Homeಚಳವಳಿಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ಕೃಷಿ ಕಾಯ್ದೆಗಳ ವಿರುದ್ಧ ಮಹಿಳೆಯರ ಗುಡುಗು: 20 ಹಳ್ಳಿಗಳಲ್ಲಿ ಜಾಗೃತಿ ಜಾಥಾ

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವಂತಹ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಚಿಂತಾಮಣಿ ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮಹಿಳೆಯರು ಜಾಗೃತಿ ಜಾಥಾ ನಡೆಸಿದ್ದಾರೆ.

ಮಕ್ಕಾಂ ಕರ್ನಾಟಕ, ನಮ್ಮೂರ ಭೂಮಿ ನಮಗಿರಲಿ, ಐಕ್ಯ ಹೋರಾಟ ಸಮಿತಿಗಳ ವತಿಯಿಂದ ಮಹಿಳಾ ರೈತ ದಿನಾಚರಣೆಯ ಅಂಗವಾಗಿ ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ರೈತ ವಿರೋಧಿ ಕಾಯ್ದೆಗಳಿಗೆ ಮಹಿಳಾ ರೈತರು ಪ್ರತಿರೋಧ ವ್ಯಕ್ತಪಡಿಸಿದರು.

ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಮಾತನಾಡಿ, ಭಾರತದ ಸಂವಿಧಾನವು ಭೂ ಸುಧಾರಣೆಗೆ ಸಾಕಷ್ಟು ಮಹತ್ವ ನೀಡಿದೆ. ಉತ್ಪಾದನಾ ಮೂಲವಾದ ಭೂಮಿಯ ಒಡೆತನ ಸಮಾಜದ ಪ್ರತಿಯೊಬ್ಬರ ಅವಶ್ಯಕತೆಯನ್ನು ಈಡೇರಿಸುವಂತಿರಬೇಕು. ಅದು ಕೆಲವೇ ವ್ಯಕ್ತಿಗಳ ಕೈಯಲ್ಲಿ ಕೇಂದ್ರೀಕೃತವಾಗಬಾರದು ಎಂದು ಸ್ಪಷ್ಟಪಡಿಸಿದೆ ಎಂದರು.

