Homeಮುಖಪುಟ‘ವಂಡರ್‌ ವುಮೆನ್‌’: ತಾಯ್ತನದ ಸುಖ-ದುಃಖದ ಸುತ್ತಲಿನ ಲೋಕ

‘ವಂಡರ್‌ ವುಮೆನ್‌’: ತಾಯ್ತನದ ಸುಖ-ದುಃಖದ ಸುತ್ತಲಿನ ಲೋಕ

- Advertisement -
- Advertisement -

ಮಲಯಾಳಂ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಕಥನ ಶೈಲಿಯ ಮೂಲಕ ಗಮನ ಸೆಳೆದವರು ‘ಅಂಜಲಿ ಮೆನಾನ್‌’. ‘ಬೆಂಗಳೂರ್‌ ಡೇಸ್‌’, ‘ಕೂಡೆ’, ‘ಕೇರಳ ಕೆಫೆ’, ‘ಉಸ್ತಾದ್ ಹೋಟೆಲ್‌’ನಂತಹ ಸಿನಿಮಾಗಳ ರೈಟರ್‌ ಆಗಿರುವ ಅಂಜಲಿಯವರು, ಎಲೈಟ್ ವರ್ಗದ ಹಿನ್ನೆಲೆಯಲ್ಲಿ ಪಾತ್ರಗಳನ್ನು ಚಿತ್ರಿಸುವುದನ್ನು ಸಾಮಾನ್ಯವಾಗಿ ಕಾಣಬಹುದು. ಪಾತ್ರಗಳು ಎಲೈಟ್ ಹಿನ್ನೆಲೆಯಲ್ಲಿದ್ದರೂ ಎಲ್ಲ ಮನುಷ್ಯರನ್ನು ಸ್ಪರ್ಶಿಸಬಲ್ಲ ವರ್ಗಾತೀತ ಅನುಭವವೊಂದನ್ನು ಅಂಜಲಿಯವರು ತಮ್ಮ ಕತೆಗಳೊಳಗೆ ತರುವ ಪ್ರಯತ್ನ ಮಾಡುವುದು ಗಮನಾರ್ಹ. ಅಂಥದ್ದೇ ಮತ್ತೊಂದು ಸಿನಿಮಾ ಕತೆಯನ್ನು ಬರೆದು, ಅವರೀಗ ನಿರ್ದೇಶಿಸಿದ್ದಾರೆ.

ಅಂಜಲಿ ಮೆನಾನ್‌ ನಿರ್ದೇಶನದ ಇತ್ತೀಚಿನ ಸಿನಿಮಾ ‘ವಂಡರ್‌ ವುಮೆನ್‌’ (ಇಂಗ್ಲಿಷ್‌) ‘ಸೋನಿಲೈವ್‌’ನಲ್ಲಿ ಸ್ಟ್ರೀಮ್‌ ಆಗುತ್ತಿದೆ. ಅತ್ಯಂತ ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಲಾಗಿರುವ ‘ವಂಡರ್‌ ವುಮೆನ್‌’ ತಾಯ್ತನ, ಗರ್ಭಿಣಿಯರ ಕಷ್ಟಸುಖದ ಸುತ್ತ ಸಾಗುತ್ತದೆ. ನವಿರಾದ ಸಂಭಾಷಣೆಯು ಹಿತವೆನಿಸುತ್ತದೆ ಹಾಗೂ ಕೆಲವು ಗಂಭೀರ ಚಿಂತನೆಗಳಿಗೆ ಅವಕಾಶ ನೀಡಿದೆ.

