Homeಮುಖಪುಟ‘ವಂಡರ್‌ ವುಮೆನ್‌’: ತಾಯ್ತನದ ಸುಖ-ದುಃಖದ ಸುತ್ತಲಿನ ಲೋಕ

‘ವಂಡರ್‌ ವುಮೆನ್‌’: ತಾಯ್ತನದ ಸುಖ-ದುಃಖದ ಸುತ್ತಲಿನ ಲೋಕ

- Advertisement -
- Advertisement -

ಮಲಯಾಳಂ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಕಥನ ಶೈಲಿಯ ಮೂಲಕ ಗಮನ ಸೆಳೆದವರು ‘ಅಂಜಲಿ ಮೆನಾನ್‌’. ‘ಬೆಂಗಳೂರ್‌ ಡೇಸ್‌’, ‘ಕೂಡೆ’, ‘ಕೇರಳ ಕೆಫೆ’, ‘ಉಸ್ತಾದ್ ಹೋಟೆಲ್‌’ನಂತಹ ಸಿನಿಮಾಗಳ ರೈಟರ್‌ ಆಗಿರುವ ಅಂಜಲಿಯವರು, ಎಲೈಟ್ ವರ್ಗದ ಹಿನ್ನೆಲೆಯಲ್ಲಿ ಪಾತ್ರಗಳನ್ನು ಚಿತ್ರಿಸುವುದನ್ನು ಸಾಮಾನ್ಯವಾಗಿ ಕಾಣಬಹುದು. ಪಾತ್ರಗಳು ಎಲೈಟ್ ಹಿನ್ನೆಲೆಯಲ್ಲಿದ್ದರೂ ಎಲ್ಲ ಮನುಷ್ಯರನ್ನು ಸ್ಪರ್ಶಿಸಬಲ್ಲ ವರ್ಗಾತೀತ ಅನುಭವವೊಂದನ್ನು ಅಂಜಲಿಯವರು ತಮ್ಮ ಕತೆಗಳೊಳಗೆ ತರುವ ಪ್ರಯತ್ನ ಮಾಡುವುದು ಗಮನಾರ್ಹ. ಅಂಥದ್ದೇ ಮತ್ತೊಂದು ಸಿನಿಮಾ ಕತೆಯನ್ನು ಬರೆದು, ಅವರೀಗ ನಿರ್ದೇಶಿಸಿದ್ದಾರೆ.

ಅಂಜಲಿ ಮೆನಾನ್‌ ನಿರ್ದೇಶನದ ಇತ್ತೀಚಿನ ಸಿನಿಮಾ ‘ವಂಡರ್‌ ವುಮೆನ್‌’ (ಇಂಗ್ಲಿಷ್‌) ‘ಸೋನಿಲೈವ್‌’ನಲ್ಲಿ ಸ್ಟ್ರೀಮ್‌ ಆಗುತ್ತಿದೆ. ಅತ್ಯಂತ ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಲಾಗಿರುವ ‘ವಂಡರ್‌ ವುಮೆನ್‌’ ತಾಯ್ತನ, ಗರ್ಭಿಣಿಯರ ಕಷ್ಟಸುಖದ ಸುತ್ತ ಸಾಗುತ್ತದೆ. ನವಿರಾದ ಸಂಭಾಷಣೆಯು ಹಿತವೆನಿಸುತ್ತದೆ ಹಾಗೂ ಕೆಲವು ಗಂಭೀರ ಚಿಂತನೆಗಳಿಗೆ ಅವಕಾಶ ನೀಡಿದೆ.

