Homeಮುಖಪುಟಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲ, ರಾಷ್ಟ್ರಪತಿಗೆ ಸಮಯ ನಿಗದಿಪಡಿಸಿದ ಬಗ್ಗೆ ಮಹತ್ವದ ವಿಚಾರಣೆ

- Advertisement -
- Advertisement -

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್ ಬುಧವಾರ (ಆ.20) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ  ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8ರ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಾಲಯಕ್ಕೆ ಮಾಡಿದ ಉಲ್ಲೇಖದ ಕುರಿತು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರ ಪೀಠವು ವಾದಗಳನ್ನು ಆಲಿಸುತ್ತಿದೆ.

ರಾಷ್ಟ್ರಪತಿಯ ಉಲ್ಲೇಖದ ಕುರಿತು ಜುಲೈ 22ರಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಂವಿಧಾನದ 200ನೇ ವಿಧಿಯ ಪ್ರಕಾರ ಮಸೂದೆಗಳಿಗೆ ಒಪ್ಪಿಗೆ ನೀಡುವ ವಿಷಯದಲ್ಲಿ ರಾಜ್ಯಪಾಲರಿಗೆ ನಾಲ್ಕು ಆಯ್ಕೆಗಳಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಮಸೂದೆಗಳಿಗೆ ಒಪ್ಪಿಗೆ ನೀಡುವುದು, ಒಪ್ಪಿಗೆಯನ್ನು ತಡೆಹಿಡಿಯುವುದು, ರಾಷ್ಟ್ರಪತಿಯ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವುದು ಅಥವಾ ಮಸೂದೆಯನ್ನು ವಿಧಾನಸಭೆಗೆ ಹಿಂತಿರುಗಿಸುವುದು ಈ ನಾಲ್ಕು ಆಯ್ಕೆಗಳು ಎಂದು ತುಷಾರ್ ಮೆಹ್ತಾ ಪೀಠದ ಮುಂದೆ ವಿವರಿಸಿದ್ದಾರೆ.

ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯುತ್ತಿರುವುದಾಗಿ ತಿಳಿಸಿದರೆ, ಮಸೂದೆ ಅಲ್ಲಿಗೆ ‘ಸತ್ತುಹೋಯಿತು’ ಎಂದರ್ಥ. ಒಪ್ಪಿಗೆಯನ್ನು ತಡೆಹಿಡಿಯಲಾಗಿದ್ದರೆ, ರಾಜ್ಯಪಾಲರು ಮಸೂದೆಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸಬೇಕಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನಿಮ್ಮ ಪ್ರಕಾರ, ತಡೆಹಿಡಿಯುವುದು ಎಂದರೆ ಮಸೂದೆ ಅಂಗೀಕಾರವಾಗುತ್ತದೆ ಎಂದರ್ಥವೇ?” ಎಂದು ಕೇಳಿದ್ದಾರೆ. “ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸದಿದ್ದರೆ ಅವರು ಅದನ್ನು ದೀರ್ಘ ಅವಧಿಯವರೆಗೆ ತಡೆ ಹಿಡಿಯಬಹುದು” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, “ಸಂವಿಧಾನವೇ ರಾಜ್ಯಪಾಲರಿಗೆ ಆ ವಿವೇಚನೆಯನ್ನು ನೀಡಿದೆ” ಎಂದಿದ್ದಾರೆ.

“ಹಾಗಾದರೆ ರಾಜ್ಯಪಾಲರಿಗೆ ಸಂಪೂರ್ಣ ಅಧಿಕಾರ ನೀಡದಂತೆ ಆಗುವುದಿಲ್ಲವೇ? ಎಂದು ಮರು ಪ್ರಶ್ನೆ ಹಾಕಿದ ಮುಖ್ಯ ನ್ಯಾಯಾಧೀಶರು, “ಬಹುಮತದಿಂದ ಆಯ್ಕೆಯಾದ ಸರ್ಕಾರ ರಾಜ್ಯಪಾಲರ ಇಚ್ಛೆ ಮತ್ತು ಕಲ್ಪನೆಗೆ ಒಳಪಡುವಂತಾಗುವುದಿಲ್ಲವೆ? ಎಂದು ಕೇಳಿದ್ದಾರೆ.

ರಾಜ್ಯಪಾಲರು ಯಾವುದೇ ಸಂದರ್ಭದಲ್ಲಿ ಮಸೂದೆಯ ಕುರಿತು ತಮ್ಮ ನಿರ್ಧಾರವನ್ನು ‘ಘೋಷಿಸಬೇಕು’ ಅಥವಾ ತಿಳಿಸಬೇಕು. ಕಾರಣವನ್ನು ನೀಡದೆ ಒಪ್ಪಿಗೆಯನ್ನು ತಡೆಹಿಡಿಯಬಾರದು ಎಂದ ಹೇಳಿದ ಪೀಠ. ಇಲ್ಲಿ ‘ತಡೆಹಿಡಿಯುವಿಕೆ’ ಪ್ರಮುಖ ಅಂಶವಾಗಿದೆ. ಅದು ತಾತ್ಕಾಲಿಕವೇ, ಶಾಶ್ವತವೇ ಎಂದು ನೋಡಬೇಕು ಎಂದಿದೆ.

