Homeಮುಖಪುಟಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲ, ರಾಷ್ಟ್ರಪತಿಗೆ ಸಮಯ ನಿಗದಿಪಡಿಸಿದ ಬಗ್ಗೆ ಮಹತ್ವದ ವಿಚಾರಣೆ

- Advertisement -
- Advertisement -

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್ ಬುಧವಾರ (ಆ.20) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ  ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8ರ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಾಲಯಕ್ಕೆ ಮಾಡಿದ ಉಲ್ಲೇಖದ ಕುರಿತು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರ ಪೀಠವು ವಾದಗಳನ್ನು ಆಲಿಸುತ್ತಿದೆ.

ರಾಷ್ಟ್ರಪತಿಯ ಉಲ್ಲೇಖದ ಕುರಿತು ಜುಲೈ 22ರಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಂವಿಧಾನದ 200ನೇ ವಿಧಿಯ ಪ್ರಕಾರ ಮಸೂದೆಗಳಿಗೆ ಒಪ್ಪಿಗೆ ನೀಡುವ ವಿಷಯದಲ್ಲಿ ರಾಜ್ಯಪಾಲರಿಗೆ ನಾಲ್ಕು ಆಯ್ಕೆಗಳಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಮಸೂದೆಗಳಿಗೆ ಒಪ್ಪಿಗೆ ನೀಡುವುದು, ಒಪ್ಪಿಗೆಯನ್ನು ತಡೆಹಿಡಿಯುವುದು, ರಾಷ್ಟ್ರಪತಿಯ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವುದು ಅಥವಾ ಮಸೂದೆಯನ್ನು ವಿಧಾನಸಭೆಗೆ ಹಿಂತಿರುಗಿಸುವುದು ಈ ನಾಲ್ಕು ಆಯ್ಕೆಗಳು ಎಂದು ತುಷಾರ್ ಮೆಹ್ತಾ ಪೀಠದ ಮುಂದೆ ವಿವರಿಸಿದ್ದಾರೆ.

ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯುತ್ತಿರುವುದಾಗಿ ತಿಳಿಸಿದರೆ, ಮಸೂದೆ ಅಲ್ಲಿಗೆ ‘ಸತ್ತುಹೋಯಿತು’ ಎಂದರ್ಥ. ಒಪ್ಪಿಗೆಯನ್ನು ತಡೆಹಿಡಿಯಲಾಗಿದ್ದರೆ, ರಾಜ್ಯಪಾಲರು ಮಸೂದೆಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸಬೇಕಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನಿಮ್ಮ ಪ್ರಕಾರ, ತಡೆಹಿಡಿಯುವುದು ಎಂದರೆ ಮಸೂದೆ ಅಂಗೀಕಾರವಾಗುತ್ತದೆ ಎಂದರ್ಥವೇ?” ಎಂದು ಕೇಳಿದ್ದಾರೆ. “ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸದಿದ್ದರೆ ಅವರು ಅದನ್ನು ದೀರ್ಘ ಅವಧಿಯವರೆಗೆ ತಡೆ ಹಿಡಿಯಬಹುದು” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, “ಸಂವಿಧಾನವೇ ರಾಜ್ಯಪಾಲರಿಗೆ ಆ ವಿವೇಚನೆಯನ್ನು ನೀಡಿದೆ” ಎಂದಿದ್ದಾರೆ.

“ಹಾಗಾದರೆ ರಾಜ್ಯಪಾಲರಿಗೆ ಸಂಪೂರ್ಣ ಅಧಿಕಾರ ನೀಡದಂತೆ ಆಗುವುದಿಲ್ಲವೇ? ಎಂದು ಮರು ಪ್ರಶ್ನೆ ಹಾಕಿದ ಮುಖ್ಯ ನ್ಯಾಯಾಧೀಶರು, “ಬಹುಮತದಿಂದ ಆಯ್ಕೆಯಾದ ಸರ್ಕಾರ ರಾಜ್ಯಪಾಲರ ಇಚ್ಛೆ ಮತ್ತು ಕಲ್ಪನೆಗೆ ಒಳಪಡುವಂತಾಗುವುದಿಲ್ಲವೆ? ಎಂದು ಕೇಳಿದ್ದಾರೆ.

ರಾಜ್ಯಪಾಲರು ಯಾವುದೇ ಸಂದರ್ಭದಲ್ಲಿ ಮಸೂದೆಯ ಕುರಿತು ತಮ್ಮ ನಿರ್ಧಾರವನ್ನು ‘ಘೋಷಿಸಬೇಕು’ ಅಥವಾ ತಿಳಿಸಬೇಕು. ಕಾರಣವನ್ನು ನೀಡದೆ ಒಪ್ಪಿಗೆಯನ್ನು ತಡೆಹಿಡಿಯಬಾರದು ಎಂದ ಹೇಳಿದ ಪೀಠ. ಇಲ್ಲಿ ‘ತಡೆಹಿಡಿಯುವಿಕೆ’ ಪ್ರಮುಖ ಅಂಶವಾಗಿದೆ. ಅದು ತಾತ್ಕಾಲಿಕವೇ, ಶಾಶ್ವತವೇ ಎಂದು ನೋಡಬೇಕು ಎಂದಿದೆ.

