Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವಂತಹ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಚಿಂತಾಮಣಿ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮಹಿಳೆಯರು ಜಾಗೃತಿ ಜಾಥಾ ನಡೆಸಿದ್ದಾರೆ.

ಮಕ್ಕಾಂ ಕರ್ನಾಟಕ, ನಮ್ಮೂರ ಭೂಮಿ ನಮಗಿರಲಿ, ಐಕ್ಯ ಹೋರಾಟ ಸಮಿತಿಗಳ ವತಿಯಿಂದ ಮಹಿಳಾ ರೈತ ದಿನಾಚರಣೆಯ ಅಂಗವಾಗಿ ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ರೈತ ವಿರೋಧಿ ಕಾಯ್ದೆಗಳಿಗೆ ಮಹಿಳಾ ರೈತರು ಪ್ರತಿರೋಧ ವ್ಯಕ್ತಪಡಿಸಿದರು.

ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಮಾತನಾಡಿ, ಭಾರತದ ಸಂವಿಧಾನವು ಭೂ ಸುಧಾರಣೆಗೆ ಸಾಕಷ್ಟು ಮಹತ್ವ ನೀಡಿದೆ. ಉತ್ಪಾದನಾ ಮೂಲವಾದ ಭೂಮಿಯ ಒಡೆತನ ಸಮಾಜದ ಪ್ರತಿಯೊಬ್ಬರ ಅವಶ್ಯಕತೆಯನ್ನು ಈಡೇರಿಸುವಂತಿರಬೇಕು. ಅದು ಕೆಲವೇ ವ್ಯಕ್ತಿಗಳ ಕೈಯಲ್ಲಿ ಕೇಂದ್ರೀಕೃತವಾಗಬಾರದು ಎಂದು ಸ್ಪಷ್ಟಪಡಿಸಿದೆ ಎಂದರು.

