Homeಸಿನಿಮಾಕ್ರೀಡೆಮಹಿಳಾ ವಿಶ್ವ ಕಪ್ 2022: ಬಾಂಗ್ಲಾ ವಿರುದ್ದ 110 ರನ್‌ಗಳ ಜಯ ಗಳಿಸಿದ ಭಾರತ

ಮಹಿಳಾ ವಿಶ್ವ ಕಪ್ 2022: ಬಾಂಗ್ಲಾ ವಿರುದ್ದ 110 ರನ್‌ಗಳ ಜಯ ಗಳಿಸಿದ ಭಾರತ

- Advertisement -
- Advertisement -

ನ್ಯೂಜಿಲ್ಯಾಂಡ್‌ನಲ್ಲಿ ನಡೆಯುತ್ತರುವ ಐಸಿಸಿ ಮಹಿಳಾ ವಿಶ್ವ ಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ತಂಡವು 110 ರನ್‌ಗಳ ಜಯ ಗಳಿಸಿ ಮೂರನೇ ಜಯ ದಾಖಲಿಸಿದೆ. ಈ ಮೂಲಕ ಭಾರತವು ಸೆಮಿಫೈನಲ್ ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿದೆ.

ಪಂದ್ಯದಲ್ಲಿ ಸ್ಪಿನ್ನರ್ ಸ್ನೇಹ ರಾಣಾ ಅವರು ಉತ್ತಮವಾಗಿ ಬೌಲಿಂಗ್‌ ಮಾಡಿ ಬಾಂಗ್ಲಾದೇಶದ ಬ್ಯಾಟರ್‌ಗಳನ್ನು ಕಟ್ಟಿಹಾಕಿದರು. ಪಂದ್ಯದಲ್ಲಿ ಅವರು ನಾಲ್ಕು ವಿಕೆಟ್‌ಗಳ ಪಡೆದರು.

ಗೆಲುವಿಗಾಗಿ 230 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು 40.3 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಯಿತು. ಸಲ್ಮಾ ಖಾತುನ್ 32 ರನ್ ಗಳಿಸಿ ತಂಡದ ಗರಿಷ್ಠ ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಭಾರತವು 50 ಓವರ್‌ಗಳಲ್ಲಿ 229/7 ರನ್‌ಗಳನ್ನು ಕಲೆಹಾಕಿತು. ಯಾಸ್ತಿಕಾ ಭಾಟಿಯಾ ಅವರು ಶಾಫಾಲಿ ವರ್ಮಾ ಮತ್ತು ರಿಚಾ ಘೋಷ್ ಅವರ ಜೊತೆಗೆ ಆಡುತ್ತಾ 50 ರನ್‌ಗಳನ್ನು ಭಾರತ ತಂಡಕ್ಕೆ ನೀಡಿದರು.

ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಭಾರತ ತಂಡದಿಂದ ಓಪನರ್‌ ಆಗಿ ಶಫಾಲಿ ಮತ್ತು ಸ್ಮೃತಿ ಅವರು ಉತ್ತಮವಾಗಿ ಆಡಿದರು. ಅದಾಗಿಯೂ ಬಾಂಗ್ಲಾದೇಶ ತಂಡವು ಸ್ಮೃತಿ ಮಂಧಾನ, ಶಫಾಲಿ ವರ್ಮಾ ಮತ್ತು ಮಿಥಾಲಿ ರಾಜ್ ಅವರ ಮೂರು ವಿಕೆಟ್‌ಗಳನ್ನು ತ್ವರಿತವಾಗಿ ಪಡೆಯಿತು.

ಇದರ ನಂತರ ಭಾರತವು ಹರ್ಮನ್‌ಪ್ರೀತ್ ಮತ್ತು ರಿಚಾ ಘೋಷ್‌ ಅವರ ವಿಕೆಟ್‌ಅನ್ನೂ ಕಳೆದುಕೊಂಡಿತು. ಆದರೆ ಯಾಸ್ತಿಕಾ ಭಾಟಿಯಾ ಅವರು ಪ್ರಬಲವಾಗಿ ನಿಂತು ಅರ್ಧಶತಕವನ್ನು ಗಳಿಸಿ ಭಾರತ ತಂಡಕ್ಕೆ ಉತ್ತಮ ಮೊತ್ತದ ರನ್‌ಗಳನ್ನು ಪೇರಿಸಿಕೊಟ್ಟರು.

ಟೂರ್ನಿಯಲ್ಲಿ ಭಾರತವು ಇದುವರೆಗೂ ಒಟ್ಟು ಆರು ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...