Homeಮುಖಪುಟಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲ, ರಾಷ್ಟ್ರಪತಿಗೆ ಸಮಯ ನಿಗದಿಪಡಿಸಿದ ಬಗ್ಗೆ ಮಹತ್ವದ ವಿಚಾರಣೆ

- Advertisement -
- Advertisement -

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್ ಬುಧವಾರ (ಆ.20) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ  ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8ರ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಾಲಯಕ್ಕೆ ಮಾಡಿದ ಉಲ್ಲೇಖದ ಕುರಿತು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರ ಪೀಠವು ವಾದಗಳನ್ನು ಆಲಿಸುತ್ತಿದೆ.

ರಾಷ್ಟ್ರಪತಿಯ ಉಲ್ಲೇಖದ ಕುರಿತು ಜುಲೈ 22ರಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಂವಿಧಾನದ 200ನೇ ವಿಧಿಯ ಪ್ರಕಾರ ಮಸೂದೆಗಳಿಗೆ ಒಪ್ಪಿಗೆ ನೀಡುವ ವಿಷಯದಲ್ಲಿ ರಾಜ್ಯಪಾಲರಿಗೆ ನಾಲ್ಕು ಆಯ್ಕೆಗಳಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಮಸೂದೆಗಳಿಗೆ ಒಪ್ಪಿಗೆ ನೀಡುವುದು, ಒಪ್ಪಿಗೆಯನ್ನು ತಡೆಹಿಡಿಯುವುದು, ರಾಷ್ಟ್ರಪತಿಯ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವುದು ಅಥವಾ ಮಸೂದೆಯನ್ನು ವಿಧಾನಸಭೆಗೆ ಹಿಂತಿರುಗಿಸುವುದು ಈ ನಾಲ್ಕು ಆಯ್ಕೆಗಳು ಎಂದು ತುಷಾರ್ ಮೆಹ್ತಾ ಪೀಠದ ಮುಂದೆ ವಿವರಿಸಿದ್ದಾರೆ.

ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯುತ್ತಿರುವುದಾಗಿ ತಿಳಿಸಿದರೆ, ಮಸೂದೆ ಅಲ್ಲಿಗೆ ‘ಸತ್ತುಹೋಯಿತು’ ಎಂದರ್ಥ. ಒಪ್ಪಿಗೆಯನ್ನು ತಡೆಹಿಡಿಯಲಾಗಿದ್ದರೆ, ರಾಜ್ಯಪಾಲರು ಮಸೂದೆಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸಬೇಕಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನಿಮ್ಮ ಪ್ರಕಾರ, ತಡೆಹಿಡಿಯುವುದು ಎಂದರೆ ಮಸೂದೆ ಅಂಗೀಕಾರವಾಗುತ್ತದೆ ಎಂದರ್ಥವೇ?” ಎಂದು ಕೇಳಿದ್ದಾರೆ. “ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸದಿದ್ದರೆ ಅವರು ಅದನ್ನು ದೀರ್ಘ ಅವಧಿಯವರೆಗೆ ತಡೆ ಹಿಡಿಯಬಹುದು” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, “ಸಂವಿಧಾನವೇ ರಾಜ್ಯಪಾಲರಿಗೆ ಆ ವಿವೇಚನೆಯನ್ನು ನೀಡಿದೆ” ಎಂದಿದ್ದಾರೆ.

“ಹಾಗಾದರೆ ರಾಜ್ಯಪಾಲರಿಗೆ ಸಂಪೂರ್ಣ ಅಧಿಕಾರ ನೀಡದಂತೆ ಆಗುವುದಿಲ್ಲವೇ? ಎಂದು ಮರು ಪ್ರಶ್ನೆ ಹಾಕಿದ ಮುಖ್ಯ ನ್ಯಾಯಾಧೀಶರು, “ಬಹುಮತದಿಂದ ಆಯ್ಕೆಯಾದ ಸರ್ಕಾರ ರಾಜ್ಯಪಾಲರ ಇಚ್ಛೆ ಮತ್ತು ಕಲ್ಪನೆಗೆ ಒಳಪಡುವಂತಾಗುವುದಿಲ್ಲವೆ? ಎಂದು ಕೇಳಿದ್ದಾರೆ.

ರಾಜ್ಯಪಾಲರು ಯಾವುದೇ ಸಂದರ್ಭದಲ್ಲಿ ಮಸೂದೆಯ ಕುರಿತು ತಮ್ಮ ನಿರ್ಧಾರವನ್ನು ‘ಘೋಷಿಸಬೇಕು’ ಅಥವಾ ತಿಳಿಸಬೇಕು. ಕಾರಣವನ್ನು ನೀಡದೆ ಒಪ್ಪಿಗೆಯನ್ನು ತಡೆಹಿಡಿಯಬಾರದು ಎಂದ ಹೇಳಿದ ಪೀಠ. ಇಲ್ಲಿ ‘ತಡೆಹಿಡಿಯುವಿಕೆ’ ಪ್ರಮುಖ ಅಂಶವಾಗಿದೆ. ಅದು ತಾತ್ಕಾಲಿಕವೇ, ಶಾಶ್ವತವೇ ಎಂದು ನೋಡಬೇಕು ಎಂದಿದೆ.