ಆರು ಮಂದಿ ತುಂಬು ಗರ್ಭಿಣಿಯರು ‘ಪ್ರಸವ ಪೂರ್ವ ತರಗತಿ’ಗೆ ಸೇರುತ್ತಾರೆ. ತಮ್ಮ ಮುಂದಿರುವ ಸವಾಲುಗಳನ್ನು ನಿವಾರಿಸಿಕೊಂಡು, ಪ್ರಸವ ವೇದನೆಯನ್ನು ಮೀರಿ ತಾಯ್ತನದ ನೆಮ್ಮದಿಯನ್ನು ಪಡೆಯುವುದು ಇಂತಹ ತರಗತಿ/ತರಬೇತಿಯ ಉದ್ದೇಶ. ಆರು ಮಂದಿ ಗರ್ಭಿಣಿಯರ ಹಿನ್ನೆಲೆಯೂ ವಿಭಿನ್ನ. ಅವರೆಂದರೆ- ಸಂಪ್ರದಾಯವಾದಿ ಹಿಂದೂ ಕುಟುಂಬದ ಮಹಿಳೆ, ಕ್ರಿಶ್ಚಿಯನ್‌ ಮಹಿಳೆ, ಪ್ರಸವ ಪೂರ್ವ ತರಬೇತಿ ನೀಡುವ ತಜ್ಞೆಯೊಂದಿಗೆ ಇರುವ ಕೆಲಸದಾಕೆ, ಲಿವಿಂಗ್ ಟುಗೆದರ್‌ ಮೂಲಕ ಜೀವನ ನಡೆಸುತ್ತಿರುವಾಕೆ, ಸಿಂಗಲ್‌ ಪೇರೆಂಟ್ (ಅಂದರೆ- ಪ್ರಸವ ಪೂರ್ವದಲ್ಲಿ ವಿಚ್ಛೇದನಾ ಪಡೆದಿರುವ ಮುಸ್ಲಿಂ ಮಹಿಳೆ), ಈಗಾಗಲೇ ಎರಡು ಸಲ ಗರ್ಭಪಾತವಾಗಿ ತಾಯ್ತನಕ್ಕಾಗಿ ಹಂಬಲಿಸುತ್ತಿರುವ ಮರಾಠಿ ಮೂಲದ ಮಹಿಳೆ.

Wonder Women OTT Release Date is OUT

ಪ್ರತಿ ಹೆಣ್ಣಿನ ಹಿಂದೆಯೂ ಇರುವ ಸುಖ- ದುಃಖದ ಅನಾವರಣ ಮಾಡುತ್ತಾ, ಒಬ್ಬೊರ ದುಃಖದಲ್ಲಿ ಇನ್ನೊಬ್ಬರು ಸಹಭಾಗಿಯಾಗಿ ಸಂತ್ವಾನ ಮೆರೆಯುತ್ತಾ ಸುಖ್ಯಾಂತ್ಯದಲ್ಲಿ ಕತೆ ಮುಗಿಯುತ್ತದೆ. ಗರ್ಭಿಣಿ ಮಹಿಳೆಯರು ಎದುರಿಸುವ ಸವಾಲು, ಭಯ, ಆತಂಕ, ತಾಯಿ ಮತ್ತು ಮಗುವಿನ ಪಾಲನೆಯಲ್ಲಿ ಗಂಡ ಹಾಗೂ ಕುಟುಂಬದ ಜವಾಬ್ದಾರಿ- ಇತ್ಯಾದಿಗಳ ವಿಷಯಗಳನ್ನು ಸೂಕ್ಷ್ಮವಾಗಿ ಕತೆ ಚರ್ಚಿಸುತ್ತದೆ.

ಶ್ರೇಣೀಕೃತ ಪುರುಷಾಧಿಪತ್ಯದ ಪ್ರಶ್ನೆಯನ್ನು ಗಂಭೀರವಾಗಿಯಲ್ಲದಿದ್ದರೂ ಖೋ ಖೋ ಆಟದಂತೆ ಸ್ಪರ್ಶಿಸಿ ಕಥೆ ಮುಂದೆ ಸಾಗುತ್ತದೆ. ಎಲ್ಲರ ಹಿಂದೆಯೂ ಕಷ್ಟಗಳಿವೆ ಎಂಬ ಸಿದ್ಧಸೂತ್ರವನ್ನು ಹೆಣೆದು ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಮಾದರಿಯನ್ನು ಇಲ್ಲಿ ಕಾಣಬಹುದು. ತಾಯಿ ಮತ್ತು ಮಗುವಿನ ಪಾಲನೆಗಿರುವ ತೊಡರುಗಳನ್ನು ಪರಿಹರಿಸಿಕೊಳ್ಳುವತ್ತ ಕಥೆಯನ್ನು ಕೇಂದ್ರೀಕರಿಸಲಾಗಿದೆ.

ಮಲಯಾಳಂ, ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಕನ್ನಡ ಭಾಷಾ ಹಿನ್ನೆಲೆಯ ಇಲ್ಲಿನ ಪಾತ್ರಗಳು ಮುಖ್ಯವಾಗಿ ವ್ಯವಹಿಸುವುದು ‘ಇಂಗ್ಲಿಷ್‌’ ಮೂಲಕ. ಭಾವನೆಗಳ ಹಂಚಿಕೆಗೆ ಭಾಷೆ ಮುಖ್ಯವಲ್ಲ ಎಂಬ ಎಚ್ಚರಿಕೆಯನ್ನು ಇಂಗ್ಲಿಷ್ ಭಾರದಿರುವ ಮರಾಠಿ ಮಹಿಳೆಯ ಮೂಲಕ ಹೇಳಲು ಹೊರಟಿರುವುದನ್ನು ಗಮನಿಸಬಹುದು.

