Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವಂತಹ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಚಿಂತಾಮಣಿ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮಹಿಳೆಯರು ಜಾಗೃತಿ ಜಾಥಾ ನಡೆಸಿದ್ದಾರೆ.

ಮಕ್ಕಾಂ ಕರ್ನಾಟಕ, ನಮ್ಮೂರ ಭೂಮಿ ನಮಗಿರಲಿ, ಐಕ್ಯ ಹೋರಾಟ ಸಮಿತಿಗಳ ವತಿಯಿಂದ ಮಹಿಳಾ ರೈತ ದಿನಾಚರಣೆಯ ಅಂಗವಾಗಿ ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ರೈತ ವಿರೋಧಿ ಕಾಯ್ದೆಗಳಿಗೆ ಮಹಿಳಾ ರೈತರು ಪ್ರತಿರೋಧ ವ್ಯಕ್ತಪಡಿಸಿದರು.

ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಮಾತನಾಡಿ, ಭಾರತದ ಸಂವಿಧಾನವು ಭೂ ಸುಧಾರಣೆಗೆ ಸಾಕಷ್ಟು ಮಹತ್ವ ನೀಡಿದೆ. ಉತ್ಪಾದನಾ ಮೂಲವಾದ ಭೂಮಿಯ ಒಡೆತನ ಸಮಾಜದ ಪ್ರತಿಯೊಬ್ಬರ ಅವಶ್ಯಕತೆಯನ್ನು ಈಡೇರಿಸುವಂತಿರಬೇಕು. ಅದು ಕೆಲವೇ ವ್ಯಕ್ತಿಗಳ ಕೈಯಲ್ಲಿ ಕೇಂದ್ರೀಕೃತವಾಗಬಾರದು ಎಂದು ಸ್ಪಷ್ಟಪಡಿಸಿದೆ ಎಂದರು.