ರಾಜ್ಯಪಾಲರು ಒಪ್ಪಿಗೆಯನ್ನು ಯಾವಾಗ ತಡೆಹಿಡಿಯುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸಾಲಿಸಿಟರ್ ಜನರಲ್, ಮಸೂದೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಅಥವಾ ಅಪೇಕ್ಷಣೀಯವಲ್ಲದ ನಿಬಂಧನೆಗಳನ್ನು ಹೊಂದಿರುವಾಗ ತಡೆಹಿಡಿಯಲಾಗುತ್ತದೆ ಎಂದಿದ್ದಾರೆ.

ತಡೆಹಿಡಿಯುವ ಅಧಿಕಾರವನ್ನು ವಿರಳವಾಗಿ ಬಳಸಬೇಕು ಮತ್ತು ಮೊದಲ ಹಂತದಲ್ಲಿ ಮಾತ್ರ ಬಳಸಬೇಕು ಏಕೆಂದರೆ ಅದು ಮಸೂದೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ತುಷಾರ್ ಮೆಹ್ತಾ ವಿವರಿಸಿದ್ಧಾರೆ.

ಮುಂದುವರಿದು, “ರಾಜ್ಯಪಾಲರು ಕೇವಲ ಒಬ್ಬರು ಪೋಸ್ಟ್‌ಮ್ಯಾನ್ ಅಲ್ಲ. ಅವರು ರಾಷ್ಟ್ರಪತಿಗಳಿಂದ ನೇಮಕಗೊಂಡ ಭಾರತ ಒಕ್ಕೂಟವನ್ನು ಪ್ರತಿನಿಧಿಸುತ್ತಾರೆ. ರಾಷ್ಟ್ರಪತಿಯನ್ನು ಇಡೀ ರಾಷ್ಟ್ರವು ಸಂಪೂರ್ಣ ಚುನಾವಣೆಯ ಮೂಲಕ ಆಯ್ಕೆ ಮಾಡುತ್ತದೆ. ಅದು ಪ್ರಜಾಪ್ರಭುತ್ವದ ಅಭಿವ್ಯಕ್ತಿಯ ಒಂದು ಮಾರ್ಗವಾಗಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿದಾಗಲೂ, ‘ರಾಜಕೀಯ ಪ್ರಕ್ರಿಯೆಯು’ ಅವರ ಬಾಗಿಲನ್ನು ತಟ್ಟಬಹುದು ಮತ್ತು ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ವಾಪಸ್ ಕಳುಹಿಸಬಹುದು” ಎಂದು ನ್ಯಾಯಾಲಯ ತಿಳಿಸಿದೆ.

“ನಾನು ಮಸೂದೆಯನ್ನು ತಡೆ ಹಿಡಿದಿದ್ದೇನೆ. ಇಲ್ಲಿಗೆ ಈ ವಿಷಯ ಮುಗಿಯಿತು” ಮೊದಲನೇ ಬಾರಿಗೆ ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಹೇಳಿದ್ದಾರೆ.

ಗುರುವಾರವೂ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಹಲವಾರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳದೆ, ನಂತರ ಅವುಗಳನ್ನು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಕ್ಕಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ರಾಜ್ಯಪಾಲರು ಮಸೂದೆಗಳನ್ನು ಸಮಂಜಸವಾದ ಸಮಯದೊಳಗೆ ನಿರ್ಧರಿಸಬೇಕು. ಸಂವಿಧಾನದ ವಿಧಿ 200ರ ಅಡಿಯಲ್ಲಿ ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅದೇ ರೀತಿ, ರಾಷ್ಟ್ರಪತಿಗಳು ಸಂವಿಧಾನದ ವಿಧಿ  201ರ ಅಡಿಯಲ್ಲಿ ಮೂರು ತಿಂಗಳೊಳಗೆ ಮಸೂದೆಗಳ ಕುರಿತು ನಿರ್ಧರಿಸಬೇಕು. ಅದಕ್ಕಿಂತ ಹೆಚ್ಚಿನ ವಿಳಂಬವನ್ನು ವಿವರಿಸಬೇಕು. ರಾಜ್ಯ ಸರ್ಕಾರಕ್ಕೆ ತಿಳಿಸಬೇಕು ಎಂದಿತ್ತು.

ಆದೇಶ ನೀಡುವ ವೇಳೆ ದೀರ್ಘಾವಧಿಯ ನಿಷ್ಕ್ರಿಯತೆಯ ಪ್ರಕರಣಗಳಲ್ಲಿ ‘ಪರಿಗಣಿತ ಒಪ್ಪಿಗೆ’ ಎಂಬ ಪರಿಕಲ್ಪನೆಯನ್ನು ಸುಪ್ರೀಂ ಕೋರ್ಟ್ ಪರಿಚಯಿಸಿತ್ತು. ಬಾಕಿ ಇದ್ದ ಮಸೂದೆಗಳು ಅನುಮೋದನೆಗೊಂಡಿವೆ ಎಂದಿತ್ತು.

ಮೇ ತಿಂಗಳಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 8ರ ತೀರ್ಪಿಗೆ ಸಂಬಂಧಿಸಿದಂತೆ ಸಂವಿಧಾನದ 143(1) ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ಕೆಲವು ಉಲ್ಲೇಖಗಳನ್ನು ಮಾಡಿದ್ದರು.

143(1) ನೇ ವಿಧಿಯು ರಾಷ್ಟ್ರಪತಿಗಳು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ನ್ಯಾಯಾಲಯದ ಅಭಿಪ್ರಾಯ ಮತ್ತು ಸಲಹೆಯನ್ನು ಕೇಳಲು ಅವಕಾಶ ನೀಡುತ್ತದೆ.

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....