Homeಚಳವಳಿಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ, ಅವರ ಮೇಲೆ ಹೆಚ್ಚಿನ ಗೌರವವಿದೆ: ಬಾಂಬೆ ಹೈಕೋರ್ಟ್

ಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ, ಅವರ ಮೇಲೆ ಹೆಚ್ಚಿನ ಗೌರವವಿದೆ: ಬಾಂಬೆ ಹೈಕೋರ್ಟ್

- Advertisement -
- Advertisement -

ದಿವಂಗತ ಫಾದರ್‌ ಸ್ಟಾನ್ ಸ್ವಾಮಿ, ಒಬ್ಬ ಅದ್ಭುತ ವ್ಯಕ್ತಿ ಅವರು ಮಾಡಿರುವ ಉತ್ತಮ ಕೆಲಸಗಳಿಂದಾಗಿ ಅವರ ಮೇಲೆ ನ್ಯಾಯಾಲಯವು ಹೆಚ್ಚಿನ ಗೌರವ ಹೊಂದಿದೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. ಎಲ್ಗರ್ ಪರಿಷತ್, ಭೀಮಾ ಕೋರೆಗಾಂವ್ ಪ್ರಕರಣದಲ್ಲಿ UAPA ಅಡಿಯಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿಯೇ ಸ್ಟಾನ್ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ.

ಫಾದರ್‌ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಮರಣೋತ್ತರವಾಗಿ ವಿಚಾರಣೆ ನಡೆಸುತ್ತಿರುವ ಬಾಂಬೆ ಹೈಕೋರ್ಟ್, ಸೋಮವಾರ ವಿಚಾರಣೆ ವೇಳೆ ಈ ಅಭಿಪ್ರಾಯ ಮಂಡಿಸಿದೆ.

ಜುಲೈ 5 ರಂದು ಸ್ಟಾನ್ ಸ್ವಾಮಿಯ ವೈದ್ಯಕೀಯ ಜಾಮೀನು ಅರ್ಜಿಯ ವಿಚಾರಣೆ ನಡೆಬೇಕಿದ್ದ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎನ್.ಜೆ.ಜಮದಾರ್ ಅವರ ನ್ಯಾಯಪೀಠ ಈ ಅಭಿಪ್ರಾಯ ನೀಡಿದೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

” ಕಾನೂನುಬದ್ಧವಾಗಿ, ಸ್ಟಾನ್ ಸ್ವಾಮಿ ಅವರ ವಿರುದ್ಧ ಏನೇ ಇರಲಿ ಅದು ಬೇರೆ ವಿಷಯ. ಆದರೆ, ಅವರು ಅದ್ಭುತ ವ್ಯಕ್ತಿ. ಅವರು ಸಮಾಜಕ್ಕೆ ಸೇವೆ ಸಲ್ಲಿಸಿರುವ ರೀತಿಗೆ, ಅವರ ಕೆಲಸದ ಬಗ್ಗೆ ನಮಗೆ ಅಪಾರ ಗೌರವವಿದೆ” ಎಂದು  ನ್ಯಾಯಮೂರ್ತಿ ಶಿಂಧೆ ಹೇಳಿದ್ದಾರೆ.

ಸ್ಟಾನ್ ಸ್ವಾಮಿ ಅವರ ಸಾವಿನ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ನ್ಯಾಯಾಂಗದ ವಿರುದ್ಧ ವ್ಯಕ್ತವಾಗಿರುವ ಆಕ್ರೋಶ, ಟೀಕೆಗಳನ್ನೂ ನ್ಯಾಯಪೀಠ ವಿಚಾರಣೆ ವೇಳೆ ಉಲ್ಲೇಖಿಸಿದೆ. ಜುಲೈ 23 ರಂದು ಹೈಕೋರ್ಟ್ ವಿಚಾರಣೆ ಮುಂದುವರೆಸಲಿದೆ.

ಕಳೆದ ಅಕ್ಟೋಬರ್‌ನಲ್ಲಿ ಎಲ್ಗರ್ ಪರಿಷತ್ ಪ್ರಕರಣಕ್ಕೆ (ಭೀಮಾ ಕೋರೆಗಾಂವ್) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಫಾದರ್‌ ಸ್ಟಾನ್ ಸ್ವಾಮಿ ಅವರನ್ನು ಬಂಧಿಸಿತ್ತು. ‍ಜುಲೈ 5 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ನ್ಯಾಯಾಂಗ ಬಂಧನದಲ್ಲಿಯೇ ಅವರು ನಿಧನರಾದರು.


ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸ್ಟಾನ್ ಸ್ವಾಮಿ ಅದ್ಭುತ ವ್ಯಕ್ತಿ! ನಿಜ ಆದರೆ, ಕೊಳ್ಳೆ ಹೋದ ಮೇಲೆ ದಡ್ಡಿ ಬಾಗಿಲು ಮುಚ್ಚುವ ಪ್ರಯತ್ನದಿಂದ ಏನು ಪ್ರಯೋಜನ?

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...