ಎಲೈಟ್‌ ವರ್ಗಗಳನ್ನು ಪ್ರತಿನಿಧಿಸುತ್ತಿರುವ ಇಲ್ಲಿನ ಪಾತ್ರಗಳೊಳಗೆ, ಪ್ರಸವ ಪೂರ್ವ ತರಬೇತಿ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯನ್ನು ಒಳಗೊಳ್ಳುವ ಮೂಲಕ- ವರ್ಗ ಪ್ರಣೀತ ಚೌಕಟ್ಟನ್ನು ಮೀರುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ಆದರೆ ಇದು ಸಾಂಕೇತಿಕವೆನಿಸುತ್ತದೆಯೇ ಹೊರತು, ಇಂತಹ ತರಬೇತಿಗಳೆಲ್ಲ ಎಲೈಟ್‌ ವರ್ಗವನ್ನೇ ಪ್ರತಿನಿಧಿಸುತ್ತವೆ ಎಂಬುದು ವಾಸ್ತವ. ಪ್ರಸವ ಪೂರ್ವದಲ್ಲಿ ಈ ರೀತಿಯ ಮುಂಜಾಗ್ರತೆ ಎಲ್ಲ ಹಿನ್ನೆಲೆಯ ಮಹಿಳೆಯರಿಗೆ ಅಗತ್ಯ ಎಂಬುದನ್ನು ತಳ್ಳಿಹಾಕಲಾಗದು.

ಸರ್‌ ನೇಮ್‌ನಿಂದ ಗುರುತಿಸಿಕೊಳ್ಳಬೇಕು ಎಂಬ ಸಂಪ್ರದಾಯವಾದಿ ಕುಟುಂಬದ ಹಿನ್ನೆಲೆಯ ಅತ್ತೆಯ ಪಾತ್ರವೊಂದನ್ನು ಇಲ್ಲಿ ಬರುತ್ತದೆ. ತನ್ನ ಸೊಸೆ ಗಂಡನ ಹೆಸರಿನಿಂದ ಗುರುತಿಸಿಕೊಳ್ಳದಿದ್ದರೆ ಮಹಾಪರಾಧ ಎಂಬಂತೆ ಈ ಪಾತ್ರ ವರ್ತಿಸುತ್ತದೆ. ಹೆಣ್ಣಿನ ಭಾವನೆಗಳು ಮತ್ತು ತಾಯ್ತನದ ಕುರಿತು ಗಂಡಿನಲ್ಲಿ ತಿಳಿವಳಿಕೆಯ ಕೊರತೆ ಇದೆ ಎಂಬುದನ್ನು ಮನಗಾಣಿಸುವ ಪ್ರಯತ್ನವಾಗಿ ಸಂಪ್ರದಾಯವಾದಿ ಕುಟುಂಬದ ಮಹಿಳೆಯ ಗಂಡನನ್ನು ಪುರುಷಾಧಿಪತ್ಯ ವ್ಯವಸ್ಥೆಯ ಪ್ರತಿನಿಧಿಯಂತೆ ಚಿತ್ರಿಸಲಾಗಿದೆ. ಉಳಿದೆಲ್ಲ ಗಂಡಸರ ಪಾತ್ರಗಳಿಗಿಂತ ಪ್ರತಿಗಾಮಿಯಂತೆ ತೋರುವ ಈ ಪಾತ್ರವು ಮನಃಪರಿವರ್ತನೆಯಾಗಲು ಹೆಚ್ಚು ಸಮಯ ಬೇಡುವುದಿಲ್ಲ. ಸಂಪ್ರದಾಯನಿಷ್ಠ ಅತ್ತೆಯ ಪಾತ್ರವೂ ಹೀಗೆಯೇ ಬದಲಾಗುತ್ತದೆ. ಪಾತ್ರಗಳ ಮಾನಸಿಕತೆಯ ಬದಲಾವಣೆಯಲ್ಲಿ ಧಾವಂತ ಎದ್ದು ಕಾಣುತ್ತದೆ.

