Homeಕರ್ನಾಟಕಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

ಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

- Advertisement -
- Advertisement -

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲಾಗುವುದು” ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿರುವುದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟವಾಗುತ್ತದೆ ಎಂಬ ಲೆಕ್ಕಾಚಾರಗಳಿಗೆ ಅವಕಾಶ ಒದಗಿಸಿದೆ.

2013, 2018ರಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆದಿದ್ದವು. ಈಗ 5.21 ಕೋಟಿಗೂ ಹೆಚ್ಚು ಮತದಾರರಿದ್ದು, ಗಮನಾರ್ಹ ಸಂಖ್ಯೆಯ ಮತದಾರರು ಮೇ 10 ರಂದು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ರಂದು ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಕೊನೆಯ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮನವಿ ಮಾಡಿದ್ದ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್‌ನ ನಿಯೋಗ, “ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಕೋರಿದ್ದರು. ಆದರೆ ಪ್ರಸ್ತುತ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಹೊಂದಿರುವ ಬಿಜೆಪಿಗೆ ಈ ನಿರ್ಧಾರ ಹೆಚ್ಚು ಅನುಕೂಲ ಮಾಡಿಕೊಡುವುದಿಲ್ಲ ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಮೊದಲ ಹಂತದ ಚುನಾವಣೆಯಲ್ಲಿ ಋಣಾತ್ಮಕ ಬೆಳವಣಿಗೆಗಳು ಕಂಡುಬಂದರೆ, ಎರಡನೇ ಹಂತದಲ್ಲಿ ಆ ನಷ್ಟವನ್ನು ಸರಿದೂಗಿಸಲು ಅವಕಾಶ ದೊರಕುತ್ತಿತ್ತು ಎಂಬ ಅಂಶದತ್ತ ವರದಿ ಗಮನ ಹರಿಸಿದೆ.

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಉದಾಹರಣೆಯೊಂದನ್ನು ಉಲ್ಲೇಖಿಸುತ್ತಾ, “1985ರಲ್ಲಿ ಮೊದಲ ಹಂತದ ಮತದಾನ ಮುಗಿದ ಬಳಿಕ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೆ ಆಡಳಿತಾರೂಢ ಜನತಾ ಪಕ್ಷ ಹಿನ್ನಡೆ ಅನುಭವಿಸುತ್ತಿದೆ ಎಂಬ ಗುಪ್ತಚರ ಮಾಹಿತಿ ಸಿಕ್ಕಿತ್ತು. ಹೆಚ್ಚುವರಿ ಪ್ರಣಾಳಿಕೆಯಲ್ಲಿ ಪಕ್ಷವು ಪ್ರತಿ ಕೆಜಿಗೆ 2 ರೂ. ಅಕ್ಕಿ, ಪ್ರತಿ ಘಟಕಕ್ಕೆ 25 ರೂ.ಗಳಲ್ಲಿ ಸೀರೆ, ಧೋತಿ ಸೆಟ್‌ ನೀಡುವುದಾಗಿ ಘೋಷಿಸಿತ್ತು. ಅಂತಿಮವಾಗಿ ಪಕ್ಷ 139 ವಿಧಾನಸಭಾ ಸ್ಥಾನಗಳನ್ನು ಗೆದ್ದುಕೊಂಡಿತು” ಎಂದು ನೆನಪಿಸಿಕೊಂಡಿದ್ದಾರೆ.

ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಉಗ್ರಪ್ಪ, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಇದರಿಂದ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯು ದಕ್ಷಿಣ ಭಾರತದಲ್ಲಿ ಹಿಡಿತ ಸಾಧಿಸಲು ಕರ್ನಾಟಕ ರಾಜ್ಯವನ್ನು ಹೆಬ್ಬಾಗಿಲಿನಂತೆ ನೋಡುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿಯನ್ನು ತಗ್ಗಿಸಲು ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ನಂಬಿ ಕೂತಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸುವ ನಿರ್ಧಾರದಿಂದ ಪ್ರಧಾನಿಯವರ ಮೇಲೆ ಹೆಚ್ಚಿನ ಭಾರ ಹಾಕಲು ಕಷ್ಟವಾಗಬಹುದು.

“ಎರಡು ಹಂತಗಳಲ್ಲಿ ಮತದಾನ ನಡೆದಿದ್ದರೆ ಮೋದಿ ಅವರು ವ್ಯಾಪಕ ಪ್ರಚಾರ ನಡೆಸುತ್ತಿದ್ದರು. ಅದು ಹೆಚ್ಚಿನ ಪರಿಣಾಮಗಳಿಗೆ ಕಾರಣವಾಗುತ್ತಿತ್ತು” ಎಂದು ಮತ್ತೊಬ್ಬ ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಜೆಡಿಎಸ್‌ಗೂ ಅನುಕೂಲವಿಲ್ಲ

ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಷ್ಟೇ ಸ್ಟಾರ್‌ ಪ್ರಚಾರಕರು. ಹೀಗಾಗಿ ಒಂದೇ ಹಂತದ ಮತದಾನವು ಜೆಡಿಎಸ್‌ಗೂ ಪ್ರತಿಕೂಲವಾಗಬಹುದು. ಇದನ್ನು ಸರಿದೂಗಿಸುವ ಭಾಗವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕುಮಾರಸ್ವಾಮಿ ಅವರ ಆಹ್ವಾನದ ಮೇರೆಗೆ ಆಯ್ದ ಸ್ಥಾನಗಳಲ್ಲಿ ಜೆಡಿಎಸ್ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕೂಡ ಚುನಾವಣಾ ಆಯೋಗದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಮೇ 10 ರಂದು ಒಂದೇ ಹಂತದಲ್ಲಿ ನಡೆಸಲು ಭಾರತ ಚುನಾವಣಾ ಆಯೋಗ (ಇಸಿಐ) ಕೈಗೊಂಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಇದು ಅಕ್ರಮ ಹಣ ಮತ್ತು ಬಲ ಪ್ರಯೋಗಕ್ಕೆ ಕಡಿವಾಣ ಹಾಕಲು ಸಹಾಯ ಮಾಡುತ್ತದೆ. ನಿಷ್ಪಕ್ಷಪಾತ ಚುನಾವಣೆ ನಡೆಸುವಂತೆ ನಾನು ಆಯೋಗಕ್ಕೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...