Homeಕರ್ನಾಟಕಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

ಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

- Advertisement -
- Advertisement -

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲಾಗುವುದು” ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿರುವುದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟವಾಗುತ್ತದೆ ಎಂಬ ಲೆಕ್ಕಾಚಾರಗಳಿಗೆ ಅವಕಾಶ ಒದಗಿಸಿದೆ.

2013, 2018ರಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆದಿದ್ದವು. ಈಗ 5.21 ಕೋಟಿಗೂ ಹೆಚ್ಚು ಮತದಾರರಿದ್ದು, ಗಮನಾರ್ಹ ಸಂಖ್ಯೆಯ ಮತದಾರರು ಮೇ 10 ರಂದು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ರಂದು ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಕೊನೆಯ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮನವಿ ಮಾಡಿದ್ದ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್‌ನ ನಿಯೋಗ, “ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಕೋರಿದ್ದರು. ಆದರೆ ಪ್ರಸ್ತುತ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಹೊಂದಿರುವ ಬಿಜೆಪಿಗೆ ಈ ನಿರ್ಧಾರ ಹೆಚ್ಚು ಅನುಕೂಲ ಮಾಡಿಕೊಡುವುದಿಲ್ಲ ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಮೊದಲ ಹಂತದ ಚುನಾವಣೆಯಲ್ಲಿ ಋಣಾತ್ಮಕ ಬೆಳವಣಿಗೆಗಳು ಕಂಡುಬಂದರೆ, ಎರಡನೇ ಹಂತದಲ್ಲಿ ಆ ನಷ್ಟವನ್ನು ಸರಿದೂಗಿಸಲು ಅವಕಾಶ ದೊರಕುತ್ತಿತ್ತು ಎಂಬ ಅಂಶದತ್ತ ವರದಿ ಗಮನ ಹರಿಸಿದೆ.

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಉದಾಹರಣೆಯೊಂದನ್ನು ಉಲ್ಲೇಖಿಸುತ್ತಾ, “1985ರಲ್ಲಿ ಮೊದಲ ಹಂತದ ಮತದಾನ ಮುಗಿದ ಬಳಿಕ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೆ ಆಡಳಿತಾರೂಢ ಜನತಾ ಪಕ್ಷ ಹಿನ್ನಡೆ ಅನುಭವಿಸುತ್ತಿದೆ ಎಂಬ ಗುಪ್ತಚರ ಮಾಹಿತಿ ಸಿಕ್ಕಿತ್ತು. ಹೆಚ್ಚುವರಿ ಪ್ರಣಾಳಿಕೆಯಲ್ಲಿ ಪಕ್ಷವು ಪ್ರತಿ ಕೆಜಿಗೆ 2 ರೂ. ಅಕ್ಕಿ, ಪ್ರತಿ ಘಟಕಕ್ಕೆ 25 ರೂ.ಗಳಲ್ಲಿ ಸೀರೆ, ಧೋತಿ ಸೆಟ್‌ ನೀಡುವುದಾಗಿ ಘೋಷಿಸಿತ್ತು. ಅಂತಿಮವಾಗಿ ಪಕ್ಷ 139 ವಿಧಾನಸಭಾ ಸ್ಥಾನಗಳನ್ನು ಗೆದ್ದುಕೊಂಡಿತು” ಎಂದು ನೆನಪಿಸಿಕೊಂಡಿದ್ದಾರೆ.

ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಉಗ್ರಪ್ಪ, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಇದರಿಂದ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯು ದಕ್ಷಿಣ ಭಾರತದಲ್ಲಿ ಹಿಡಿತ ಸಾಧಿಸಲು ಕರ್ನಾಟಕ ರಾಜ್ಯವನ್ನು ಹೆಬ್ಬಾಗಿಲಿನಂತೆ ನೋಡುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿಯನ್ನು ತಗ್ಗಿಸಲು ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ನಂಬಿ ಕೂತಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸುವ ನಿರ್ಧಾರದಿಂದ ಪ್ರಧಾನಿಯವರ ಮೇಲೆ ಹೆಚ್ಚಿನ ಭಾರ ಹಾಕಲು ಕಷ್ಟವಾಗಬಹುದು.

“ಎರಡು ಹಂತಗಳಲ್ಲಿ ಮತದಾನ ನಡೆದಿದ್ದರೆ ಮೋದಿ ಅವರು ವ್ಯಾಪಕ ಪ್ರಚಾರ ನಡೆಸುತ್ತಿದ್ದರು. ಅದು ಹೆಚ್ಚಿನ ಪರಿಣಾಮಗಳಿಗೆ ಕಾರಣವಾಗುತ್ತಿತ್ತು” ಎಂದು ಮತ್ತೊಬ್ಬ ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಜೆಡಿಎಸ್‌ಗೂ ಅನುಕೂಲವಿಲ್ಲ

ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಷ್ಟೇ ಸ್ಟಾರ್‌ ಪ್ರಚಾರಕರು. ಹೀಗಾಗಿ ಒಂದೇ ಹಂತದ ಮತದಾನವು ಜೆಡಿಎಸ್‌ಗೂ ಪ್ರತಿಕೂಲವಾಗಬಹುದು. ಇದನ್ನು ಸರಿದೂಗಿಸುವ ಭಾಗವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕುಮಾರಸ್ವಾಮಿ ಅವರ ಆಹ್ವಾನದ ಮೇರೆಗೆ ಆಯ್ದ ಸ್ಥಾನಗಳಲ್ಲಿ ಜೆಡಿಎಸ್ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕೂಡ ಚುನಾವಣಾ ಆಯೋಗದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಮೇ 10 ರಂದು ಒಂದೇ ಹಂತದಲ್ಲಿ ನಡೆಸಲು ಭಾರತ ಚುನಾವಣಾ ಆಯೋಗ (ಇಸಿಐ) ಕೈಗೊಂಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಇದು ಅಕ್ರಮ ಹಣ ಮತ್ತು ಬಲ ಪ್ರಯೋಗಕ್ಕೆ ಕಡಿವಾಣ ಹಾಕಲು ಸಹಾಯ ಮಾಡುತ್ತದೆ. ನಿಷ್ಪಕ್ಷಪಾತ ಚುನಾವಣೆ ನಡೆಸುವಂತೆ ನಾನು ಆಯೋಗಕ್ಕೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...