Homeಕರ್ನಾಟಕಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

ಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

- Advertisement -
- Advertisement -

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲಾಗುವುದು” ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿರುವುದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟವಾಗುತ್ತದೆ ಎಂಬ ಲೆಕ್ಕಾಚಾರಗಳಿಗೆ ಅವಕಾಶ ಒದಗಿಸಿದೆ.

2013, 2018ರಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆದಿದ್ದವು. ಈಗ 5.21 ಕೋಟಿಗೂ ಹೆಚ್ಚು ಮತದಾರರಿದ್ದು, ಗಮನಾರ್ಹ ಸಂಖ್ಯೆಯ ಮತದಾರರು ಮೇ 10 ರಂದು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ರಂದು ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಕೊನೆಯ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮನವಿ ಮಾಡಿದ್ದ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್‌ನ ನಿಯೋಗ, “ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಕೋರಿದ್ದರು. ಆದರೆ ಪ್ರಸ್ತುತ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಹೊಂದಿರುವ ಬಿಜೆಪಿಗೆ ಈ ನಿರ್ಧಾರ ಹೆಚ್ಚು ಅನುಕೂಲ ಮಾಡಿಕೊಡುವುದಿಲ್ಲ ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಮೊದಲ ಹಂತದ ಚುನಾವಣೆಯಲ್ಲಿ ಋಣಾತ್ಮಕ ಬೆಳವಣಿಗೆಗಳು ಕಂಡುಬಂದರೆ, ಎರಡನೇ ಹಂತದಲ್ಲಿ ಆ ನಷ್ಟವನ್ನು ಸರಿದೂಗಿಸಲು ಅವಕಾಶ ದೊರಕುತ್ತಿತ್ತು ಎಂಬ ಅಂಶದತ್ತ ವರದಿ ಗಮನ ಹರಿಸಿದೆ.

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಉದಾಹರಣೆಯೊಂದನ್ನು ಉಲ್ಲೇಖಿಸುತ್ತಾ, “1985ರಲ್ಲಿ ಮೊದಲ ಹಂತದ ಮತದಾನ ಮುಗಿದ ಬಳಿಕ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೆ ಆಡಳಿತಾರೂಢ ಜನತಾ ಪಕ್ಷ ಹಿನ್ನಡೆ ಅನುಭವಿಸುತ್ತಿದೆ ಎಂಬ ಗುಪ್ತಚರ ಮಾಹಿತಿ ಸಿಕ್ಕಿತ್ತು. ಹೆಚ್ಚುವರಿ ಪ್ರಣಾಳಿಕೆಯಲ್ಲಿ ಪಕ್ಷವು ಪ್ರತಿ ಕೆಜಿಗೆ 2 ರೂ. ಅಕ್ಕಿ, ಪ್ರತಿ ಘಟಕಕ್ಕೆ 25 ರೂ.ಗಳಲ್ಲಿ ಸೀರೆ, ಧೋತಿ ಸೆಟ್‌ ನೀಡುವುದಾಗಿ ಘೋಷಿಸಿತ್ತು. ಅಂತಿಮವಾಗಿ ಪಕ್ಷ 139 ವಿಧಾನಸಭಾ ಸ್ಥಾನಗಳನ್ನು ಗೆದ್ದುಕೊಂಡಿತು” ಎಂದು ನೆನಪಿಸಿಕೊಂಡಿದ್ದಾರೆ.

ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಉಗ್ರಪ್ಪ, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಇದರಿಂದ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯು ದಕ್ಷಿಣ ಭಾರತದಲ್ಲಿ ಹಿಡಿತ ಸಾಧಿಸಲು ಕರ್ನಾಟಕ ರಾಜ್ಯವನ್ನು ಹೆಬ್ಬಾಗಿಲಿನಂತೆ ನೋಡುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿಯನ್ನು ತಗ್ಗಿಸಲು ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ನಂಬಿ ಕೂತಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸುವ ನಿರ್ಧಾರದಿಂದ ಪ್ರಧಾನಿಯವರ ಮೇಲೆ ಹೆಚ್ಚಿನ ಭಾರ ಹಾಕಲು ಕಷ್ಟವಾಗಬಹುದು.

“ಎರಡು ಹಂತಗಳಲ್ಲಿ ಮತದಾನ ನಡೆದಿದ್ದರೆ ಮೋದಿ ಅವರು ವ್ಯಾಪಕ ಪ್ರಚಾರ ನಡೆಸುತ್ತಿದ್ದರು. ಅದು ಹೆಚ್ಚಿನ ಪರಿಣಾಮಗಳಿಗೆ ಕಾರಣವಾಗುತ್ತಿತ್ತು” ಎಂದು ಮತ್ತೊಬ್ಬ ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಜೆಡಿಎಸ್‌ಗೂ ಅನುಕೂಲವಿಲ್ಲ

ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಷ್ಟೇ ಸ್ಟಾರ್‌ ಪ್ರಚಾರಕರು. ಹೀಗಾಗಿ ಒಂದೇ ಹಂತದ ಮತದಾನವು ಜೆಡಿಎಸ್‌ಗೂ ಪ್ರತಿಕೂಲವಾಗಬಹುದು. ಇದನ್ನು ಸರಿದೂಗಿಸುವ ಭಾಗವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕುಮಾರಸ್ವಾಮಿ ಅವರ ಆಹ್ವಾನದ ಮೇರೆಗೆ ಆಯ್ದ ಸ್ಥಾನಗಳಲ್ಲಿ ಜೆಡಿಎಸ್ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕೂಡ ಚುನಾವಣಾ ಆಯೋಗದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಮೇ 10 ರಂದು ಒಂದೇ ಹಂತದಲ್ಲಿ ನಡೆಸಲು ಭಾರತ ಚುನಾವಣಾ ಆಯೋಗ (ಇಸಿಐ) ಕೈಗೊಂಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಇದು ಅಕ್ರಮ ಹಣ ಮತ್ತು ಬಲ ಪ್ರಯೋಗಕ್ಕೆ ಕಡಿವಾಣ ಹಾಕಲು ಸಹಾಯ ಮಾಡುತ್ತದೆ. ನಿಷ್ಪಕ್ಷಪಾತ ಚುನಾವಣೆ ನಡೆಸುವಂತೆ ನಾನು ಆಯೋಗಕ್ಕೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...