ಈ ಹಿಂದೆ ಕರ್ನಾಟಕದಲ್ಲಿ ಉಳುವವನೇ ಭೂ ಒಡೆಯ ಎಂಬಂತಹ ಕಾನೂನು ತರುವ ಮೂಲಕ ಭೂ ರಹಿತ ದಲಿತ, ಹಿಂದುಳಿದ ವರ್ಗದ ಜನರಿಗೆ ಭೂಮಿಯನ್ನು ನೀಡಲಾಗಿತ್ತು. ಇದೀಗ ಆ ಕಾಯ್ದೆಗೆ ತಿದ್ದುಪಡಿ ತಂದು ಬಡವರ, ದಲಿತರ, ಹಿಂದುಳಿದ ವರ್ಗದ ಜನರ ಬಳಿಯಿರುವ ಭೂಮಿಯನ್ನು ಕಿತ್ತು ಖಾಸಗಿಯವರ ಕೈಗೆ ನೀಡಲು ಸರಕಾರ ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಭೂ ಸುಧಾರಣೆ ಕಾಯ್ದೆಯಲ್ಲಿ ಅಧಿಕ ವಾರ್ಷಿಕ ಆದಾಯ ಉಳ್ಳವರು ಭೂಮಿ ಖರೀದಿ ಮಾಡಲು ಅವಕಾಶವಿರಲಿಲ್ಲ. ಅಲ್ಲದೆ, ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿ ಮಾಡಲು ಅವಕಾಶವಿರಲಿಲ್ಲ. ಯಾರೇ ಆಗಲಿ ಭೂಮಿ ಖರೀದಿ ಮಾಡಬೇಕು ಎಂದುಕೊಂಡಲ್ಲಿ ಅದನ್ನು ಸರಕಾರಕ್ಕೆ ತಿಳಿಸಬೇಕಿತ್ತು. ಆದರೆ, ಈಗ ತಂದಿರುವ ತಿದ್ದುಪಡಿಯಲ್ಲಿ ಇವೆಲ್ಲವನ್ನೂ ಬದಲಿಸಲಾಗಿದೆ. ಈಗ ಯಾರು ಬೇಕಾದರೂ ಭೂಮಿ ಖರೀದಿ ಮಾಡಬಹುದು ಎಂದು ಹೇಳಲಾಗಿದೆ. ಈ ಮೂಲಕ ಬಡವರು ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಮಾರಿಕೊಳ್ಳುವಂತೆ ಮಾಡಲಾಗಿದೆ. ಹೀಗಾಗಿ, ಇದು ರೈತ ವಿರೋಧಿ ಕಾಯ್ದೆಯಾಗಿದ್ದು, ಇದನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಮಿತಿಯ ಸುಮಾರವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸದನದಲ್ಲಿ ಸೂಕ್ತ ಚರ್ಚೆ ನಡೆಸದೆ ಏಕಾಏಕಿ ಕಾಯ್ದೆಗಳಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಅಲ್ಲದೆ, ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಭಾದಿಸುತ್ತಿರುವಂತಹ ಸಂದರ್ಭದಲ್ಲಿಯೇ ಸರಕಾರ ಇದನ್ನು ಚರ್ಚೆಯಿಲ್ಲದೇ ಜಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಆರ್ಥಿಕವಾಗಿ, ಸಾಮಾಜಿಕವಾಗಿ ದಿವಾಳಿಯಾಗಿರುವ ಸಣ್ಣ ರೈತರು ಹಣದಾಸೆಗೆ ಅಥವಾ ತಮ್ಮ ಕಷ್ಟಗಳ ನಿವಾರಣೆ ಅನಿವಾರ್ಯತೆಗೆ ತಮ್ಮಲ್ಲಿರುವ ಅಲ್ಪಸ್ವಲ್ಪ ಜಮೀನನ್ನು ಮಾರಿಕೊಳ್ಳುತ್ತಾರೆ. ಈ ರೀತಿ ಭೂಮಿ ಕಳೆದುಕೊಂಡ ಲಕ್ಷಾಂತರ ಜನರಿಗೆ ಯಾವ ಕೆಲಸ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ಈ ಹಿಂದೆ ದೇವನಹಳ್ಳಿ ಬಳಿ ವಿಮಾನ ನಿಲ್ದಾಣ ನಿರ್ಮಿಸಲು ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು. ಆ ನಂತರ ಅಲ್ಲಿನ ಕೃಷಿಕರು ಈಗ ದಿವಾಳಿಯಾಗಿದ್ದು, ಕೆಲಸವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದೊಡ್ಡ ಬಂಡವಾಳಿಗರು, ಭೂ ಮಾಫಿಯಾಗಳು, ಕಾರ್ಪೋರೇಟ್ ಸಂಸ್ಥೆಗಳು ರೈತರಿಂದ ಖರೀದಿ ಮಾಡಿದ ಭೂಮಿಯನ್ನು ರಿಯಲ್ ಎಸ್ಟೇಟ್, ರೆಸಾರ್ಟ್, ಫಾರ್ಮ್ ಹೌಸ್, ಇತ್ಯಾದಿಗಳಿಗೆ ಬಳಸುತ್ತಾರೆ. ಒಟ್ಟಿನಲ್ಲಿ ರೈತರು ತಮ್ಮ ಭೂಮಿ ಕಳೆದುಕೊಂಡು ತಮ್ಮದೇ ಜಮೀನಿನಲ್ಲಿ ಕೂಲಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ದೋಮಲಪಲ್ಲಿ, ಬಂಡಕೋಟೆ, ನಾಯನಹಳ್ಳಿ, ಮಹಮದ್‌ಪುರ, ನಾಗಸಂದ್ರಗಡ್ಡೆ, ಧನಮಿಟ್ಟೇನಹಳ್ಳಿ, ದ್ವಾರಪ್ಪಲ್ಲಿ, ಚೌಡದೇನಹಳ್ಳಿ, ಶೆಟ್ಟಿಹಳ್ಳಿ, ಭಕ್ತರಹಳ್ಳಿ, ಮೈಲಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಹಿಳಾ ರೈತರು ಸಭೆ ಸೇರುವ ಮೂಲಕ ಕೇಂದ್ರ ಸರಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ರೈತ ಪರವಾದ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಯಾ ಗ್ರಾಮ ಪಂಚಾಯತ್‌ಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪರವಾಗಿ ರೇಣುಕ.ಸಿ, ನಾಗೇಶ್, ಅಂಬರೀಶ್, ಬಾಬುರೆಡ್ಡಿ, ನಾಗರಾಜು, ಚೌಡಪ್ಪ, ಹರೀಶ್, ದೇವಪ್ಪ, ನರಸಿಂಹಮೂರ್ತಿ ಸೇರಿದಂತೆ ಹಲವಾರು ಕಾರ್ಯಕರ್ತರು ಹಳ್ಳಿಗಳಲ್ಲಿ ನಡೆದ ಜಾಗೃತಿ ಸಭೆಗಳಲ್ಲಿ ಮಾತನಾಡಿದರು.


ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...