ರಾಜ್ಯಪಾಲರು ಒಪ್ಪಿಗೆಯನ್ನು ಯಾವಾಗ ತಡೆಹಿಡಿಯುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸಾಲಿಸಿಟರ್ ಜನರಲ್, ಮಸೂದೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಅಥವಾ ಅಪೇಕ್ಷಣೀಯವಲ್ಲದ ನಿಬಂಧನೆಗಳನ್ನು ಹೊಂದಿರುವಾಗ ತಡೆಹಿಡಿಯಲಾಗುತ್ತದೆ ಎಂದಿದ್ದಾರೆ.

ತಡೆಹಿಡಿಯುವ ಅಧಿಕಾರವನ್ನು ವಿರಳವಾಗಿ ಬಳಸಬೇಕು ಮತ್ತು ಮೊದಲ ಹಂತದಲ್ಲಿ ಮಾತ್ರ ಬಳಸಬೇಕು ಏಕೆಂದರೆ ಅದು ಮಸೂದೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ತುಷಾರ್ ಮೆಹ್ತಾ ವಿವರಿಸಿದ್ಧಾರೆ.

ಮುಂದುವರಿದು, “ರಾಜ್ಯಪಾಲರು ಕೇವಲ ಒಬ್ಬರು ಪೋಸ್ಟ್‌ಮ್ಯಾನ್ ಅಲ್ಲ. ಅವರು ರಾಷ್ಟ್ರಪತಿಗಳಿಂದ ನೇಮಕಗೊಂಡ ಭಾರತ ಒಕ್ಕೂಟವನ್ನು ಪ್ರತಿನಿಧಿಸುತ್ತಾರೆ. ರಾಷ್ಟ್ರಪತಿಯನ್ನು ಇಡೀ ರಾಷ್ಟ್ರವು ಸಂಪೂರ್ಣ ಚುನಾವಣೆಯ ಮೂಲಕ ಆಯ್ಕೆ ಮಾಡುತ್ತದೆ. ಅದು ಪ್ರಜಾಪ್ರಭುತ್ವದ ಅಭಿವ್ಯಕ್ತಿಯ ಒಂದು ಮಾರ್ಗವಾಗಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿದಾಗಲೂ, ‘ರಾಜಕೀಯ ಪ್ರಕ್ರಿಯೆಯು’ ಅವರ ಬಾಗಿಲನ್ನು ತಟ್ಟಬಹುದು ಮತ್ತು ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ವಾಪಸ್ ಕಳುಹಿಸಬಹುದು” ಎಂದು ನ್ಯಾಯಾಲಯ ತಿಳಿಸಿದೆ.

“ನಾನು ಮಸೂದೆಯನ್ನು ತಡೆ ಹಿಡಿದಿದ್ದೇನೆ. ಇಲ್ಲಿಗೆ ಈ ವಿಷಯ ಮುಗಿಯಿತು” ಮೊದಲನೇ ಬಾರಿಗೆ ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಹೇಳಿದ್ದಾರೆ.

ಗುರುವಾರವೂ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಹಲವಾರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳದೆ, ನಂತರ ಅವುಗಳನ್ನು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಕ್ಕಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ರಾಜ್ಯಪಾಲರು ಮಸೂದೆಗಳನ್ನು ಸಮಂಜಸವಾದ ಸಮಯದೊಳಗೆ ನಿರ್ಧರಿಸಬೇಕು. ಸಂವಿಧಾನದ ವಿಧಿ 200ರ ಅಡಿಯಲ್ಲಿ ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅದೇ ರೀತಿ, ರಾಷ್ಟ್ರಪತಿಗಳು ಸಂವಿಧಾನದ ವಿಧಿ  201ರ ಅಡಿಯಲ್ಲಿ ಮೂರು ತಿಂಗಳೊಳಗೆ ಮಸೂದೆಗಳ ಕುರಿತು ನಿರ್ಧರಿಸಬೇಕು. ಅದಕ್ಕಿಂತ ಹೆಚ್ಚಿನ ವಿಳಂಬವನ್ನು ವಿವರಿಸಬೇಕು. ರಾಜ್ಯ ಸರ್ಕಾರಕ್ಕೆ ತಿಳಿಸಬೇಕು ಎಂದಿತ್ತು.

ಆದೇಶ ನೀಡುವ ವೇಳೆ ದೀರ್ಘಾವಧಿಯ ನಿಷ್ಕ್ರಿಯತೆಯ ಪ್ರಕರಣಗಳಲ್ಲಿ ‘ಪರಿಗಣಿತ ಒಪ್ಪಿಗೆ’ ಎಂಬ ಪರಿಕಲ್ಪನೆಯನ್ನು ಸುಪ್ರೀಂ ಕೋರ್ಟ್ ಪರಿಚಯಿಸಿತ್ತು. ಬಾಕಿ ಇದ್ದ ಮಸೂದೆಗಳು ಅನುಮೋದನೆಗೊಂಡಿವೆ ಎಂದಿತ್ತು.

ಮೇ ತಿಂಗಳಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 8ರ ತೀರ್ಪಿಗೆ ಸಂಬಂಧಿಸಿದಂತೆ ಸಂವಿಧಾನದ 143(1) ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ಕೆಲವು ಉಲ್ಲೇಖಗಳನ್ನು ಮಾಡಿದ್ದರು.

143(1) ನೇ ವಿಧಿಯು ರಾಷ್ಟ್ರಪತಿಗಳು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ನ್ಯಾಯಾಲಯದ ಅಭಿಪ್ರಾಯ ಮತ್ತು ಸಲಹೆಯನ್ನು ಕೇಳಲು ಅವಕಾಶ ನೀಡುತ್ತದೆ.

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...