Homeಮುಖಪುಟಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

ಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

- Advertisement -
- Advertisement -

ಮಹಿಳಾ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಮಹಿಳಾ ತಂಡ ಜಯಭೇರಿ ಭಾರಿಸಿದೆ. 107 ರನ್‌ಗಳ ಅಂತರದಲ್ಲಿ ಭಾರತ ಜಯ ಸಾಧಿಸಿದೆ.

ಮೌಂಟ್‌ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಒಂದು ಹಂತದಲ್ಲಿ 6 ವಿಕೆಟ್‌ಗೆ 114 ರನ್ ಗಳಿಸಿ ತತ್ತರಿಸಿತ್ತು. ನಂತರ ಪೂಜಾ ವಸ್ತ್ರಾಕರ್ (67) ಮತ್ತು ಸ್ನೇಹ್ ರಾಣಾ (ಔಟಾಗದೆ 53) ಏಳನೇ ವಿಕೆಟ್‌ಗೆ 122 ರನ್‌ಗಳ ಜೊತೆಯಾಟವನ್ನು ಆಡಿ ಚೇತರಿಕೆ ನೀಡಿದರು. 7 ವಿಕೆಟ್ ನಷ್ಟಕ್ಕೆ ಭಾರತ 244 ರನ್‌ಗಳನ್ನು ಗಳಿಸಿತು. ವಸ್ತ್ರಾಕರ್ ಮತ್ತು ರಾಣಾ ಅವರ ಜೊತೆಯಾಟದ ತನಕವೂ ಪಾಕಿಸ್ತಾನ ಅದ್ಭುತವಾಗಿ ಹಿಡಿತ ಸಾಧಿಸಿತ್ತು.

ನಂತರ ಬ್ಯಾಟ್‌ ಮಾಡಿದ ಪಾಕಿಸ್ತಾನ, ಭಾರತದ ಬೌಲಿಂಗ್‌ಗೆ ತತ್ತರಿಸಿತು. ಭಾರತ ತಂಡದ ರಾಜೇಶ್ವರಿ ಗಾಯಕ್ವಾಡ್ ಅವರು ಅದ್ಭುತವಾಗಿ ಬೌಲಿಂಗ್‌ ಮಾಡಿ, ಹತ್ತು ಓವರ್‌ಗಳಲ್ಲಿ 31 ರನ್‌ಗಳನ್ನು ನೀಡಿ 4 ವಿಕೆಟ್ ಪಡೆದರು. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ 244/7 ಸ್ಕೋರ್ ಮಾಡಿದ ನಂತರ ಪಾಕಿಸ್ತಾನ ಕೇವಲ 137 ರನ್‌ಗಳಿಗೆ ಆಲೌಟಾಯಿತು. ಗಾಯಕ್ವಾಟ್‌ ನಾಲ್ಕು ವಿಕೆಟ್ ಪಡೆದರೆ ಅನುಭವಿ ವೇಗದ ಬೌಲರ್ ಜೂಲನ್ ಗೋಸ್ವಾಮಿ ಎರಡು ವಿಕೆಟ್ ಪಡೆದರು.

ಮೊದಲ 10 ಓವರ್‌ಗಳಲ್ಲಿ ಪಾಕಿಸ್ತಾನ 28 ರನ್ ಗಳಿಸಲಷ್ಟೇ ಶಕ್ತವಾಯಿತು. 11ನೇ ಓವರ್‌ನಲ್ಲಿ ಆರಂಭಿಕ ಆಟಗಾರ ಜವೇರಿಯಾ ಖಾನ್ ಅವರನ್ನು ಔಟ್ ಮಾಡುವ ಮೂಲಕ ಗಾಯಕ್ವಾಡ್ ಮೊದಲ ವಿಕೆಟ್ ಪಡೆದರು. ಪಾಕಿಸ್ತಾನವು ಸಮರ್ಥವಾಗಿ ಪೈಪೋಟಿ ನೀಡಲು ಸಾಧ್ಯವಾಗಲಿಲ್ಲ. 18 ಮತ್ತು 24ನೇ ಓವರ್‌ಗಳ ನಡುವೆ  ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.  70 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಆಘಾತ ಎದುರಿಸಿತು. ಪಾಕಿಸ್ತಾನ ಅಂತಿಮವಾಗಿ 114 ರನ್‌ಗಳಿಗೆ ಆಲ್‌ಔಟ್ ಆಯಿತು.

ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಈಗ ಪಾಕಿಸ್ತಾನದ ವಿರುದ್ಧ 11 ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಗೆದ್ದಿದೆ.

ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಸ್ಮೃತಿ ಮಂದಾನ, ಸ್ನೇಹ ರಾಣಾ ಮತ್ತು ಪೂಜಾ ವಸ್ತ್ರಕರ್ ಅರ್ಧಶತಕಗಳನ್ನು ಸಿಡಿಸಿದರು. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಡಕ್‌ ಔಟಾದರು. ನಂತರ ಭಾರತ ಒತ್ತಡಕ್ಕೆ ಸಿಲುಕಿತ್ತು.

ಮಂದಾನ (75 ಎಸೆತಗಳಲ್ಲಿ 52) ಮತ್ತು ದೀಪ್ತಿ ಶರ್ಮಾ (40) ನಡುವಿನ 92 ರನ್‌ಗಳ ಜೊತೆಯಾಟದಿಂದಾಗಿ ಚೇತರಿಕೆ ಕಂಡಿತು. ಮಂದಾನ ಇನಿಂಗ್ಸ್‌ನ 22ನೇ ಓವರ್‌ನಲ್ಲಿ ಅರ್ಧಶತಕ ಗಳಿಸಿದರು. ಆದರೆ ಅದೇ ಓವರ್‌ನಲ್ಲಿ ನಶ್ರಾ ಸಂಧು ಅವರು ದೀಪ್ತಿ (40) ಅವರನ್ನು ಬೌಲ್ಡ್ ಮಾಡಿ ಜೊತೆಯಾಟವನ್ನು ಮುರಿದರು.

ಇದಾದ ಬಳಿಕ ಅನಮ್ ಅಮೀನ್, ಮಂದಾನ (52) ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ನಿದಾ ದಾರ್ ಅವರು ಹರ್ಮನ್‌ಪ್ರೀತ್ ಕೌರ್ (5) ಮತ್ತು ರಿಚಾ ಘೋಷ್ (1) ಅವರನ್ನು ಔಟ್ ಮಾಡಿದರು. ಭಾರತ ಒತ್ತಡಕ್ಕೆ ಸಿಲುಕಿತು.

ರಾಣಾ ಮತ್ತು ವಸ್ತ್ರಾಕರ್ ಕ್ರೀಸ್‌ನಲ್ಲಿದ್ದ ಭಾರತವು ನಂತರ 114/6 ಅನ್ನು ಕಳೆದುಕೊಂಡಿತು. ಇಬ್ಬರೂ ಬಿರುಸಿನ ಸ್ಕೋರ್ ಮಾಡಿದ್ದರಿಂದ ಇಬ್ಬರೂ ಬ್ಯಾಟ್ಸ್ ಮನ್ ಗಳು ಆಟದ ಸ್ವರೂಪವನ್ನು ಸಂಪೂರ್ಣವಾಗಿ ಬದಲಾಯಿಸಿದರು. ವಸ್ತ್ರಾಕರ್ ಮತ್ತು ರಾಣಾ ಏಳನೇ ವಿಕೆಟ್‌ಗೆ 122 ರನ್ ಜೊತೆಯಾಟ ನಡೆಸಿದರು. ಅಂತಿಮ ಐದು ಓವರ್‌ಗಳಲ್ಲಿ ಭಾರತ ಹೆಚ್ಚು ರನ್ ಗಳಿಸಿ 240 ರನ್‌ಗಳ ಗಡಿ ದಾಟಿಸಿತು.

ಭಾರತದ ಮುಂದಿನ ಪಂದ್ಯ (ಗುರುವಾರ) ಹ್ಯಾಮಿಲ್ಟನ್‌ನಲ್ಲಿ ನಡೆಯಲಿದ್ದು, ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಸೆಣೆಸಾಡಲಿದೆ.


ಇದನ್ನೂ ಓದಿರಿ: ಶೇನ್‌ ವಾರ್ನ್ ವಿದಾಯಕ್ಕೆ ಕಂಬನಿ ಮಿಡಿದ ಕ್ರಿಕೆಟ್‌ ಪ್ರೇಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...