Homeಮುಖಪುಟಜನ ಆಶೀರ್ವಾದ ಯಾತ್ರೆಗೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ; ಬಿಜೆಪಿ ವಿರುದ್ಧ ತಿರುಗಿಬಿದ್ದ ಉಮಾಭಾರತಿ

ಜನ ಆಶೀರ್ವಾದ ಯಾತ್ರೆಗೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ; ಬಿಜೆಪಿ ವಿರುದ್ಧ ತಿರುಗಿಬಿದ್ದ ಉಮಾಭಾರತಿ

- Advertisement -
- Advertisement -

ಮಧ್ಯಪ್ರದೇಶದ ಜನ ಆಶೀರ್ವಾದ ಯಾತ್ರೆಗೆ ತನಗೆ ಆಮಂತ್ರಣ ನೀಡದ ಬಗ್ಗೆ ಮಾಜಿ ಮುಖ್ಯಮಂತ್ರಿ  ಉಮಾ ಭಾರತಿ ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದಿದ್ದು, ನನ್ನನ್ನು ಆಹ್ವಾನಿಸಿದ್ದರೂ ಯಾತ್ರೆಗೆ ಹೋಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು ಯಾತ್ರೆಯಲ್ಲಿ ಭಾಗವಹಿಸಿದರೆ ನಾನು ಜನರ ಪ್ರಮುಖ ಆಕರ್ಷಣೆಯಾಗುತ್ತೇನೆ, ಇದರಿಂದ ಬಿಜೆಪಿ ನಾಯಕರಿಗೆ ಹಿಂಜರಿಕೆಯಾಗುತ್ತದೆ ಎಂದು ಕರೆದಿಲ್ಲ ಎಂದು ಹೇಳಿದ್ದಾರೆ.

ನಾನು ಅಲ್ಲಿದ್ದರೆ, ಇಡೀ ಸಾರ್ವಜನಿಕರ ಗಮನವು ನನ್ನ ಮೇಲೆ ಬೀಳುತ್ತದೆ. ಇದರಿಂದ ಬಿಜೆಪಿ ನಾಯಕರು ಹೆದರುತ್ತಾರೆ ಎಂದು 64 ವರ್ಷದ ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಅವರು ಹೇಳಿದ್ದಾರೆ.

ಬಿಜೆಪಿಯ ಹಿರಿಯ ನಾಯಕಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸ್ವಪಕ್ಷದ ನಾಯರ ವಿರುದ್ಧವೇ ಟೀಕೆಯನ್ನು ಮಾಡಿದ್ದು , ಬಿಜೆಪಿಯ ಜನ ಆಶೀರ್ವಾದ ಯಾತ್ರೆಗೆ ನನ್ನನ್ನು ಆಹ್ವಾನಿಸಿಲ್ಲ. ಆಹ್ವಾನ ನೀಡಿದರೆ ಅಥವಾ ನೀಡದಿದ್ದರೆ ನಾನೇನು ಪ್ರಾಮುಖ್ಯತೆ ಕೊಡುವುದಿಲ್ಲ. ಈಗ ನನ್ನನ್ನು ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಉದ್ಘಾಟನೆ ಅಥವಾ ಸೆ.25ರ ದಿನದ ಸಮಾರೋಪ ದಿನದ ಕಾರ್ಯಕ್ರಮಕ್ಕೆ ನಾನು ಹಾಜರಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜನ ಆಶೀರ್ವಾದ ಯಾತ್ರೆಗೆ ಚಾಲನೆಯನ್ನು ನೀಡಲಿದ್ದಾರೆ. ಯಾತ್ರೆಯು 2018ರ ಚುನಾವಣೆಯಲ್ಲಿ ಒಟ್ಟು 30 ಕ್ಷೇತ್ರಗಳಲ್ಲಿ ಬಿಜೆಪಿ 24 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದ ವಿಂದ್ಯಾ ಪ್ರದೇಶದಲ್ಲಿ ಸಾಗಲಿದೆ.

ಮಧ್ಯಪ್ರದೇಶದಲ್ಲಿ 2003ರಲ್ಲಿ ಉಮಾಭಾರತಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸಿತ್ತು. ಬಳಿಕ  ಅವರನ್ನು  2005ರಲ್ಲಿ ಅಶಿಸ್ತಿನ ಕಾರಣಕ್ಕಾಗಿ ಬಿಜೆಪಿಯಿಂದ ಉಚ್ಛಾಟಣೆ ಮಾಡಲಾಗಿತ್ತು. ಮತ್ತೆ ಅವರು 2011ರಲ್ಲಿ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದರು.

ಮಧ್ಯಪ್ರದೇಶದ ಬಿಜೆಪಿ ಘಟಕದ ವಿರುದ್ಧ ಟೀಕೆ ಮಾಡಿದರೂ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗಿನ ತನ್ನ ಬಾಂಧವ್ಯವನ್ನು ಮುಂದುವರಿಸುವುದಾಗಿ ಉಮಾ ಭಾರತಿ ಹೇಳಿದ್ದಾರೆ.

ಇದನ್ನು ಓದಿ: 370ನೇ ವಿಧಿ ರದ್ದತಿ ವಿರುದ್ಧ ವಾದಿಸಿದ ಉಪನ್ಯಾಸಕರ ಅಮಾನತು ರದ್ದು 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...