ಇದನ್ನೂ ಓದಿರಿ: ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ವಿಚ್ಛೇದನಾ ಪಡೆಯುತ್ತಿರುವ ಗರ್ಭಿಣಿಯನ್ನು ‘ಮುಸ್ಲಿಂ’ ಸಮುದಾಯದ ಭಾಗವಾಗಿ ಚಿತ್ರಿಸಿರುವುದು ಕತೆಯ ಆಶಯಕ್ಕೆ ಚ್ಯುತಿ ಬರುವಂತಿದೆ. ಪುರುಷಾಧಿಪತ್ಯ ಹಾಗೂ ಹೆಣ್ಣನ್ನು ಭೋಗಿಸುವವರು ಯಾವುದೋ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಆದರೆ ಪ್ರಸ್ತುತ ರಾಜಕೀಯ ಸನ್ನಿವೇಶ ಮತ್ತು ಪಿತೂರಿ ವ್ಯವಸ್ಥೆಯು ಅಲ್ಪಸಂಖ್ಯಾತ ಸಮುದಾಯವನ್ನು ಮಾತ್ರ ಕಟಕಟೆಯಲ್ಲಿ ನಿಲ್ಲುಸುತ್ತದೆ. “ಹೆಣ್ಣನ್ನು ಭೋಗಿಸಿ, ವಂಚಿಸುವ ಧರ್ಮಾಂಧರಿವರು” ಎಂಬಂತೆ ಕತೆಗಳನ್ನು ಹಬ್ಬಿಸಿ, ದ್ವೇಷವನ್ನು ಹರಡುವ ಮೂಲಭೂತವಾದಿ ವ್ಯವಸ್ಥೆಯನ್ನು ಇಂದು ಕಾಣುತ್ತಿದ್ದೇವೆ. ಹೀಗಾಗಿ ಸಿಂಗಲ್ ಪೇರೆಂಟ್‌ ಗರ್ಭಿಣಿಯನ್ನು ಮುಸ್ಲಿಂ ಎಂದು ಬಿಂಬಿಸುವುದು- ಸದ್ಯದ ರಾಜಕೀಯ ಪಿತೂರಿಗೆ ಇಂಬು ನೀಡಿದಂತಾಗುತ್ತದೆ. ಹೀಗಾಗಿ ಈ ಪಾತ್ರದ ಸುತ್ತ ಬಹುಸಂಖ್ಯಾತ ರಾಜಕೀಯ ಪ್ರಣೀತ ಪ್ರಶ್ನೆ ಏಳದಂತೆ ಅಂಜಲಿಯವರು ಎಚ್ಚರ ವಹಿಸಬೇಕಿತ್ತು. ಸಿಂಗಲ್‌ ಪೇರೆಂಟ್‌‌- ಬಹುಸಂಖ್ಯಾತ ಹಿನ್ನೆಲೆಯವಳೆನ್ನುವುದಕ್ಕಿಂತ ಅಲ್ಪಸಂಖ್ಯಾತಳಾಗಿ ಚಿತ್ರಿತವಾದರೆ ಅಲ್ಲಿ ಹುಟ್ಟುವ ರಾಜಕೀಯ ತರಂಗಳು ಬೇರೆಬೇರೆಯಾಗುತ್ತವೆ. ಈ ಚರ್ಚೆಯು ಎರಡಗಲಿನ ಕತ್ತಿಯೆಂಬುದನ್ನೂ ಅಲ್ಲಗಳೆಯಲು ಸಾಧ್ಯವಿಲ್ಲ.

ನವಿರಾದ ಹಾಗೂ ಸುಖ್ಯಾಂತದಲ್ಲಿ ಮುಗಿಯುವ ‘ವಂಡರ್‌ ವುಮೆನ್‌’- ತಾಯ್ತನದ ಸುತ್ತ ಮೂಡಿಬಂದಿರುವ ವಿಭಿನ್ನ ಪ್ರಯತ್ನ. ತಾರಾಗಣದಲ್ಲಿ ನದಿಯಾ ಮೊಯ್ದು, ನಿತ್ಯಾ ಮೆನೆನ್, ಪಾರ್ವತಿ ತಿರುವೋತು, ಪದ್ಮಪ್ರಿಯಾ, ಸಯನೋರಾ ಫಿಲಿಪ್, ಅರ್ಚನಾ ಪದ್ಮಿನಿ ಮತ್ತು ಅಮೃತಾ ಸುಭಾಷ್ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ. ನಾಲ್ಕೈದು ಲೊಕೇಷನ್‌ಗಳಲ್ಲಿಯೇ ಕತೆ ಮುಗಿದು ಹೋದರೂ ಮನೇಶ್ ಮಾಧವನ್ ಅವರ ಛಾಯಾಗ್ರಹಣ ಮೆಚ್ಚುವಂತಿದೆ. ಗೋವಿಂದ ವಸಂತ ಅವರ ಸಂಗೀತ ಭಾವುಕ ದೃಶ್ಯಗಳನ್ನು ತೀವ್ರವಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...