ರಾಜ್ಯಪಾಲರು ಒಪ್ಪಿಗೆಯನ್ನು ಯಾವಾಗ ತಡೆಹಿಡಿಯುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸಾಲಿಸಿಟರ್ ಜನರಲ್, ಮಸೂದೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಅಥವಾ ಅಪೇಕ್ಷಣೀಯವಲ್ಲದ ನಿಬಂಧನೆಗಳನ್ನು ಹೊಂದಿರುವಾಗ ತಡೆಹಿಡಿಯಲಾಗುತ್ತದೆ ಎಂದಿದ್ದಾರೆ.

ತಡೆಹಿಡಿಯುವ ಅಧಿಕಾರವನ್ನು ವಿರಳವಾಗಿ ಬಳಸಬೇಕು ಮತ್ತು ಮೊದಲ ಹಂತದಲ್ಲಿ ಮಾತ್ರ ಬಳಸಬೇಕು ಏಕೆಂದರೆ ಅದು ಮಸೂದೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ತುಷಾರ್ ಮೆಹ್ತಾ ವಿವರಿಸಿದ್ಧಾರೆ.

ಮುಂದುವರಿದು, “ರಾಜ್ಯಪಾಲರು ಕೇವಲ ಒಬ್ಬರು ಪೋಸ್ಟ್‌ಮ್ಯಾನ್ ಅಲ್ಲ. ಅವರು ರಾಷ್ಟ್ರಪತಿಗಳಿಂದ ನೇಮಕಗೊಂಡ ಭಾರತ ಒಕ್ಕೂಟವನ್ನು ಪ್ರತಿನಿಧಿಸುತ್ತಾರೆ. ರಾಷ್ಟ್ರಪತಿಯನ್ನು ಇಡೀ ರಾಷ್ಟ್ರವು ಸಂಪೂರ್ಣ ಚುನಾವಣೆಯ ಮೂಲಕ ಆಯ್ಕೆ ಮಾಡುತ್ತದೆ. ಅದು ಪ್ರಜಾಪ್ರಭುತ್ವದ ಅಭಿವ್ಯಕ್ತಿಯ ಒಂದು ಮಾರ್ಗವಾಗಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿದಾಗಲೂ, ‘ರಾಜಕೀಯ ಪ್ರಕ್ರಿಯೆಯು’ ಅವರ ಬಾಗಿಲನ್ನು ತಟ್ಟಬಹುದು ಮತ್ತು ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ವಾಪಸ್ ಕಳುಹಿಸಬಹುದು” ಎಂದು ನ್ಯಾಯಾಲಯ ತಿಳಿಸಿದೆ.

“ನಾನು ಮಸೂದೆಯನ್ನು ತಡೆ ಹಿಡಿದಿದ್ದೇನೆ. ಇಲ್ಲಿಗೆ ಈ ವಿಷಯ ಮುಗಿಯಿತು” ಮೊದಲನೇ ಬಾರಿಗೆ ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಹೇಳಿದ್ದಾರೆ.

ಗುರುವಾರವೂ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಹಲವಾರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳದೆ, ನಂತರ ಅವುಗಳನ್ನು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಕ್ಕಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ರಾಜ್ಯಪಾಲರು ಮಸೂದೆಗಳನ್ನು ಸಮಂಜಸವಾದ ಸಮಯದೊಳಗೆ ನಿರ್ಧರಿಸಬೇಕು. ಸಂವಿಧಾನದ ವಿಧಿ 200ರ ಅಡಿಯಲ್ಲಿ ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅದೇ ರೀತಿ, ರಾಷ್ಟ್ರಪತಿಗಳು ಸಂವಿಧಾನದ ವಿಧಿ  201ರ ಅಡಿಯಲ್ಲಿ ಮೂರು ತಿಂಗಳೊಳಗೆ ಮಸೂದೆಗಳ ಕುರಿತು ನಿರ್ಧರಿಸಬೇಕು. ಅದಕ್ಕಿಂತ ಹೆಚ್ಚಿನ ವಿಳಂಬವನ್ನು ವಿವರಿಸಬೇಕು. ರಾಜ್ಯ ಸರ್ಕಾರಕ್ಕೆ ತಿಳಿಸಬೇಕು ಎಂದಿತ್ತು.

ಆದೇಶ ನೀಡುವ ವೇಳೆ ದೀರ್ಘಾವಧಿಯ ನಿಷ್ಕ್ರಿಯತೆಯ ಪ್ರಕರಣಗಳಲ್ಲಿ ‘ಪರಿಗಣಿತ ಒಪ್ಪಿಗೆ’ ಎಂಬ ಪರಿಕಲ್ಪನೆಯನ್ನು ಸುಪ್ರೀಂ ಕೋರ್ಟ್ ಪರಿಚಯಿಸಿತ್ತು. ಬಾಕಿ ಇದ್ದ ಮಸೂದೆಗಳು ಅನುಮೋದನೆಗೊಂಡಿವೆ ಎಂದಿತ್ತು.

ಮೇ ತಿಂಗಳಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 8ರ ತೀರ್ಪಿಗೆ ಸಂಬಂಧಿಸಿದಂತೆ ಸಂವಿಧಾನದ 143(1) ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ಕೆಲವು ಉಲ್ಲೇಖಗಳನ್ನು ಮಾಡಿದ್ದರು.

143(1) ನೇ ವಿಧಿಯು ರಾಷ್ಟ್ರಪತಿಗಳು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ನ್ಯಾಯಾಲಯದ ಅಭಿಪ್ರಾಯ ಮತ್ತು ಸಲಹೆಯನ್ನು ಕೇಳಲು ಅವಕಾಶ ನೀಡುತ್ತದೆ.

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....