Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವಂತಹ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಚಿಂತಾಮಣಿ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮಹಿಳೆಯರು ಜಾಗೃತಿ ಜಾಥಾ ನಡೆಸಿದ್ದಾರೆ.

ಮಕ್ಕಾಂ ಕರ್ನಾಟಕ, ನಮ್ಮೂರ ಭೂಮಿ ನಮಗಿರಲಿ, ಐಕ್ಯ ಹೋರಾಟ ಸಮಿತಿಗಳ ವತಿಯಿಂದ ಮಹಿಳಾ ರೈತ ದಿನಾಚರಣೆಯ ಅಂಗವಾಗಿ ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ರೈತ ವಿರೋಧಿ ಕಾಯ್ದೆಗಳಿಗೆ ಮಹಿಳಾ ರೈತರು ಪ್ರತಿರೋಧ ವ್ಯಕ್ತಪಡಿಸಿದರು.

ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಮಾತನಾಡಿ, ಭಾರತದ ಸಂವಿಧಾನವು ಭೂ ಸುಧಾರಣೆಗೆ ಸಾಕಷ್ಟು ಮಹತ್ವ ನೀಡಿದೆ. ಉತ್ಪಾದನಾ ಮೂಲವಾದ ಭೂಮಿಯ ಒಡೆತನ ಸಮಾಜದ ಪ್ರತಿಯೊಬ್ಬರ ಅವಶ್ಯಕತೆಯನ್ನು ಈಡೇರಿಸುವಂತಿರಬೇಕು. ಅದು ಕೆಲವೇ ವ್ಯಕ್ತಿಗಳ ಕೈಯಲ್ಲಿ ಕೇಂದ್ರೀಕೃತವಾಗಬಾರದು ಎಂದು ಸ್ಪಷ್ಟಪಡಿಸಿದೆ ಎಂದರು.

