Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವಂತಹ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಚಿಂತಾಮಣಿ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮಹಿಳೆಯರು ಜಾಗೃತಿ ಜಾಥಾ ನಡೆಸಿದ್ದಾರೆ.

ಮಕ್ಕಾಂ ಕರ್ನಾಟಕ, ನಮ್ಮೂರ ಭೂಮಿ ನಮಗಿರಲಿ, ಐಕ್ಯ ಹೋರಾಟ ಸಮಿತಿಗಳ ವತಿಯಿಂದ ಮಹಿಳಾ ರೈತ ದಿನಾಚರಣೆಯ ಅಂಗವಾಗಿ ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ರೈತ ವಿರೋಧಿ ಕಾಯ್ದೆಗಳಿಗೆ ಮಹಿಳಾ ರೈತರು ಪ್ರತಿರೋಧ ವ್ಯಕ್ತಪಡಿಸಿದರು.

ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಮಾತನಾಡಿ, ಭಾರತದ ಸಂವಿಧಾನವು ಭೂ ಸುಧಾರಣೆಗೆ ಸಾಕಷ್ಟು ಮಹತ್ವ ನೀಡಿದೆ. ಉತ್ಪಾದನಾ ಮೂಲವಾದ ಭೂಮಿಯ ಒಡೆತನ ಸಮಾಜದ ಪ್ರತಿಯೊಬ್ಬರ ಅವಶ್ಯಕತೆಯನ್ನು ಈಡೇರಿಸುವಂತಿರಬೇಕು. ಅದು ಕೆಲವೇ ವ್ಯಕ್ತಿಗಳ ಕೈಯಲ್ಲಿ ಕೇಂದ್ರೀಕೃತವಾಗಬಾರದು ಎಂದು ಸ್ಪಷ್ಟಪಡಿಸಿದೆ ಎಂದರು.