ಆರು ಮಂದಿ ತುಂಬು ಗರ್ಭಿಣಿಯರು ‘ಪ್ರಸವ ಪೂರ್ವ ತರಗತಿ’ಗೆ ಸೇರುತ್ತಾರೆ. ತಮ್ಮ ಮುಂದಿರುವ ಸವಾಲುಗಳನ್ನು ನಿವಾರಿಸಿಕೊಂಡು, ಪ್ರಸವ ವೇದನೆಯನ್ನು ಮೀರಿ ತಾಯ್ತನದ ನೆಮ್ಮದಿಯನ್ನು ಪಡೆಯುವುದು ಇಂತಹ ತರಗತಿ/ತರಬೇತಿಯ ಉದ್ದೇಶ. ಆರು ಮಂದಿ ಗರ್ಭಿಣಿಯರ ಹಿನ್ನೆಲೆಯೂ ವಿಭಿನ್ನ. ಅವರೆಂದರೆ- ಸಂಪ್ರದಾಯವಾದಿ ಹಿಂದೂ ಕುಟುಂಬದ ಮಹಿಳೆ, ಕ್ರಿಶ್ಚಿಯನ್‌ ಮಹಿಳೆ, ಪ್ರಸವ ಪೂರ್ವ ತರಬೇತಿ ನೀಡುವ ತಜ್ಞೆಯೊಂದಿಗೆ ಇರುವ ಕೆಲಸದಾಕೆ, ಲಿವಿಂಗ್ ಟುಗೆದರ್‌ ಮೂಲಕ ಜೀವನ ನಡೆಸುತ್ತಿರುವಾಕೆ, ಸಿಂಗಲ್‌ ಪೇರೆಂಟ್ (ಅಂದರೆ- ಪ್ರಸವ ಪೂರ್ವದಲ್ಲಿ ವಿಚ್ಛೇದನಾ ಪಡೆದಿರುವ ಮುಸ್ಲಿಂ ಮಹಿಳೆ), ಈಗಾಗಲೇ ಎರಡು ಸಲ ಗರ್ಭಪಾತವಾಗಿ ತಾಯ್ತನಕ್ಕಾಗಿ ಹಂಬಲಿಸುತ್ತಿರುವ ಮರಾಠಿ ಮೂಲದ ಮಹಿಳೆ.

Wonder Women OTT Release Date is OUT

ಪ್ರತಿ ಹೆಣ್ಣಿನ ಹಿಂದೆಯೂ ಇರುವ ಸುಖ- ದುಃಖದ ಅನಾವರಣ ಮಾಡುತ್ತಾ, ಒಬ್ಬೊರ ದುಃಖದಲ್ಲಿ ಇನ್ನೊಬ್ಬರು ಸಹಭಾಗಿಯಾಗಿ ಸಂತ್ವಾನ ಮೆರೆಯುತ್ತಾ ಸುಖ್ಯಾಂತ್ಯದಲ್ಲಿ ಕತೆ ಮುಗಿಯುತ್ತದೆ. ಗರ್ಭಿಣಿ ಮಹಿಳೆಯರು ಎದುರಿಸುವ ಸವಾಲು, ಭಯ, ಆತಂಕ, ತಾಯಿ ಮತ್ತು ಮಗುವಿನ ಪಾಲನೆಯಲ್ಲಿ ಗಂಡ ಹಾಗೂ ಕುಟುಂಬದ ಜವಾಬ್ದಾರಿ- ಇತ್ಯಾದಿಗಳ ವಿಷಯಗಳನ್ನು ಸೂಕ್ಷ್ಮವಾಗಿ ಕತೆ ಚರ್ಚಿಸುತ್ತದೆ.

ಶ್ರೇಣೀಕೃತ ಪುರುಷಾಧಿಪತ್ಯದ ಪ್ರಶ್ನೆಯನ್ನು ಗಂಭೀರವಾಗಿಯಲ್ಲದಿದ್ದರೂ ಖೋ ಖೋ ಆಟದಂತೆ ಸ್ಪರ್ಶಿಸಿ ಕಥೆ ಮುಂದೆ ಸಾಗುತ್ತದೆ. ಎಲ್ಲರ ಹಿಂದೆಯೂ ಕಷ್ಟಗಳಿವೆ ಎಂಬ ಸಿದ್ಧಸೂತ್ರವನ್ನು ಹೆಣೆದು ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಮಾದರಿಯನ್ನು ಇಲ್ಲಿ ಕಾಣಬಹುದು. ತಾಯಿ ಮತ್ತು ಮಗುವಿನ ಪಾಲನೆಗಿರುವ ತೊಡರುಗಳನ್ನು ಪರಿಹರಿಸಿಕೊಳ್ಳುವತ್ತ ಕಥೆಯನ್ನು ಕೇಂದ್ರೀಕರಿಸಲಾಗಿದೆ.

ಮಲಯಾಳಂ, ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಕನ್ನಡ ಭಾಷಾ ಹಿನ್ನೆಲೆಯ ಇಲ್ಲಿನ ಪಾತ್ರಗಳು ಮುಖ್ಯವಾಗಿ ವ್ಯವಹಿಸುವುದು ‘ಇಂಗ್ಲಿಷ್‌’ ಮೂಲಕ. ಭಾವನೆಗಳ ಹಂಚಿಕೆಗೆ ಭಾಷೆ ಮುಖ್ಯವಲ್ಲ ಎಂಬ ಎಚ್ಚರಿಕೆಯನ್ನು ಇಂಗ್ಲಿಷ್ ಭಾರದಿರುವ ಮರಾಠಿ ಮಹಿಳೆಯ ಮೂಲಕ ಹೇಳಲು ಹೊರಟಿರುವುದನ್ನು ಗಮನಿಸಬಹುದು.

