ತೀರಿ. ನಿಮಗೇನು ಬೇಕು ನನಗೆ ಹೇಳಿ ಕೊಡಿಸುತ್ತೇನೆ ಎಂದು ಧಮಕಿ ಹಾಕಿದ್ದಾರೆ. ಆದರೆ ಮಹಿಳೆಯರು ಕೇಳುವ ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರ ಇರಲಿಲ್ಲ. ಆಗ ಪೊಲೀಸರು ನೀವು ದಿಢೀರ್ ಪ್ರತಿಭಟನೆ ಮಾಡುತ್ತಿದ್ದೀರಿ. ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಬೆದಿರಿಸುವ ತಂತ್ರ ಮಾಡಿದರು. ಆದರೂ ಮಹಿಳೆಯರು ತಮ್ಮ ನೋವನ್ನು ತೋಡಿಕೊಂಡರು. ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡರು. ಹಾಗಾಗಿ ಪೊಲೀಸರು ಕೂಡ ಮೌನಕ್ಕೆ ಶರಣಾದರು.

ಈ ಕುರಿತು ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್, “ತುಮಕೂರು ನಗರದೆಲ್ಲಡೆ ಲಾಕ್ ಡೌನ್ ಸಡಿಲಗೊಳಿಸಲಾಗಿದೆ. ಎಂ.ಜಿ.ರಸ್ತೆಯಲ್ಲಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೂ ಪಿ.ಎಚ್.ಕಾಲೋನಿಯನ್ನು ಸೀಲ್ ಡೌನ್ ಮಾಡಿ ತಾರತಮ್ಯ ಮಾಡಲಾಗುತ್ತಿದೆ. ಹಾಗಾಗಿ ಮಹಿಳೆಯರು ಪ್ರತಿಭಟಿಸುವ ಅನಿವಾರ್ಯತೆ ಎದುರಾಗಿದೆ” ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಪಿ ಎಚ್ ಕಾಲೋನಿಯಲ್ಲಿ ವಾಸಿಸುವ ಕುಟುಂಬಗಳಿಗೆ ರೆಡ್ ಕ್ರಾಸ್ ನಿಂದ ಬಂದಿರುವ ಬೇಳೆ ಮತ್ತು ಆಹಾರದ ಕಿಟ್ ಗಳನ್ನು ಕೊಡುತ್ತೇನೆಂದು ಖಚಿತ ಭರವಸೆ ನೀಡಿದ್ದರು. ಆದರೆ ಈಗ ಮೌನ ವಹಿಸಿದ್ದಾರೆ. ಬೇರೆಯವರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ, ಇಲ್ಲಿನ ಜನರನ್ನು ಕತ್ತಲೆಯಲ್ಲಿಡಲಾಗಿದೆ. ಈಗ ಪಿ.ಎಚ್. ಕಾಲೋನಿಯಲ್ಲಿ ಸೋಂಕಿತರು ಇಲ್ಲ. ಹೀಗಾಗಿ ಅವರಿಗೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ಕಳೆದ 14 ದಿನಗಳಿಂದ ತುಮಕೂರು ನಗರದಲ್ಲಿ ಒಂದೂ ಕೊರೊನ ಸೋಂಕಿತ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ದೈಹಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವ್ಯಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...