ಈ ಹಿಂದೆ ಕರ್ನಾಟಕದಲ್ಲಿ ಉಳುವವನೇ ಭೂ ಒಡೆಯ ಎಂಬಂತಹ ಕಾನೂನು ತರುವ ಮೂಲಕ ಭೂ ರಹಿತ ದಲಿತ, ಹಿಂದುಳಿದ ವರ್ಗದ ಜನರಿಗೆ ಭೂಮಿಯನ್ನು ನೀಡಲಾಗಿತ್ತು. ಇದೀಗ ಆ ಕಾಯ್ದೆಗೆ ತಿದ್ದುಪಡಿ ತಂದು ಬಡವರ, ದಲಿತರ, ಹಿಂದುಳಿದ ವರ್ಗದ ಜನರ ಬಳಿಯಿರುವ ಭೂಮಿಯನ್ನು ಕಿತ್ತು ಖಾಸಗಿಯವರ ಕೈಗೆ ನೀಡಲು ಸರಕಾರ ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಭೂ ಸುಧಾರಣೆ ಕಾಯ್ದೆಯಲ್ಲಿ ಅಧಿಕ ವಾರ್ಷಿಕ ಆದಾಯ ಉಳ್ಳವರು ಭೂಮಿ ಖರೀದಿ ಮಾಡಲು ಅವಕಾಶವಿರಲಿಲ್ಲ. ಅಲ್ಲದೆ, ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿ ಮಾಡಲು ಅವಕಾಶವಿರಲಿಲ್ಲ. ಯಾರೇ ಆಗಲಿ ಭೂಮಿ ಖರೀದಿ ಮಾಡಬೇಕು ಎಂದುಕೊಂಡಲ್ಲಿ ಅದನ್ನು ಸರಕಾರಕ್ಕೆ ತಿಳಿಸಬೇಕಿತ್ತು. ಆದರೆ, ಈಗ ತಂದಿರುವ ತಿದ್ದುಪಡಿಯಲ್ಲಿ ಇವೆಲ್ಲವನ್ನೂ ಬದಲಿಸಲಾಗಿದೆ. ಈಗ ಯಾರು ಬೇಕಾದರೂ ಭೂಮಿ ಖರೀದಿ ಮಾಡಬಹುದು ಎಂದು ಹೇಳಲಾಗಿದೆ. ಈ ಮೂಲಕ ಬಡವರು ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಮಾರಿಕೊಳ್ಳುವಂತೆ ಮಾಡಲಾಗಿದೆ. ಹೀಗಾಗಿ, ಇದು ರೈತ ವಿರೋಧಿ ಕಾಯ್ದೆಯಾಗಿದ್ದು, ಇದನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಮಿತಿಯ ಸುಮಾರವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸದನದಲ್ಲಿ ಸೂಕ್ತ ಚರ್ಚೆ ನಡೆಸದೆ ಏಕಾಏಕಿ ಕಾಯ್ದೆಗಳಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಅಲ್ಲದೆ, ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಭಾದಿಸುತ್ತಿರುವಂತಹ ಸಂದರ್ಭದಲ್ಲಿಯೇ ಸರಕಾರ ಇದನ್ನು ಚರ್ಚೆಯಿಲ್ಲದೇ ಜಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಆರ್ಥಿಕವಾಗಿ, ಸಾಮಾಜಿಕವಾಗಿ ದಿವಾಳಿಯಾಗಿರುವ ಸಣ್ಣ ರೈತರು ಹಣದಾಸೆಗೆ ಅಥವಾ ತಮ್ಮ ಕಷ್ಟಗಳ ನಿವಾರಣೆ ಅನಿವಾರ್ಯತೆಗೆ ತಮ್ಮಲ್ಲಿರುವ ಅಲ್ಪಸ್ವಲ್ಪ ಜಮೀನನ್ನು ಮಾರಿಕೊಳ್ಳುತ್ತಾರೆ. ಈ ರೀತಿ ಭೂಮಿ ಕಳೆದುಕೊಂಡ ಲಕ್ಷಾಂತರ ಜನರಿಗೆ ಯಾವ ಕೆಲಸ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ಈ ಹಿಂದೆ ದೇವನಹಳ್ಳಿ ಬಳಿ ವಿಮಾನ ನಿಲ್ದಾಣ ನಿರ್ಮಿಸಲು ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು. ಆ ನಂತರ ಅಲ್ಲಿನ ಕೃಷಿಕರು ಈಗ ದಿವಾಳಿಯಾಗಿದ್ದು, ಕೆಲಸವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದೊಡ್ಡ ಬಂಡವಾಳಿಗರು, ಭೂ ಮಾಫಿಯಾಗಳು, ಕಾರ್ಪೋರೇಟ್ ಸಂಸ್ಥೆಗಳು ರೈತರಿಂದ ಖರೀದಿ ಮಾಡಿದ ಭೂಮಿಯನ್ನು ರಿಯಲ್ ಎಸ್ಟೇಟ್, ರೆಸಾರ್ಟ್, ಫಾರ್ಮ್ ಹೌಸ್, ಇತ್ಯಾದಿಗಳಿಗೆ ಬಳಸುತ್ತಾರೆ. ಒಟ್ಟಿನಲ್ಲಿ ರೈತರು ತಮ್ಮ ಭೂಮಿ ಕಳೆದುಕೊಂಡು ತಮ್ಮದೇ ಜಮೀನಿನಲ್ಲಿ ಕೂಲಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ದೋಮಲಪಲ್ಲಿ, ಬಂಡಕೋಟೆ, ನಾಯನಹಳ್ಳಿ, ಮಹಮದ್‌ಪುರ, ನಾಗಸಂದ್ರಗಡ್ಡೆ, ಧನಮಿಟ್ಟೇನಹಳ್ಳಿ, ದ್ವಾರಪ್ಪಲ್ಲಿ, ಚೌಡದೇನಹಳ್ಳಿ, ಶೆಟ್ಟಿಹಳ್ಳಿ, ಭಕ್ತರಹಳ್ಳಿ, ಮೈಲಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಹಿಳಾ ರೈತರು ಸಭೆ ಸೇರುವ ಮೂಲಕ ಕೇಂದ್ರ ಸರಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪರವಾಗಿ ರೇಣುಕ.ಸಿ, ನಾಗೇಶ್, ಅಂಬರೀಶ್, ಬಾಬುರೆಡ್ಡಿ, ನಾಗರಾಜು, ಚೌಡಪ್ಪ, ಹರೀಶ್, ದೇವಪ್ಪ, ನರಸಿಂಹಮೂರ್ತಿ ಸೇರಿದಂತೆ ಹಲವಾರು ಕಾರ್ಯಕರ್ತರು ಹಳ್ಳಿಗಳಲ್ಲಿ ನಡೆದ ಜಾಗೃತಿ ಸಭೆಗಳಲ್ಲಿ ಮಾತನಾಡಿದರು.


ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...