ಈ ಹಿಂದೆ ಕರ್ನಾಟಕದಲ್ಲಿ ಉಳುವವನೇ ಭೂ ಒಡೆಯ ಎಂಬಂತಹ ಕಾನೂನು ತರುವ ಮೂಲಕ ಭೂ ರಹಿತ ದಲಿತ, ಹಿಂದುಳಿದ ವರ್ಗದ ಜನರಿಗೆ ಭೂಮಿಯನ್ನು ನೀಡಲಾಗಿತ್ತು. ಇದೀಗ ಆ ಕಾಯ್ದೆಗೆ ತಿದ್ದುಪಡಿ ತಂದು ಬಡವರ, ದಲಿತರ, ಹಿಂದುಳಿದ ವರ್ಗದ ಜನರ ಬಳಿಯಿರುವ ಭೂಮಿಯನ್ನು ಕಿತ್ತು ಖಾಸಗಿಯವರ ಕೈಗೆ ನೀಡಲು ಸರಕಾರ ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಭೂ ಸುಧಾರಣೆ ಕಾಯ್ದೆಯಲ್ಲಿ ಅಧಿಕ ವಾರ್ಷಿಕ ಆದಾಯ ಉಳ್ಳವರು ಭೂಮಿ ಖರೀದಿ ಮಾಡಲು ಅವಕಾಶವಿರಲಿಲ್ಲ. ಅಲ್ಲದೆ, ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿ ಮಾಡಲು ಅವಕಾಶವಿರಲಿಲ್ಲ. ಯಾರೇ ಆಗಲಿ ಭೂಮಿ ಖರೀದಿ ಮಾಡಬೇಕು ಎಂದುಕೊಂಡಲ್ಲಿ ಅದನ್ನು ಸರಕಾರಕ್ಕೆ ತಿಳಿಸಬೇಕಿತ್ತು. ಆದರೆ, ಈಗ ತಂದಿರುವ ತಿದ್ದುಪಡಿಯಲ್ಲಿ ಇವೆಲ್ಲವನ್ನೂ ಬದಲಿಸಲಾಗಿದೆ. ಈಗ ಯಾರು ಬೇಕಾದರೂ ಭೂಮಿ ಖರೀದಿ ಮಾಡಬಹುದು ಎಂದು ಹೇಳಲಾಗಿದೆ. ಈ ಮೂಲಕ ಬಡವರು ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಮಾರಿಕೊಳ್ಳುವಂತೆ ಮಾಡಲಾಗಿದೆ. ಹೀಗಾಗಿ, ಇದು ರೈತ ವಿರೋಧಿ ಕಾಯ್ದೆಯಾಗಿದ್ದು, ಇದನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಮಿತಿಯ ಸುಮಾರವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸದನದಲ್ಲಿ ಸೂಕ್ತ ಚರ್ಚೆ ನಡೆಸದೆ ಏಕಾಏಕಿ ಕಾಯ್ದೆಗಳಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಅಲ್ಲದೆ, ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಭಾದಿಸುತ್ತಿರುವಂತಹ ಸಂದರ್ಭದಲ್ಲಿಯೇ ಸರಕಾರ ಇದನ್ನು ಚರ್ಚೆಯಿಲ್ಲದೇ ಜಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಆರ್ಥಿಕವಾಗಿ, ಸಾಮಾಜಿಕವಾಗಿ ದಿವಾಳಿಯಾಗಿರುವ ಸಣ್ಣ ರೈತರು ಹಣದಾಸೆಗೆ ಅಥವಾ ತಮ್ಮ ಕಷ್ಟಗಳ ನಿವಾರಣೆ ಅನಿವಾರ್ಯತೆಗೆ ತಮ್ಮಲ್ಲಿರುವ ಅಲ್ಪಸ್ವಲ್ಪ ಜಮೀನನ್ನು ಮಾರಿಕೊಳ್ಳುತ್ತಾರೆ. ಈ ರೀತಿ ಭೂಮಿ ಕಳೆದುಕೊಂಡ ಲಕ್ಷಾಂತರ ಜನರಿಗೆ ಯಾವ ಕೆಲಸ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ಈ ಹಿಂದೆ ದೇವನಹಳ್ಳಿ ಬಳಿ ವಿಮಾನ ನಿಲ್ದಾಣ ನಿರ್ಮಿಸಲು ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು. ಆ ನಂತರ ಅಲ್ಲಿನ ಕೃಷಿಕರು ಈಗ ದಿವಾಳಿಯಾಗಿದ್ದು, ಕೆಲಸವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದೊಡ್ಡ ಬಂಡವಾಳಿಗರು, ಭೂ ಮಾಫಿಯಾಗಳು, ಕಾರ್ಪೋರೇಟ್ ಸಂಸ್ಥೆಗಳು ರೈತರಿಂದ ಖರೀದಿ ಮಾಡಿದ ಭೂಮಿಯನ್ನು ರಿಯಲ್ ಎಸ್ಟೇಟ್, ರೆಸಾರ್ಟ್, ಫಾರ್ಮ್ ಹೌಸ್, ಇತ್ಯಾದಿಗಳಿಗೆ ಬಳಸುತ್ತಾರೆ. ಒಟ್ಟಿನಲ್ಲಿ ರೈತರು ತಮ್ಮ ಭೂಮಿ ಕಳೆದುಕೊಂಡು ತಮ್ಮದೇ ಜಮೀನಿನಲ್ಲಿ ಕೂಲಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ದೋಮಲಪಲ್ಲಿ, ಬಂಡಕೋಟೆ, ನಾಯನಹಳ್ಳಿ, ಮಹಮದ್‌ಪುರ, ನಾಗಸಂದ್ರಗಡ್ಡೆ, ಧನಮಿಟ್ಟೇನಹಳ್ಳಿ, ದ್ವಾರಪ್ಪಲ್ಲಿ, ಚೌಡದೇನಹಳ್ಳಿ, ಶೆಟ್ಟಿಹಳ್ಳಿ, ಭಕ್ತರಹಳ್ಳಿ, ಮೈಲಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಹಿಳಾ ರೈತರು ಸಭೆ ಸೇರುವ ಮೂಲಕ ಕೇಂದ್ರ ಸರಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪರವಾಗಿ ರೇಣುಕ.ಸಿ, ನಾಗೇಶ್, ಅಂಬರೀಶ್, ಬಾಬುರೆಡ್ಡಿ, ನಾಗರಾಜು, ಚೌಡಪ್ಪ, ಹರೀಶ್, ದೇವಪ್ಪ, ನರಸಿಂಹಮೂರ್ತಿ ಸೇರಿದಂತೆ ಹಲವಾರು ಕಾರ್ಯಕರ್ತರು ಹಳ್ಳಿಗಳಲ್ಲಿ ನಡೆದ ಜಾಗೃತಿ ಸಭೆಗಳಲ್ಲಿ ಮಾತನಾಡಿದರು.


ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...