Homeಮುಖಪುಟಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲ, ರಾಷ್ಟ್ರಪತಿಗೆ ಸಮಯ ನಿಗದಿಪಡಿಸಿದ ಬಗ್ಗೆ ಮಹತ್ವದ ವಿಚಾರಣೆ

- Advertisement -
- Advertisement -

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್ ಬುಧವಾರ (ಆ.20) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ  ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8ರ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಾಲಯಕ್ಕೆ ಮಾಡಿದ ಉಲ್ಲೇಖದ ಕುರಿತು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರ ಪೀಠವು ವಾದಗಳನ್ನು ಆಲಿಸುತ್ತಿದೆ.

ರಾಷ್ಟ್ರಪತಿಯ ಉಲ್ಲೇಖದ ಕುರಿತು ಜುಲೈ 22ರಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಂವಿಧಾನದ 200ನೇ ವಿಧಿಯ ಪ್ರಕಾರ ಮಸೂದೆಗಳಿಗೆ ಒಪ್ಪಿಗೆ ನೀಡುವ ವಿಷಯದಲ್ಲಿ ರಾಜ್ಯಪಾಲರಿಗೆ ನಾಲ್ಕು ಆಯ್ಕೆಗಳಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಮಸೂದೆಗಳಿಗೆ ಒಪ್ಪಿಗೆ ನೀಡುವುದು, ಒಪ್ಪಿಗೆಯನ್ನು ತಡೆಹಿಡಿಯುವುದು, ರಾಷ್ಟ್ರಪತಿಯ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವುದು ಅಥವಾ ಮಸೂದೆಯನ್ನು ವಿಧಾನಸಭೆಗೆ ಹಿಂತಿರುಗಿಸುವುದು ಈ ನಾಲ್ಕು ಆಯ್ಕೆಗಳು ಎಂದು ತುಷಾರ್ ಮೆಹ್ತಾ ಪೀಠದ ಮುಂದೆ ವಿವರಿಸಿದ್ದಾರೆ.

ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯುತ್ತಿರುವುದಾಗಿ ತಿಳಿಸಿದರೆ, ಮಸೂದೆ ಅಲ್ಲಿಗೆ ‘ಸತ್ತುಹೋಯಿತು’ ಎಂದರ್ಥ. ಒಪ್ಪಿಗೆಯನ್ನು ತಡೆಹಿಡಿಯಲಾಗಿದ್ದರೆ, ರಾಜ್ಯಪಾಲರು ಮಸೂದೆಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸಬೇಕಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನಿಮ್ಮ ಪ್ರಕಾರ, ತಡೆಹಿಡಿಯುವುದು ಎಂದರೆ ಮಸೂದೆ ಅಂಗೀಕಾರವಾಗುತ್ತದೆ ಎಂದರ್ಥವೇ?” ಎಂದು ಕೇಳಿದ್ದಾರೆ. “ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸದಿದ್ದರೆ ಅವರು ಅದನ್ನು ದೀರ್ಘ ಅವಧಿಯವರೆಗೆ ತಡೆ ಹಿಡಿಯಬಹುದು” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, “ಸಂವಿಧಾನವೇ ರಾಜ್ಯಪಾಲರಿಗೆ ಆ ವಿವೇಚನೆಯನ್ನು ನೀಡಿದೆ” ಎಂದಿದ್ದಾರೆ.

“ಹಾಗಾದರೆ ರಾಜ್ಯಪಾಲರಿಗೆ ಸಂಪೂರ್ಣ ಅಧಿಕಾರ ನೀಡದಂತೆ ಆಗುವುದಿಲ್ಲವೇ? ಎಂದು ಮರು ಪ್ರಶ್ನೆ ಹಾಕಿದ ಮುಖ್ಯ ನ್ಯಾಯಾಧೀಶರು, “ಬಹುಮತದಿಂದ ಆಯ್ಕೆಯಾದ ಸರ್ಕಾರ ರಾಜ್ಯಪಾಲರ ಇಚ್ಛೆ ಮತ್ತು ಕಲ್ಪನೆಗೆ ಒಳಪಡುವಂತಾಗುವುದಿಲ್ಲವೆ? ಎಂದು ಕೇಳಿದ್ದಾರೆ.

ರಾಜ್ಯಪಾಲರು ಯಾವುದೇ ಸಂದರ್ಭದಲ್ಲಿ ಮಸೂದೆಯ ಕುರಿತು ತಮ್ಮ ನಿರ್ಧಾರವನ್ನು ‘ಘೋಷಿಸಬೇಕು’ ಅಥವಾ ತಿಳಿಸಬೇಕು. ಕಾರಣವನ್ನು ನೀಡದೆ ಒಪ್ಪಿಗೆಯನ್ನು ತಡೆಹಿಡಿಯಬಾರದು ಎಂದ ಹೇಳಿದ ಪೀಠ. ಇಲ್ಲಿ ‘ತಡೆಹಿಡಿಯುವಿಕೆ’ ಪ್ರಮುಖ ಅಂಶವಾಗಿದೆ. ಅದು ತಾತ್ಕಾಲಿಕವೇ, ಶಾಶ್ವತವೇ ಎಂದು ನೋಡಬೇಕು ಎಂದಿದೆ.

