Homeಮುಖಪುಟಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

ಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

- Advertisement -
- Advertisement -

ಮಹಿಳಾ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಮಹಿಳಾ ತಂಡ ಜಯಭೇರಿ ಭಾರಿಸಿದೆ. 107 ರನ್‌ಗಳ ಅಂತರದಲ್ಲಿ ಭಾರತ ಜಯ ಸಾಧಿಸಿದೆ.

ಮೌಂಟ್‌ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಒಂದು ಹಂತದಲ್ಲಿ 6 ವಿಕೆಟ್‌ಗೆ 114 ರನ್ ಗಳಿಸಿ ತತ್ತರಿಸಿತ್ತು. ನಂತರ ಪೂಜಾ ವಸ್ತ್ರಾಕರ್ (67) ಮತ್ತು ಸ್ನೇಹ್ ರಾಣಾ (ಔಟಾಗದೆ 53) ಏಳನೇ ವಿಕೆಟ್‌ಗೆ 122 ರನ್‌ಗಳ ಜೊತೆಯಾಟವನ್ನು ಆಡಿ ಚೇತರಿಕೆ ನೀಡಿದರು. 7 ವಿಕೆಟ್ ನಷ್ಟಕ್ಕೆ ಭಾರತ 244 ರನ್‌ಗಳನ್ನು ಗಳಿಸಿತು. ವಸ್ತ್ರಾಕರ್ ಮತ್ತು ರಾಣಾ ಅವರ ಜೊತೆಯಾಟದ ತನಕವೂ ಪಾಕಿಸ್ತಾನ ಅದ್ಭುತವಾಗಿ ಹಿಡಿತ ಸಾಧಿಸಿತ್ತು.

ನಂತರ ಬ್ಯಾಟ್‌ ಮಾಡಿದ ಪಾಕಿಸ್ತಾನ, ಭಾರತದ ಬೌಲಿಂಗ್‌ಗೆ ತತ್ತರಿಸಿತು. ಭಾರತ ತಂಡದ ರಾಜೇಶ್ವರಿ ಗಾಯಕ್ವಾಡ್ ಅವರು ಅದ್ಭುತವಾಗಿ ಬೌಲಿಂಗ್‌ ಮಾಡಿ, ಹತ್ತು ಓವರ್‌ಗಳಲ್ಲಿ 31 ರನ್‌ಗಳನ್ನು ನೀಡಿ 4 ವಿಕೆಟ್ ಪಡೆದರು. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ 244/7 ಸ್ಕೋರ್ ಮಾಡಿದ ನಂತರ ಪಾಕಿಸ್ತಾನ ಕೇವಲ 137 ರನ್‌ಗಳಿಗೆ ಆಲೌಟಾಯಿತು. ಗಾಯಕ್ವಾಟ್‌ ನಾಲ್ಕು ವಿಕೆಟ್ ಪಡೆದರೆ ಅನುಭವಿ ವೇಗದ ಬೌಲರ್ ಜೂಲನ್ ಗೋಸ್ವಾಮಿ ಎರಡು ವಿಕೆಟ್ ಪಡೆದರು.

ಮೊದಲ 10 ಓವರ್‌ಗಳಲ್ಲಿ ಪಾಕಿಸ್ತಾನ 28 ರನ್ ಗಳಿಸಲಷ್ಟೇ ಶಕ್ತವಾಯಿತು. 11ನೇ ಓವರ್‌ನಲ್ಲಿ ಆರಂಭಿಕ ಆಟಗಾರ ಜವೇರಿಯಾ ಖಾನ್ ಅವರನ್ನು ಔಟ್ ಮಾಡುವ ಮೂಲಕ ಗಾಯಕ್ವಾಡ್ ಮೊದಲ ವಿಕೆಟ್ ಪಡೆದರು. ಪಾಕಿಸ್ತಾನವು ಸಮರ್ಥವಾಗಿ ಪೈಪೋಟಿ ನೀಡಲು ಸಾಧ್ಯವಾಗಲಿಲ್ಲ. 18 ಮತ್ತು 24ನೇ ಓವರ್‌ಗಳ ನಡುವೆ  ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.  70 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಆಘಾತ ಎದುರಿಸಿತು. ಪಾಕಿಸ್ತಾನ ಅಂತಿಮವಾಗಿ 114 ರನ್‌ಗಳಿಗೆ ಆಲ್‌ಔಟ್ ಆಯಿತು.

ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಈಗ ಪಾಕಿಸ್ತಾನದ ವಿರುದ್ಧ 11 ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಗೆದ್ದಿದೆ.

ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಸ್ಮೃತಿ ಮಂದಾನ, ಸ್ನೇಹ ರಾಣಾ ಮತ್ತು ಪೂಜಾ ವಸ್ತ್ರಕರ್ ಅರ್ಧಶತಕಗಳನ್ನು ಸಿಡಿಸಿದರು. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಡಕ್‌ ಔಟಾದರು. ನಂತರ ಭಾರತ ಒತ್ತಡಕ್ಕೆ ಸಿಲುಕಿತ್ತು.

ಮಂದಾನ (75 ಎಸೆತಗಳಲ್ಲಿ 52) ಮತ್ತು ದೀಪ್ತಿ ಶರ್ಮಾ (40) ನಡುವಿನ 92 ರನ್‌ಗಳ ಜೊತೆಯಾಟದಿಂದಾಗಿ ಚೇತರಿಕೆ ಕಂಡಿತು. ಮಂದಾನ ಇನಿಂಗ್ಸ್‌ನ 22ನೇ ಓವರ್‌ನಲ್ಲಿ ಅರ್ಧಶತಕ ಗಳಿಸಿದರು. ಆದರೆ ಅದೇ ಓವರ್‌ನಲ್ಲಿ ನಶ್ರಾ ಸಂಧು ಅವರು ದೀಪ್ತಿ (40) ಅವರನ್ನು ಬೌಲ್ಡ್ ಮಾಡಿ ಜೊತೆಯಾಟವನ್ನು ಮುರಿದರು.

ಇದಾದ ಬಳಿಕ ಅನಮ್ ಅಮೀನ್, ಮಂದಾನ (52) ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ನಿದಾ ದಾರ್ ಅವರು ಹರ್ಮನ್‌ಪ್ರೀತ್ ಕೌರ್ (5) ಮತ್ತು ರಿಚಾ ಘೋಷ್ (1) ಅವರನ್ನು ಔಟ್ ಮಾಡಿದರು. ಭಾರತ ಒತ್ತಡಕ್ಕೆ ಸಿಲುಕಿತು.

ರಾಣಾ ಮತ್ತು ವಸ್ತ್ರಾಕರ್ ಕ್ರೀಸ್‌ನಲ್ಲಿದ್ದ ಭಾರತವು ನಂತರ 114/6 ಅನ್ನು ಕಳೆದುಕೊಂಡಿತು. ಇಬ್ಬರೂ ಬಿರುಸಿನ ಸ್ಕೋರ್ ಮಾಡಿದ್ದರಿಂದ ಇಬ್ಬರೂ ಬ್ಯಾಟ್ಸ್ ಮನ್ ಗಳು ಆಟದ ಸ್ವರೂಪವನ್ನು ಸಂಪೂರ್ಣವಾಗಿ ಬದಲಾಯಿಸಿದರು. ವಸ್ತ್ರಾಕರ್ ಮತ್ತು ರಾಣಾ ಏಳನೇ ವಿಕೆಟ್‌ಗೆ 122 ರನ್ ಜೊತೆಯಾಟ ನಡೆಸಿದರು. ಅಂತಿಮ ಐದು ಓವರ್‌ಗಳಲ್ಲಿ ಭಾರತ ಹೆಚ್ಚು ರನ್ ಗಳಿಸಿ 240 ರನ್‌ಗಳ ಗಡಿ ದಾಟಿಸಿತು.

ಭಾರತದ ಮುಂದಿನ ಪಂದ್ಯ (ಗುರುವಾರ) ಹ್ಯಾಮಿಲ್ಟನ್‌ನಲ್ಲಿ ನಡೆಯಲಿದ್ದು, ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಸೆಣೆಸಾಡಲಿದೆ.


ಇದನ್ನೂ ಓದಿರಿ: ಶೇನ್‌ ವಾರ್ನ್ ವಿದಾಯಕ್ಕೆ ಕಂಬನಿ ಮಿಡಿದ ಕ್ರಿಕೆಟ್‌ ಪ್ರೇಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು "ಶುದ್ಧೀಕರಣ ಆಚರಣೆ" ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ...

ಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದಲ್ಲಿ ಸೋಮವಾರ (ಡಿ.16) ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ...

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ...