Homeಚಳವಳಿಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ, ಅವರ ಮೇಲೆ ಹೆಚ್ಚಿನ ಗೌರವವಿದೆ: ಬಾಂಬೆ ಹೈಕೋರ್ಟ್

ಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ, ಅವರ ಮೇಲೆ ಹೆಚ್ಚಿನ ಗೌರವವಿದೆ: ಬಾಂಬೆ ಹೈಕೋರ್ಟ್

- Advertisement -
- Advertisement -

ದಿವಂಗತ ಫಾದರ್‌ ಸ್ಟಾನ್ ಸ್ವಾಮಿ, ಒಬ್ಬ ಅದ್ಭುತ ವ್ಯಕ್ತಿ ಅವರು ಮಾಡಿರುವ ಉತ್ತಮ ಕೆಲಸಗಳಿಂದಾಗಿ ಅವರ ಮೇಲೆ ನ್ಯಾಯಾಲಯವು ಹೆಚ್ಚಿನ ಗೌರವ ಹೊಂದಿದೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. ಎಲ್ಗರ್ ಪರಿಷತ್, ಭೀಮಾ ಕೋರೆಗಾಂವ್ ಪ್ರಕರಣದಲ್ಲಿ UAPA ಅಡಿಯಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿಯೇ ಸ್ಟಾನ್ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ.

ಫಾದರ್‌ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಮರಣೋತ್ತರವಾಗಿ ವಿಚಾರಣೆ ನಡೆಸುತ್ತಿರುವ ಬಾಂಬೆ ಹೈಕೋರ್ಟ್, ಸೋಮವಾರ ವಿಚಾರಣೆ ವೇಳೆ ಈ ಅಭಿಪ್ರಾಯ ಮಂಡಿಸಿದೆ.

ಜುಲೈ 5 ರಂದು ಸ್ಟಾನ್ ಸ್ವಾಮಿಯ ವೈದ್ಯಕೀಯ ಜಾಮೀನು ಅರ್ಜಿಯ ವಿಚಾರಣೆ ನಡೆಬೇಕಿದ್ದ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎನ್.ಜೆ.ಜಮದಾರ್ ಅವರ ನ್ಯಾಯಪೀಠ ಈ ಅಭಿಪ್ರಾಯ ನೀಡಿದೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

” ಕಾನೂನುಬದ್ಧವಾಗಿ, ಸ್ಟಾನ್ ಸ್ವಾಮಿ ಅವರ ವಿರುದ್ಧ ಏನೇ ಇರಲಿ ಅದು ಬೇರೆ ವಿಷಯ. ಆದರೆ, ಅವರು ಅದ್ಭುತ ವ್ಯಕ್ತಿ. ಅವರು ಸಮಾಜಕ್ಕೆ ಸೇವೆ ಸಲ್ಲಿಸಿರುವ ರೀತಿಗೆ, ಅವರ ಕೆಲಸದ ಬಗ್ಗೆ ನಮಗೆ ಅಪಾರ ಗೌರವವಿದೆ” ಎಂದು  ನ್ಯಾಯಮೂರ್ತಿ ಶಿಂಧೆ ಹೇಳಿದ್ದಾರೆ.

ಸ್ಟಾನ್ ಸ್ವಾಮಿ ಅವರ ಸಾವಿನ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ನ್ಯಾಯಾಂಗದ ವಿರುದ್ಧ ವ್ಯಕ್ತವಾಗಿರುವ ಆಕ್ರೋಶ, ಟೀಕೆಗಳನ್ನೂ ನ್ಯಾಯಪೀಠ ವಿಚಾರಣೆ ವೇಳೆ ಉಲ್ಲೇಖಿಸಿದೆ. ಜುಲೈ 23 ರಂದು ಹೈಕೋರ್ಟ್ ವಿಚಾರಣೆ ಮುಂದುವರೆಸಲಿದೆ.

ಕಳೆದ ಅಕ್ಟೋಬರ್‌ನಲ್ಲಿ ಎಲ್ಗರ್ ಪರಿಷತ್ ಪ್ರಕರಣಕ್ಕೆ (ಭೀಮಾ ಕೋರೆಗಾಂವ್) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಫಾದರ್‌ ಸ್ಟಾನ್ ಸ್ವಾಮಿ ಅವರನ್ನು ಬಂಧಿಸಿತ್ತು. ‍ಜುಲೈ 5 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ನ್ಯಾಯಾಂಗ ಬಂಧನದಲ್ಲಿಯೇ ಅವರು ನಿಧನರಾದರು.


ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ! ನಿಜ ಆದರೆ, ಕೊಳ್ಳೆ ಹೋದ ಮೇಲೆ ದಡ್ಡಿ ಬಾಗಿಲು ಮುಚ್ಚುವ ಪ್ರಯತ್ನದಿಂದ ಏನು ಪ್ರಯೋಜನ?

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...