ಎಲೈಟ್‌ ವರ್ಗಗಳನ್ನು ಪ್ರತಿನಿಧಿಸುತ್ತಿರುವ ಇಲ್ಲಿನ ಪಾತ್ರಗಳೊಳಗೆ, ಪ್ರಸವ ಪೂರ್ವ ತರಬೇತಿ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯನ್ನು ಒಳಗೊಳ್ಳುವ ಮೂಲಕ- ವರ್ಗ ಪ್ರಣೀತ ಚೌಕಟ್ಟನ್ನು ಮೀರುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ಆದರೆ ಇದು ಸಾಂಕೇತಿಕವೆನಿಸುತ್ತದೆಯೇ ಹೊರತು, ಇಂತಹ ತರಬೇತಿಗಳೆಲ್ಲ ಎಲೈಟ್‌ ವರ್ಗವನ್ನೇ ಪ್ರತಿನಿಧಿಸುತ್ತವೆ ಎಂಬುದು ವಾಸ್ತವ. ಪ್ರಸವ ಪೂರ್ವದಲ್ಲಿ ಈ ರೀತಿಯ ಮುಂಜಾಗ್ರತೆ ಎಲ್ಲ ಹಿನ್ನೆಲೆಯ ಮಹಿಳೆಯರಿಗೆ ಅಗತ್ಯ ಎಂಬುದನ್ನು ತಳ್ಳಿಹಾಕಲಾಗದು.

ಸರ್‌ ನೇಮ್‌ನಿಂದ ಗುರುತಿಸಿಕೊಳ್ಳಬೇಕು ಎಂಬ ಸಂಪ್ರದಾಯವಾದಿ ಕುಟುಂಬದ ಹಿನ್ನೆಲೆಯ ಅತ್ತೆಯ ಪಾತ್ರವೊಂದನ್ನು ಇಲ್ಲಿ ಬರುತ್ತದೆ. ತನ್ನ ಸೊಸೆ ಗಂಡನ ಹೆಸರಿನಿಂದ ಗುರುತಿಸಿಕೊಳ್ಳದಿದ್ದರೆ ಮಹಾಪರಾಧ ಎಂಬಂತೆ ಈ ಪಾತ್ರ ವರ್ತಿಸುತ್ತದೆ. ಹೆಣ್ಣಿನ ಭಾವನೆಗಳು ಮತ್ತು ತಾಯ್ತನದ ಕುರಿತು ಗಂಡಿನಲ್ಲಿ ತಿಳಿವಳಿಕೆಯ ಕೊರತೆ ಇದೆ ಎಂಬುದನ್ನು ಮನಗಾಣಿಸುವ ಪ್ರಯತ್ನವಾಗಿ ಸಂಪ್ರದಾಯವಾದಿ ಕುಟುಂಬದ ಮಹಿಳೆಯ ಗಂಡನನ್ನು ಪುರುಷಾಧಿಪತ್ಯ ವ್ಯವಸ್ಥೆಯ ಪ್ರತಿನಿಧಿಯಂತೆ ಚಿತ್ರಿಸಲಾಗಿದೆ. ಉಳಿದೆಲ್ಲ ಗಂಡಸರ ಪಾತ್ರಗಳಿಗಿಂತ ಪ್ರತಿಗಾಮಿಯಂತೆ ತೋರುವ ಈ ಪಾತ್ರವು ಮನಃಪರಿವರ್ತನೆಯಾಗಲು ಹೆಚ್ಚು ಸಮಯ ಬೇಡುವುದಿಲ್ಲ. ಸಂಪ್ರದಾಯನಿಷ್ಠ ಅತ್ತೆಯ ಪಾತ್ರವೂ ಹೀಗೆಯೇ ಬದಲಾಗುತ್ತದೆ. ಪಾತ್ರಗಳ ಮಾನಸಿಕತೆಯ ಬದಲಾವಣೆಯಲ್ಲಿ ಧಾವಂತ ಎದ್ದು ಕಾಣುತ್ತದೆ.