ಈ ಹಿಂದೆ ಕರ್ನಾಟಕದಲ್ಲಿ ಉಳುವವನೇ ಭೂ ಒಡೆಯ ಎಂಬಂತಹ ಕಾನೂನು ತರುವ ಮೂಲಕ ಭೂ ರಹಿತ ದಲಿತ, ಹಿಂದುಳಿದ ವರ್ಗದ ಜನರಿಗೆ ಭೂಮಿಯನ್ನು ನೀಡಲಾಗಿತ್ತು. ಇದೀಗ ಆ ಕಾಯ್ದೆಗೆ ತಿದ್ದುಪಡಿ ತಂದು ಬಡವರ, ದಲಿತರ, ಹಿಂದುಳಿದ ವರ್ಗದ ಜನರ ಬಳಿಯಿರುವ ಭೂಮಿಯನ್ನು ಕಿತ್ತು ಖಾಸಗಿಯವರ ಕೈಗೆ ನೀಡಲು ಸರಕಾರ ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಭೂ ಸುಧಾರಣೆ ಕಾಯ್ದೆಯಲ್ಲಿ ಅಧಿಕ ವಾರ್ಷಿಕ ಆದಾಯ ಉಳ್ಳವರು ಭೂಮಿ ಖರೀದಿ ಮಾಡಲು ಅವಕಾಶವಿರಲಿಲ್ಲ. ಅಲ್ಲದೆ, ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿ ಮಾಡಲು ಅವಕಾಶವಿರಲಿಲ್ಲ. ಯಾರೇ ಆಗಲಿ ಭೂಮಿ ಖರೀದಿ ಮಾಡಬೇಕು ಎಂದುಕೊಂಡಲ್ಲಿ ಅದನ್ನು ಸರಕಾರಕ್ಕೆ ತಿಳಿಸಬೇಕಿತ್ತು. ಆದರೆ, ಈಗ ತಂದಿರುವ ತಿದ್ದುಪಡಿಯಲ್ಲಿ ಇವೆಲ್ಲವನ್ನೂ ಬದಲಿಸಲಾಗಿದೆ. ಈಗ ಯಾರು ಬೇಕಾದರೂ ಭೂಮಿ ಖರೀದಿ ಮಾಡಬಹುದು ಎಂದು ಹೇಳಲಾಗಿದೆ. ಈ ಮೂಲಕ ಬಡವರು ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಮಾರಿಕೊಳ್ಳುವಂತೆ ಮಾಡಲಾಗಿದೆ. ಹೀಗಾಗಿ, ಇದು ರೈತ ವಿರೋಧಿ ಕಾಯ್ದೆಯಾಗಿದ್ದು, ಇದನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಮಿತಿಯ ಸುಮಾರವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸದನದಲ್ಲಿ ಸೂಕ್ತ ಚರ್ಚೆ ನಡೆಸದೆ ಏಕಾಏಕಿ ಕಾಯ್ದೆಗಳಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಅಲ್ಲದೆ, ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಭಾದಿಸುತ್ತಿರುವಂತಹ ಸಂದರ್ಭದಲ್ಲಿಯೇ ಸರಕಾರ ಇದನ್ನು ಚರ್ಚೆಯಿಲ್ಲದೇ ಜಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಆರ್ಥಿಕವಾಗಿ, ಸಾಮಾಜಿಕವಾಗಿ ದಿವಾಳಿಯಾಗಿರುವ ಸಣ್ಣ ರೈತರು ಹಣದಾಸೆಗೆ ಅಥವಾ ತಮ್ಮ ಕಷ್ಟಗಳ ನಿವಾರಣೆ ಅನಿವಾರ್ಯತೆಗೆ ತಮ್ಮಲ್ಲಿರುವ ಅಲ್ಪಸ್ವಲ್ಪ ಜಮೀನನ್ನು ಮಾರಿಕೊಳ್ಳುತ್ತಾರೆ. ಈ ರೀತಿ ಭೂಮಿ ಕಳೆದುಕೊಂಡ ಲಕ್ಷಾಂತರ ಜನರಿಗೆ ಯಾವ ಕೆಲಸ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ಈ ಹಿಂದೆ ದೇವನಹಳ್ಳಿ ಬಳಿ ವಿಮಾನ ನಿಲ್ದಾಣ ನಿರ್ಮಿಸಲು ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು. ಆ ನಂತರ ಅಲ್ಲಿನ ಕೃಷಿಕರು ಈಗ ದಿವಾಳಿಯಾಗಿದ್ದು, ಕೆಲಸವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದೊಡ್ಡ ಬಂಡವಾಳಿಗರು, ಭೂ ಮಾಫಿಯಾಗಳು, ಕಾರ್ಪೋರೇಟ್ ಸಂಸ್ಥೆಗಳು ರೈತರಿಂದ ಖರೀದಿ ಮಾಡಿದ ಭೂಮಿಯನ್ನು ರಿಯಲ್ ಎಸ್ಟೇಟ್, ರೆಸಾರ್ಟ್, ಫಾರ್ಮ್ ಹೌಸ್, ಇತ್ಯಾದಿಗಳಿಗೆ ಬಳಸುತ್ತಾರೆ. ಒಟ್ಟಿನಲ್ಲಿ ರೈತರು ತಮ್ಮ ಭೂಮಿ ಕಳೆದುಕೊಂಡು ತಮ್ಮದೇ ಜಮೀನಿನಲ್ಲಿ ಕೂಲಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ದೋಮಲಪಲ್ಲಿ, ಬಂಡಕೋಟೆ, ನಾಯನಹಳ್ಳಿ, ಮಹಮದ್‌ಪುರ, ನಾಗಸಂದ್ರಗಡ್ಡೆ, ಧನಮಿಟ್ಟೇನಹಳ್ಳಿ, ದ್ವಾರಪ್ಪಲ್ಲಿ, ಚೌಡದೇನಹಳ್ಳಿ, ಶೆಟ್ಟಿಹಳ್ಳಿ, ಭಕ್ತರಹಳ್ಳಿ, ಮೈಲಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಹಿಳಾ ರೈತರು ಸಭೆ ಸೇರುವ ಮೂಲಕ ಕೇಂದ್ರ ಸರಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪರವಾಗಿ ರೇಣುಕ.ಸಿ, ನಾಗೇಶ್, ಅಂಬರೀಶ್, ಬಾಬುರೆಡ್ಡಿ, ನಾಗರಾಜು, ಚೌಡಪ್ಪ, ಹರೀಶ್, ದೇವಪ್ಪ, ನರಸಿಂಹಮೂರ್ತಿ ಸೇರಿದಂತೆ ಹಲವಾರು ಕಾರ್ಯಕರ್ತರು ಹಳ್ಳಿಗಳಲ್ಲಿ ನಡೆದ ಜಾಗೃತಿ ಸಭೆಗಳಲ್ಲಿ ಮಾತನಾಡಿದರು.


ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...