Homeಮುಖಪುಟ'ಇಂಡಿಯಾ ಒಕ್ಕೂಟ'ದ ಸದಸ್ಯರೊಂದಿಗೆ ಮಾತನಾಡದೇ ಟಿಡಿಪಿ, ಜೆಡಿಯು ಜೊತೆಗಿನ ಮೈತ್ರಿ ಬಗ್ಗೆ ಉತ್ತರಿಸುವುದಿಲ್ಲ: ರಾಹುಲ್ ಗಾಂಧಿ

‘ಇಂಡಿಯಾ ಒಕ್ಕೂಟ’ದ ಸದಸ್ಯರೊಂದಿಗೆ ಮಾತನಾಡದೇ ಟಿಡಿಪಿ, ಜೆಡಿಯು ಜೊತೆಗಿನ ಮೈತ್ರಿ ಬಗ್ಗೆ ಉತ್ತರಿಸುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಇಂಡಿಯಾ ಮೈತ್ರಿಕೂಟದ ಪಾಲುದಾರರೊಂದಿಗೆ ಮಾತನಾಡದೆ ಟಿಡಿಪಿ ಮತ್ತು ಜೆಡಿಯು ಜೊತೆಗಿನ ಮೈತ್ರಿ ಬಗ್ಗೆ ಉತ್ತರಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ “ಸರ್ಕಾರ ರಚನೆಗೆ ಮುಂದಾಗುವಿರಾ?” ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ನಮ್ಮದು ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಪಕ್ಷ. ನಮ್ಮ ಪಾಲುದಾರರ ಜೊತೆ ಮಾತನಾಡದೇ ಈ ಪ್ರಶ್ನೆಗೆ ಉತ್ತರಿಸುವುದಿಲ್ಲ. ನಾಳೆ ನಮ್ಮ ಒಕ್ಕೂಟದ ಸಭೆ ಇದೆ. ಅಲ್ಲಿ ಎಲ್ಲರ ಅಭಿಪ್ರಾಯಗಳನ್ನು ಕೇಳಿ ಮುಂದಿನ ನಡೆಯ ಬಗ್ಗೆ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.

“ಈ ಚುನಾವಣೆಯಲ್ಲಿ ನಾವು ಬಿಜೆಪಿ ಮತ್ತು ಎನ್‌ಡಿಎ ಸರ್ಕಾರ ದುರುಪಯೋಗಪಡಿಸಿಕೊಂಡ ಸ್ವತಂತ್ರ ಸಂಸ್ಥೆಗಳ ವಿರುದ್ಧ ಹೋರಾಡಿದ್ದೇವೆ. ನಮ್ಮ ಬ್ಯಾಂಕ್‌ ಖಾತೆಗಳನ್ನು ದುರುಪಯೋಗ ಪಡಿಸಿಕೊಂಡರು. ನಮ್ಮ ಮೈತ್ರಿಕೂಟದ ಸದಸ್ಯರನ್ನು ಜೈಲಿಗಟ್ಟಿ ತೊಂದರೆ ನೀಡಿದರು. ಆದರೂ, ನಮಗೆ ಜನರ ಮೇಲೆ ನಮಗೆ ನಂಬಿಕೆಯಿತ್ತು. ಜನರು ಅದಕ್ಕೆಲ್ಲ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ” ಎಂದಿದ್ದಾರೆ.

“ಜನರಿಗೆ ನರೇಂದ್ರ ಮೋದಿಯವರ ಬಗ್ಗೆ ಇರುವ ತಿರಸ್ಕಾರ ಭಾವನೆ ಈ ಚುನಾವಣೆಯಲ್ಲಿ ಹೊರಬಂದಿದೆ. ಇವತ್ತು ನೀವು ಅದಾನಿ ಸ್ಟಾಕ್‌ಗಳನ್ನು ನೋಡಿದ್ದೀರಾ? ಎಲ್ಲವೂ ಬಿದ್ದು ಹೋಗಿದೆ. ಮೋದಿಯಿಲ್ಲದಿದ್ದರೆ ಅವರು ಯಾರೂ ಇಲ್ಲ ಎನ್ನುವುದು ಇಂದು ಸಾಬೀತಾಗಿದೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

“ಉತ್ತರಪ್ರದೇಶದ ಜನರು ಅಚ್ಚರಿಯ ಫಲಿತಾಂಶ ನೀಡಿದ್ದಾರೆ. ಭಾರತದ ರಾಜಕಾರಣದ ಗತಿಯನ್ನು ಗಮನಿಸಿ, ಉತ್ತರ ಪ್ರದೇಶವು ಸಂವಿಧಾನದ ರಕ್ಷಣೆ ಮಾಡಿದೆ. ನಿಮಗೆ ವಿಶೇಷ ಧನ್ಯವಾದಗಳು. ಉತ್ತರ ಪ್ರದೇಶದಂತೆಯೇ ಇತರ ಕೆಲವು ರಾಜ್ಯಗಳೂ ಉತ್ತಮ ಫಲಿತಾಂಶ ನೀಡಿವೆ. ಆದರೆ, ಉತ್ತರ ಪ್ರದೇಶದ ಜನರ ನಡೆ ಗಮನಾರ್ಹವಾದುದು” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...