ಇದನ್ನೂ ಓದಿರಿ: ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ವಿಚ್ಛೇದನಾ ಪಡೆಯುತ್ತಿರುವ ಗರ್ಭಿಣಿಯನ್ನು ‘ಮುಸ್ಲಿಂ’ ಸಮುದಾಯದ ಭಾಗವಾಗಿ ಚಿತ್ರಿಸಿರುವುದು ಕತೆಯ ಆಶಯಕ್ಕೆ ಚ್ಯುತಿ ಬರುವಂತಿದೆ. ಪುರುಷಾಧಿಪತ್ಯ ಹಾಗೂ ಹೆಣ್ಣನ್ನು ಭೋಗಿಸುವವರು ಯಾವುದೋ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಆದರೆ ಪ್ರಸ್ತುತ ರಾಜಕೀಯ ಸನ್ನಿವೇಶ ಮತ್ತು ಪಿತೂರಿ ವ್ಯವಸ್ಥೆಯು ಅಲ್ಪಸಂಖ್ಯಾತ ಸಮುದಾಯವನ್ನು ಮಾತ್ರ ಕಟಕಟೆಯಲ್ಲಿ ನಿಲ್ಲುಸುತ್ತದೆ. “ಹೆಣ್ಣನ್ನು ಭೋಗಿಸಿ, ವಂಚಿಸುವ ಧರ್ಮಾಂಧರಿವರು” ಎಂಬಂತೆ ಕತೆಗಳನ್ನು ಹಬ್ಬಿಸಿ, ದ್ವೇಷವನ್ನು ಹರಡುವ ಮೂಲಭೂತವಾದಿ ವ್ಯವಸ್ಥೆಯನ್ನು ಇಂದು ಕಾಣುತ್ತಿದ್ದೇವೆ. ಹೀಗಾಗಿ ಸಿಂಗಲ್ ಪೇರೆಂಟ್‌ ಗರ್ಭಿಣಿಯನ್ನು ಮುಸ್ಲಿಂ ಎಂದು ಬಿಂಬಿಸುವುದು- ಸದ್ಯದ ರಾಜಕೀಯ ಪಿತೂರಿಗೆ ಇಂಬು ನೀಡಿದಂತಾಗುತ್ತದೆ. ಹೀಗಾಗಿ ಈ ಪಾತ್ರದ ಸುತ್ತ ಬಹುಸಂಖ್ಯಾತ ರಾಜಕೀಯ ಪ್ರಣೀತ ಪ್ರಶ್ನೆ ಏಳದಂತೆ ಅಂಜಲಿಯವರು ಎಚ್ಚರ ವಹಿಸಬೇಕಿತ್ತು. ಸಿಂಗಲ್‌ ಪೇರೆಂಟ್‌‌- ಬಹುಸಂಖ್ಯಾತ ಹಿನ್ನೆಲೆಯವಳೆನ್ನುವುದಕ್ಕಿಂತ ಅಲ್ಪಸಂಖ್ಯಾತಳಾಗಿ ಚಿತ್ರಿತವಾದರೆ ಅಲ್ಲಿ ಹುಟ್ಟುವ ರಾಜಕೀಯ ತರಂಗಳು ಬೇರೆಬೇರೆಯಾಗುತ್ತವೆ. ಈ ಚರ್ಚೆಯು ಎರಡಗಲಿನ ಕತ್ತಿಯೆಂಬುದನ್ನೂ ಅಲ್ಲಗಳೆಯಲು ಸಾಧ್ಯವಿಲ್ಲ.

ನವಿರಾದ ಹಾಗೂ ಸುಖ್ಯಾಂತದಲ್ಲಿ ಮುಗಿಯುವ ‘ವಂಡರ್‌ ವುಮೆನ್‌’- ತಾಯ್ತನದ ಸುತ್ತ ಮೂಡಿಬಂದಿರುವ ವಿಭಿನ್ನ ಪ್ರಯತ್ನ. ತಾರಾಗಣದಲ್ಲಿ ನದಿಯಾ ಮೊಯ್ದು, ನಿತ್ಯಾ ಮೆನೆನ್, ಪಾರ್ವತಿ ತಿರುವೋತು, ಪದ್ಮಪ್ರಿಯಾ, ಸಯನೋರಾ ಫಿಲಿಪ್, ಅರ್ಚನಾ ಪದ್ಮಿನಿ ಮತ್ತು ಅಮೃತಾ ಸುಭಾಷ್ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ. ನಾಲ್ಕೈದು ಲೊಕೇಷನ್‌ಗಳಲ್ಲಿಯೇ ಕತೆ ಮುಗಿದು ಹೋದರೂ ಮನೇಶ್ ಮಾಧವನ್ ಅವರ ಛಾಯಾಗ್ರಹಣ ಮೆಚ್ಚುವಂತಿದೆ. ಗೋವಿಂದ ವಸಂತ ಅವರ ಸಂಗೀತ ಭಾವುಕ ದೃಶ್ಯಗಳನ್ನು ತೀವ್ರವಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...