ಈ ಹಿಂದೆ ಕರ್ನಾಟಕದಲ್ಲಿ ಉಳುವವನೇ ಭೂ ಒಡೆಯ ಎಂಬಂತಹ ಕಾನೂನು ತರುವ ಮೂಲಕ ಭೂ ರಹಿತ ದಲಿತ, ಹಿಂದುಳಿದ ವರ್ಗದ ಜನರಿಗೆ ಭೂಮಿಯನ್ನು ನೀಡಲಾಗಿತ್ತು. ಇದೀಗ ಆ ಕಾಯ್ದೆಗೆ ತಿದ್ದುಪಡಿ ತಂದು ಬಡವರ, ದಲಿತರ, ಹಿಂದುಳಿದ ವರ್ಗದ ಜನರ ಬಳಿಯಿರುವ ಭೂಮಿಯನ್ನು ಕಿತ್ತು ಖಾಸಗಿಯವರ ಕೈಗೆ ನೀಡಲು ಸರಕಾರ ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಭೂ ಸುಧಾರಣೆ ಕಾಯ್ದೆಯಲ್ಲಿ ಅಧಿಕ ವಾರ್ಷಿಕ ಆದಾಯ ಉಳ್ಳವರು ಭೂಮಿ ಖರೀದಿ ಮಾಡಲು ಅವಕಾಶವಿರಲಿಲ್ಲ. ಅಲ್ಲದೆ, ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿ ಮಾಡಲು ಅವಕಾಶವಿರಲಿಲ್ಲ. ಯಾರೇ ಆಗಲಿ ಭೂಮಿ ಖರೀದಿ ಮಾಡಬೇಕು ಎಂದುಕೊಂಡಲ್ಲಿ ಅದನ್ನು ಸರಕಾರಕ್ಕೆ ತಿಳಿಸಬೇಕಿತ್ತು. ಆದರೆ, ಈಗ ತಂದಿರುವ ತಿದ್ದುಪಡಿಯಲ್ಲಿ ಇವೆಲ್ಲವನ್ನೂ ಬದಲಿಸಲಾಗಿದೆ. ಈಗ ಯಾರು ಬೇಕಾದರೂ ಭೂಮಿ ಖರೀದಿ ಮಾಡಬಹುದು ಎಂದು ಹೇಳಲಾಗಿದೆ. ಈ ಮೂಲಕ ಬಡವರು ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಮಾರಿಕೊಳ್ಳುವಂತೆ ಮಾಡಲಾಗಿದೆ. ಹೀಗಾಗಿ, ಇದು ರೈತ ವಿರೋಧಿ ಕಾಯ್ದೆಯಾಗಿದ್ದು, ಇದನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಮಿತಿಯ ಸುಮಾರವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸದನದಲ್ಲಿ ಸೂಕ್ತ ಚರ್ಚೆ ನಡೆಸದೆ ಏಕಾಏಕಿ ಕಾಯ್ದೆಗಳಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಅಲ್ಲದೆ, ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಭಾದಿಸುತ್ತಿರುವಂತಹ ಸಂದರ್ಭದಲ್ಲಿಯೇ ಸರಕಾರ ಇದನ್ನು ಚರ್ಚೆಯಿಲ್ಲದೇ ಜಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಆರ್ಥಿಕವಾಗಿ, ಸಾಮಾಜಿಕವಾಗಿ ದಿವಾಳಿಯಾಗಿರುವ ಸಣ್ಣ ರೈತರು ಹಣದಾಸೆಗೆ ಅಥವಾ ತಮ್ಮ ಕಷ್ಟಗಳ ನಿವಾರಣೆ ಅನಿವಾರ್ಯತೆಗೆ ತಮ್ಮಲ್ಲಿರುವ ಅಲ್ಪಸ್ವಲ್ಪ ಜಮೀನನ್ನು ಮಾರಿಕೊಳ್ಳುತ್ತಾರೆ. ಈ ರೀತಿ ಭೂಮಿ ಕಳೆದುಕೊಂಡ ಲಕ್ಷಾಂತರ ಜನರಿಗೆ ಯಾವ ಕೆಲಸ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ಈ ಹಿಂದೆ ದೇವನಹಳ್ಳಿ ಬಳಿ ವಿಮಾನ ನಿಲ್ದಾಣ ನಿರ್ಮಿಸಲು ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು. ಆ ನಂತರ ಅಲ್ಲಿನ ಕೃಷಿಕರು ಈಗ ದಿವಾಳಿಯಾಗಿದ್ದು, ಕೆಲಸವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದೊಡ್ಡ ಬಂಡವಾಳಿಗರು, ಭೂ ಮಾಫಿಯಾಗಳು, ಕಾರ್ಪೋರೇಟ್ ಸಂಸ್ಥೆಗಳು ರೈತರಿಂದ ಖರೀದಿ ಮಾಡಿದ ಭೂಮಿಯನ್ನು ರಿಯಲ್ ಎಸ್ಟೇಟ್, ರೆಸಾರ್ಟ್, ಫಾರ್ಮ್ ಹೌಸ್, ಇತ್ಯಾದಿಗಳಿಗೆ ಬಳಸುತ್ತಾರೆ. ಒಟ್ಟಿನಲ್ಲಿ ರೈತರು ತಮ್ಮ ಭೂಮಿ ಕಳೆದುಕೊಂಡು ತಮ್ಮದೇ ಜಮೀನಿನಲ್ಲಿ ಕೂಲಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ದೋಮಲಪಲ್ಲಿ, ಬಂಡಕೋಟೆ, ನಾಯನಹಳ್ಳಿ, ಮಹಮದ್‌ಪುರ, ನಾಗಸಂದ್ರಗಡ್ಡೆ, ಧನಮಿಟ್ಟೇನಹಳ್ಳಿ, ದ್ವಾರಪ್ಪಲ್ಲಿ, ಚೌಡದೇನಹಳ್ಳಿ, ಶೆಟ್ಟಿಹಳ್ಳಿ, ಭಕ್ತರಹಳ್ಳಿ, ಮೈಲಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಹಿಳಾ ರೈತರು ಸಭೆ ಸೇರುವ ಮೂಲಕ ಕೇಂದ್ರ ಸರಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪರವಾಗಿ ರೇಣುಕ.ಸಿ, ನಾಗೇಶ್, ಅಂಬರೀಶ್, ಬಾಬುರೆಡ್ಡಿ, ನಾಗರಾಜು, ಚೌಡಪ್ಪ, ಹರೀಶ್, ದೇವಪ್ಪ, ನರಸಿಂಹಮೂರ್ತಿ ಸೇರಿದಂತೆ ಹಲವಾರು ಕಾರ್ಯಕರ್ತರು ಹಳ್ಳಿಗಳಲ್ಲಿ ನಡೆದ ಜಾಗೃತಿ ಸಭೆಗಳಲ್ಲಿ ಮಾತನಾಡಿದರು.


ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...