Homeಮುಖಪುಟಮಹಿಳಾ ಮೀಸಲಾತಿ ಬಿಲ್‌; ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ಮಹಿಳಾ ಮೀಸಲಾತಿ ಬಿಲ್‌; ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲು ಸಾಧ್ಯವಾಗುವ ‘ನಾರಿ ಶಕ್ತಿ ವಂದನ್ ಕಾಯಿದೆ-2023’ನ್ನು ತಕ್ಷಣವೇ ಜಾರಿಗೆ ತರುವಂತೆ ಕೋರಿ ಕಾಂಗ್ರೆಸ್ ಮುಖಂಡರೊಬ್ಬರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ.

ಈ ಕುರಿತು ಸಮಗ್ರ ಉತ್ತರವನ್ನು ಸಲ್ಲಿಸಲು ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ಬೇಕು ಎಂದು ಸರಕಾರದ ಪರ ವಕೀಲ ಕನು ಅಗರವಾಲ್ ಹೇಳಿದ ನಂತರ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಕೇಂದ್ರಕ್ಕೆ 2 ವಾರಗಳ ಕಾಲಾವಕಾಶ ನೀಡಿದೆ.

ಅರ್ಜಿದಾರ ಜಯಾ ಠಾಕೂರ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಸ್ ಸಿಂಗ್, ಸಾರ್ವತ್ರಿಕ ಚುನಾವಣೆಗೂ ಮುನ್ನ ಕಾನೂನು ಜಾರಿಯಾಗುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಯಾಲಯವು ಈ ಹಂತದಲ್ಲಿ ನಿರ್ದೇಶನವನ್ನು ರವಾನಿಸಲು ಸಾಧ್ಯವಿಲ್ಲ, ಕೇಂದ್ರದಿಂದ ಪ್ರತಿಕ್ರಿಯಿಸುವಂತೆ ಕೇಳಲಾಗಿದೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಷಯದ ಬಗ್ಗೆ ಅರ್ಜಿ ಸಲ್ಲಿಸಲು ಬಯಸುವುದಾಗಿ ಹೇಳಿದಾಗ, ಪೀಠವು ಅವರ ಮನವಿಯು ಹೊಸ ವಿಷಯವಾಗಿರುವುದರಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಇರುವ ಪೀಠದ ಎದುರು ಅರ್ಜಿ ಸಲ್ಲಿಸುವಂತೆ ಸೂಚಿಸಿದರು. ಈ ಕುರಿತ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.

ಜನವರಿ 16 ರಂದು ಕೇಂದ್ರದ ಪರವಾಗಿ ಹಾಜರಾಗಬೇಕಾದ ವಕೀಲರು ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜನವರಿ 22ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತ್ತು.

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲ್ಲಿ  ಅಂಗೀಕಾರಗೊಂಡಿತ್ತು. ಇದರ ಅನ್ವಯ ಮುಂದಿನ 15 ವರ್ಷಗಳವರೆಗೆ ಕಾಯ್ದೆ ಜಾರಿಯಲ್ಲಿರಲಿದೆ. ಇದನ್ನು ಅಗತ್ಯವಿದ್ದಲ್ಲಿ ಈ ಅವಧಿಯನ್ನು ವಿಸ್ತರಿಸುವ ಅಧಿಕಾರ ಸಂಸತ್ತಿಗೆ ಇದೆ. ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಹಿಳೆಯರಿಗೆ ಒಳ ಮೀಸಲಾತಿ ನೀಡುವ ಜೊತೆಗೆ ಹಿಂದುಳಿದ ವರ್ಗಗಳಿಗೂ ಮೀಸಲಾತಿ ವಿಸ್ತರಿಸುವಂತೆ ಒತ್ತಾಯಿಸಿದ್ದರು.

ನವೆಂಬರ್ 3, 2023 ರಂದು ಸುಪ್ರೀಂಕೋರ್ಟ್‌ ಮಹಿಳಾ ಮೀಸಲಾತಿ ಕಾನೂನು ಜನಗಣತಿಯ ನಂತರ ಜಾರಿಗೆ ಬರಲಿದೆ ಎಂದು ಹೇಳುವುದು ಬಹಳ ಕಷ್ಟದ ವಿಚಾರ ಎಂದು ಹೇಳಿತ್ತು. ಮಾಹಿತಿ ಪ್ರಕಾರ ಲೋಕಸಭೆಯಲ್ಲಿ ಒಟ್ಟು ಮಹಿಳಾ ಸಂಸದರ ಸಂಖ್ಯೆ ಶೇ 15ರಷ್ಟಿದ್ದಾರೆ. ಹಲವು ರಾಜ್ಯಗಳ ವಿಧಾನಸಭೆಯಲ್ಲಿ ಈ ಸಂಖ್ಯೆ ಶೇ 10ಕ್ಕಿಂತಲೂ ಕಡಿಮೆ ಎನ್ನುವುದನ್ನು ಅಂಕಿ-ಅಂಶಗಳು ತೋರಿಸುತ್ತದೆ.

ಮಸೂದೆಯು ಲೋಕಸಭೆ ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡುತ್ತದೆ, ಆದರೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ತುಗಳಲ್ಲಿ ಈ ಮೀಸಲಾತಿ ಇರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಮೀಸಲಾದ ಮೂರನೇ ಒಂದು ಭಾಗದಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ ಸೇರಿ ಹಲವು ಅಂಶಗಳನ್ನು ಬಿಲ್‌ ಹೊಂದಿದೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯದಲ್ಲಿ ಮಹಿಳೆಯರು ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಸರ್ಕಾರ ಹೇಳಿದೆ. ಪ್ರಸ್ತಾವಿತ ಮಸೂದೆಯು ಸುಮಾರು 27 ವರ್ಷಗಳಿಂದ ಬಾಕಿ ಉಳಿದಿತ್ತು.

ಇದನ್ನು ಓದಿ: ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...