ರಾಜ್ಯಪಾಲರು ಒಪ್ಪಿಗೆಯನ್ನು ಯಾವಾಗ ತಡೆಹಿಡಿಯುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸಾಲಿಸಿಟರ್ ಜನರಲ್, ಮಸೂದೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಅಥವಾ ಅಪೇಕ್ಷಣೀಯವಲ್ಲದ ನಿಬಂಧನೆಗಳನ್ನು ಹೊಂದಿರುವಾಗ ತಡೆಹಿಡಿಯಲಾಗುತ್ತದೆ ಎಂದಿದ್ದಾರೆ.

ತಡೆಹಿಡಿಯುವ ಅಧಿಕಾರವನ್ನು ವಿರಳವಾಗಿ ಬಳಸಬೇಕು ಮತ್ತು ಮೊದಲ ಹಂತದಲ್ಲಿ ಮಾತ್ರ ಬಳಸಬೇಕು ಏಕೆಂದರೆ ಅದು ಮಸೂದೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ತುಷಾರ್ ಮೆಹ್ತಾ ವಿವರಿಸಿದ್ಧಾರೆ.

ಮುಂದುವರಿದು, “ರಾಜ್ಯಪಾಲರು ಕೇವಲ ಒಬ್ಬರು ಪೋಸ್ಟ್‌ಮ್ಯಾನ್ ಅಲ್ಲ. ಅವರು ರಾಷ್ಟ್ರಪತಿಗಳಿಂದ ನೇಮಕಗೊಂಡ ಭಾರತ ಒಕ್ಕೂಟವನ್ನು ಪ್ರತಿನಿಧಿಸುತ್ತಾರೆ. ರಾಷ್ಟ್ರಪತಿಯನ್ನು ಇಡೀ ರಾಷ್ಟ್ರವು ಸಂಪೂರ್ಣ ಚುನಾವಣೆಯ ಮೂಲಕ ಆಯ್ಕೆ ಮಾಡುತ್ತದೆ. ಅದು ಪ್ರಜಾಪ್ರಭುತ್ವದ ಅಭಿವ್ಯಕ್ತಿಯ ಒಂದು ಮಾರ್ಗವಾಗಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿದಾಗಲೂ, ‘ರಾಜಕೀಯ ಪ್ರಕ್ರಿಯೆಯು’ ಅವರ ಬಾಗಿಲನ್ನು ತಟ್ಟಬಹುದು ಮತ್ತು ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ವಾಪಸ್ ಕಳುಹಿಸಬಹುದು” ಎಂದು ನ್ಯಾಯಾಲಯ ತಿಳಿಸಿದೆ.

“ನಾನು ಮಸೂದೆಯನ್ನು ತಡೆ ಹಿಡಿದಿದ್ದೇನೆ. ಇಲ್ಲಿಗೆ ಈ ವಿಷಯ ಮುಗಿಯಿತು” ಮೊದಲನೇ ಬಾರಿಗೆ ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಹೇಳಿದ್ದಾರೆ.

ಗುರುವಾರವೂ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಹಲವಾರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳದೆ, ನಂತರ ಅವುಗಳನ್ನು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಕ್ಕಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ರಾಜ್ಯಪಾಲರು ಮಸೂದೆಗಳನ್ನು ಸಮಂಜಸವಾದ ಸಮಯದೊಳಗೆ ನಿರ್ಧರಿಸಬೇಕು. ಸಂವಿಧಾನದ ವಿಧಿ 200ರ ಅಡಿಯಲ್ಲಿ ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅದೇ ರೀತಿ, ರಾಷ್ಟ್ರಪತಿಗಳು ಸಂವಿಧಾನದ ವಿಧಿ  201ರ ಅಡಿಯಲ್ಲಿ ಮೂರು ತಿಂಗಳೊಳಗೆ ಮಸೂದೆಗಳ ಕುರಿತು ನಿರ್ಧರಿಸಬೇಕು. ಅದಕ್ಕಿಂತ ಹೆಚ್ಚಿನ ವಿಳಂಬವನ್ನು ವಿವರಿಸಬೇಕು. ರಾಜ್ಯ ಸರ್ಕಾರಕ್ಕೆ ತಿಳಿಸಬೇಕು ಎಂದಿತ್ತು.

ಆದೇಶ ನೀಡುವ ವೇಳೆ ದೀರ್ಘಾವಧಿಯ ನಿಷ್ಕ್ರಿಯತೆಯ ಪ್ರಕರಣಗಳಲ್ಲಿ ‘ಪರಿಗಣಿತ ಒಪ್ಪಿಗೆ’ ಎಂಬ ಪರಿಕಲ್ಪನೆಯನ್ನು ಸುಪ್ರೀಂ ಕೋರ್ಟ್ ಪರಿಚಯಿಸಿತ್ತು. ಬಾಕಿ ಇದ್ದ ಮಸೂದೆಗಳು ಅನುಮೋದನೆಗೊಂಡಿವೆ ಎಂದಿತ್ತು.

ಮೇ ತಿಂಗಳಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 8ರ ತೀರ್ಪಿಗೆ ಸಂಬಂಧಿಸಿದಂತೆ ಸಂವಿಧಾನದ 143(1) ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ಕೆಲವು ಉಲ್ಲೇಖಗಳನ್ನು ಮಾಡಿದ್ದರು.

143(1) ನೇ ವಿಧಿಯು ರಾಷ್ಟ್ರಪತಿಗಳು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ನ್ಯಾಯಾಲಯದ ಅಭಿಪ್ರಾಯ ಮತ್ತು ಸಲಹೆಯನ್ನು ಕೇಳಲು ಅವಕಾಶ ನೀಡುತ್ತದೆ.

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...