HomeUncategorizedಬಿಜೆಪಿಯ ಕೋಮುವಾದಿ ರಾಜಕೀಯ ರಾಜ್ಯದಲ್ಲಿ ಬೇರೂರಲು ಬಿಡುವುದಿಲ್ಲ: ಪಿಣರಾಯಿ ವಿಜಯನ್

ಬಿಜೆಪಿಯ ಕೋಮುವಾದಿ ರಾಜಕೀಯ ರಾಜ್ಯದಲ್ಲಿ ಬೇರೂರಲು ಬಿಡುವುದಿಲ್ಲ: ಪಿಣರಾಯಿ ವಿಜಯನ್

- Advertisement -
- Advertisement -

ಬಿಜೆಪಿಯ ಕೋಮುವಾದಿ ರಾಜಕೀಯವನ್ನು ರಾಜ್ಯದಲ್ಲಿ ಬೇರೂರಲು ಎಡಪಕ್ಷಗಳು ಬಿಡುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷವು ಒಂದೇ ಒಂದು ಸ್ಥಾನವನ್ನು ರಾಜ್ಯದಲ್ಲಿ ಗೆಲ್ಲದಂತೆ ನೋಡಿಕೊಳ್ಳುತ್ತೇವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆಲಪ್ಪುಝದಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಪಿಣರಾಯಿ ವಿಜಯನ್, ಎಡಪಕ್ಷಗಳು ರಾಷ್ಟ್ರಕ್ಕೆ ಮತ್ತು ಅದರ ಜನರಿಗೆ ಸಂಘಪರಿವಾರ ಒಡ್ಡಿರುವ ಸವಾಲುಗಳನ್ನು ಜಯಿಸುತ್ತವೆ ಮತ್ತು ಅವರನ್ನು ಅಧಿಕಾರದಿಂದ ಕಿತ್ತೊಗೆಯಲು ಕೆಲಸ ಮಾಡುತ್ತವೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದ ನಾವು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ ಮತ್ತು ಅದಕ್ಕಾಗಿಯೇ ನಾವು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ವಿರೋಧಿ ರಂಗಕ್ಕೆ ಸಕ್ರಿಯವಾಗಿ ಸೇರಿಕೊಂಡಿದ್ದೇವೆ. ನಾವು ಒಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇವೆ. ಬಿಜೆಪಿ ಎಲ್ಲಾ 20 ಕ್ಷೇತ್ರಗಳಲ್ಲಿ ಸೋಲು ಮಾತ್ರ ಕಾಣುವುದಲ್ಲ, ಅವರು ಈ ಬಾರಿ ಯಾವುದೇ ಕ್ಷೇತ್ರದಲ್ಲಿ ಎರಡನೇ ಸ್ಥಾನಕ್ಕೆ ಬರಲು ಕೂಡ ವಿಫಲರಾಗುತ್ತಾರೆ ಎಂದು ವಿಜಯನ್ ಹೇಳಿದರು.

ಈ ಚುನಾವಣೆ ದೇಶದ ಭವಿಷ್ಯವನ್ನು ನಿರ್ಧರಿಸಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ. ಕಳೆದ ಐದು ವರ್ಷಗಳ ಅನುಭವದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದರಲ್ಲಿ ಅರ್ಥವಿಲ್ಲ ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ. ದೇಶದಲ್ಲಿ ಅಪಾಯಕಾರಿ ನೀತಿಗಳನ್ನು ಜಾರಿಗೊಳಿಸುತ್ತಿರುವ ಬಿಜೆಪಿಯನ್ನು ಬೇರು ಸಮೇತ ಕಿತ್ತೊಗೆಯಲು ಎಡಪಕ್ಷಗಳು ಜನರಿಂದ ಮತ ಕೇಳುತ್ತಿವೆ ಎಂದು ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಕಾಂಗ್ರೆಸ್‌ ಪಕ್ಷ ಬಿಜೆಪಿಗೆ ಜಾಗ ನೀಡಿ ಮತ ನೀಡಿದೆ ಆದರೆ ಕೋಮುವಾದಿ ಫ್ಯಾಸಿಸ್ಟ್‌ಗಳ ವಿರುದ್ಧ ಹೋರಾಡಿದ ಇತಿಹಾಸ ಎಡಪಕ್ಷಗಳಿಗೆ ಇದೆ. ಕೆಲವು ಮತಗಳಿಗಾಗಿ ನಾವು ನಮ್ಮ ರಾಜಕೀಯವನ್ನು ಬದಲಾಯಿಸುವುದಿಲ್ಲ. ಸಿಎಎ ವಿಚಾರದಲ್ಲಿ 2024ರ ಲೋಕಸಭೆ ಚುನಾವಣೆಯ ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಉದ್ದೇಶಿತ ಮೌನವನ್ನು ಕಾಣಬಹುದು ವಿಜಯನ್‌ ಹೇಳಿದ್ದಾರೆ.

ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ: ಜೈಪುರದಲ್ಲಿ ಸೋನಿಯಾ ಗಾಂಧಿ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...