Homeಮುಖಪುಟಮಹಿಳಾ ಮೀಸಲಾತಿ ಮಸೂದೆ: ಕೇಂದ್ರದ ನಡೆಯಲ್ಲಿ ಪಾರದರ್ಶಕತೆ ಕಾಣೆಯಾಗಿದೆ ಎಂದ ಕೆ. ಕವಿತಾ

ಮಹಿಳಾ ಮೀಸಲಾತಿ ಮಸೂದೆ: ಕೇಂದ್ರದ ನಡೆಯಲ್ಲಿ ಪಾರದರ್ಶಕತೆ ಕಾಣೆಯಾಗಿದೆ ಎಂದ ಕೆ. ಕವಿತಾ

- Advertisement -
- Advertisement -

ಸೋಮವಾರ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಈ ಮಸೂದೆಯನ್ನು ತ್ವರಿತವಾಗಿ ಮಂಡನೆ ಮಾಡಿದರೆ, ಅದು ಇಡೀ ದೇಶದ ಮಹಿಳೆಯರಿಗೆ ನೀಡುವ ಗೌರವದ ಸಂಕೇತವಾಗಿರುತ್ತದೆ” ಎಂದು ಭಾರತ ರಾಷ್ಟ್ರೀಯ ಸಮಿತಿಯ(ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಕ್ಯಾಬಿನೆಟ್ ಅನುಮೋದನೆ ನೀಡಿರುವುದು ನಮಗೆ ಸಂತೋಷವಾಗಿದೆ. ಸಂಸತ್ತಿನಲ್ಲಿ ಈ ಮಸೂದೆಯನ್ನು ಶೀಘ್ರದಲ್ಲೇ ಮಂಡಿಸಬಹುದು ಎಂದು ಭಾವಿಸುತ್ತೇವೆ. ಆದರೆ ಮಸೂದೆಯ ಸ್ವರೂಪದ ಬಗ್ಗೆ ಕೇಂದ್ರವು ಬಹಿರಂಗವಾಗಿ ಚರ್ಚಿಸುತ್ತಿಲ್ಲ. ಇದರಿಂದ ಸರ್ಕಾರದಲ್ಲಿ ಪಾರದರ್ಶಕತೆ ಕಾಣೆಯಾಗಿದೆ ಎಂಬ ಆತಂಕವೂ ಇದೆ” ಎಂದು ಹೇಳಿದರು.

”ಸಧ್ಯ ಕೇಂದ್ರ ಸರ್ಕಾರವು ಪೂರ್ಣ ಬಹುಮತ ಹೊಂದಿದ್ದು, ಯಾವುದೇ ಬೆಂಬಲವಿಲ್ಲದಿದ್ದರೂ ಸ್ವತಂತ್ರವಾಗಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬಹುದು. ಇಂತಹ ಸಮಯದಲ್ಲಿ ರಾಜಕೀಯ ಹಿತಾಸಕ್ತಿಗಿಂತ ಮಹಿಳೆಯನ್ನು ಪ್ರೋತ್ಸಾಹಿಸುವುದು ಮುಖ್ಯ” ಎಂದು ಕವಿತಾ ಹೇಳಿದ್ದಾರೆ.

”ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ನಿರ್ಣಯದ ಮೂಲಕ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು. ಈ ಮೂಲಕ ದೇಶದ ಮಹಿಳೆಯರಿಗೆ ನೀಡುವ ಗೌರವದ ಸಂಕೇತ ಎಂದರಲ್ಲದೆ, ಮಸೂದೆಯನ್ನು ಯಾವ ಸ್ವರೂಪದಲ್ಲಿ ಪರಿಚಯಿಸುತ್ತಾರೆ ಎನ್ನುವುದರ ಮೇಲೆ ನಾವು ಅದನ್ನು ಬೆಂಬಲಿಸುತ್ತೇವೆ” ಎಂದು ಕವಿತಾ ತಿಳಿಸಿದ್ದಾರೆ.

”ಮಹಿಳಾ ಮೀಸಲಾತಿ ಮಸೂದೆಗೆ ಬಿಆರ್‌ಎಸ್ ಬೆಂಬಲ ನೀಡಲಿದೆ. ಶೇ.33ರ ಒಬಿಸಿ ಮೀಸಲಾತಿ ಮಸೂದೆಯನ್ನು ಸಹ ಪರಿಚಯಿಸಬೇಕು ಎಂದು ಒತ್ತಾಯಿಸಿದ್ದೇವೆ. ಸರ್ಕಾರ ಈ ನಿಟ್ಟಿನಲ್ಲಿ ಕೂಡ ಕ್ರಮ ಕೈಗೊಳ್ಳುತ್ತದೆ ಎಂದು ನಾನು ಕವಿತಾ ಭಾವಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ಮಂಡನೆ ಕುರಿತು ಟ್ವೀಟ್ ಮಾಡಿ, ಬಳಿಕ ಡಿಲೀಟ್ ಮಾಡಿದ ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...