- Advertisement -
- Advertisement -
‘ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೋಮವಾರ ತಿಳಿಸಿದ್ದಾರೆ.
ಈ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕದಳವು (ಆರ್ಎಲ್ಡಿ) ಮೈತಿಯಲ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.
‘ರಾಷ್ಟ್ರೀಯ ಲೋಕಾದಳದೊಂದಿಗೆ ನಮ್ಮ ಪಕ್ಷದ ಮೈತ್ರಿಯಾಗಿ ಚುನಾವಣೆ ಎದುರಿಸಲಿದ್ದು, ಸೀಟು ಹಂಚಿಕೆ ಇನ್ನು ಅಂತಿಮಗೊಂಡಿಲ್ಲ’ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಅಜಂಗಡದ ಸಮಾಜವಾದಿ ಪಕ್ಷದ ಸಂಸದರು ಮುಖ್ಯಮಂತ್ರಿ ಮುಖವೂ ಆಗಿರುವ ಅಖಿಲೇಶ್ ಯಾದವ್, ‘ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ತಾಲಿಬಾನ್ ವಿರುದ್ದ ವೈಮಾನಿಕ ದಾಳಿಗೆ ಭಾರತ ಸಿದ್ದವಾಗಿದೆ: ಯೋಗಿ ಆದಿತ್ಯನಾಥ್