Homeಮುಖಪುಟಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲ, ರಾಷ್ಟ್ರಪತಿಗೆ ಸಮಯ ನಿಗದಿಪಡಿಸಿದ ಬಗ್ಗೆ ಮಹತ್ವದ ವಿಚಾರಣೆ

- Advertisement -
- Advertisement -

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್ ಬುಧವಾರ (ಆ.20) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ  ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8ರ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಾಲಯಕ್ಕೆ ಮಾಡಿದ ಉಲ್ಲೇಖದ ಕುರಿತು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರ ಪೀಠವು ವಾದಗಳನ್ನು ಆಲಿಸುತ್ತಿದೆ.

ರಾಷ್ಟ್ರಪತಿಯ ಉಲ್ಲೇಖದ ಕುರಿತು ಜುಲೈ 22ರಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಂವಿಧಾನದ 200ನೇ ವಿಧಿಯ ಪ್ರಕಾರ ಮಸೂದೆಗಳಿಗೆ ಒಪ್ಪಿಗೆ ನೀಡುವ ವಿಷಯದಲ್ಲಿ ರಾಜ್ಯಪಾಲರಿಗೆ ನಾಲ್ಕು ಆಯ್ಕೆಗಳಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಮಸೂದೆಗಳಿಗೆ ಒಪ್ಪಿಗೆ ನೀಡುವುದು, ಒಪ್ಪಿಗೆಯನ್ನು ತಡೆಹಿಡಿಯುವುದು, ರಾಷ್ಟ್ರಪತಿಯ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವುದು ಅಥವಾ ಮಸೂದೆಯನ್ನು ವಿಧಾನಸಭೆಗೆ ಹಿಂತಿರುಗಿಸುವುದು ಈ ನಾಲ್ಕು ಆಯ್ಕೆಗಳು ಎಂದು ತುಷಾರ್ ಮೆಹ್ತಾ ಪೀಠದ ಮುಂದೆ ವಿವರಿಸಿದ್ದಾರೆ.

ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯುತ್ತಿರುವುದಾಗಿ ತಿಳಿಸಿದರೆ, ಮಸೂದೆ ಅಲ್ಲಿಗೆ ‘ಸತ್ತುಹೋಯಿತು’ ಎಂದರ್ಥ. ಒಪ್ಪಿಗೆಯನ್ನು ತಡೆಹಿಡಿಯಲಾಗಿದ್ದರೆ, ರಾಜ್ಯಪಾಲರು ಮಸೂದೆಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸಬೇಕಾಗಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನಿಮ್ಮ ಪ್ರಕಾರ, ತಡೆಹಿಡಿಯುವುದು ಎಂದರೆ ಮಸೂದೆ ಅಂಗೀಕಾರವಾಗುತ್ತದೆ ಎಂದರ್ಥವೇ?” ಎಂದು ಕೇಳಿದ್ದಾರೆ. “ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂತಿರುಗಿಸದಿದ್ದರೆ ಅವರು ಅದನ್ನು ದೀರ್ಘ ಅವಧಿಯವರೆಗೆ ತಡೆ ಹಿಡಿಯಬಹುದು” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, “ಸಂವಿಧಾನವೇ ರಾಜ್ಯಪಾಲರಿಗೆ ಆ ವಿವೇಚನೆಯನ್ನು ನೀಡಿದೆ” ಎಂದಿದ್ದಾರೆ.

“ಹಾಗಾದರೆ ರಾಜ್ಯಪಾಲರಿಗೆ ಸಂಪೂರ್ಣ ಅಧಿಕಾರ ನೀಡದಂತೆ ಆಗುವುದಿಲ್ಲವೇ? ಎಂದು ಮರು ಪ್ರಶ್ನೆ ಹಾಕಿದ ಮುಖ್ಯ ನ್ಯಾಯಾಧೀಶರು, “ಬಹುಮತದಿಂದ ಆಯ್ಕೆಯಾದ ಸರ್ಕಾರ ರಾಜ್ಯಪಾಲರ ಇಚ್ಛೆ ಮತ್ತು ಕಲ್ಪನೆಗೆ ಒಳಪಡುವಂತಾಗುವುದಿಲ್ಲವೆ? ಎಂದು ಕೇಳಿದ್ದಾರೆ.

ರಾಜ್ಯಪಾಲರು ಯಾವುದೇ ಸಂದರ್ಭದಲ್ಲಿ ಮಸೂದೆಯ ಕುರಿತು ತಮ್ಮ ನಿರ್ಧಾರವನ್ನು ‘ಘೋಷಿಸಬೇಕು’ ಅಥವಾ ತಿಳಿಸಬೇಕು. ಕಾರಣವನ್ನು ನೀಡದೆ ಒಪ್ಪಿಗೆಯನ್ನು ತಡೆಹಿಡಿಯಬಾರದು ಎಂದ ಹೇಳಿದ ಪೀಠ. ಇಲ್ಲಿ ‘ತಡೆಹಿಡಿಯುವಿಕೆ’ ಪ್ರಮುಖ ಅಂಶವಾಗಿದೆ. ಅದು ತಾತ್ಕಾಲಿಕವೇ, ಶಾಶ್ವತವೇ ಎಂದು ನೋಡಬೇಕು ಎಂದಿದೆ.

ರಾಜ್ಯಪಾಲರು ಒಪ್ಪಿಗೆಯನ್ನು ಯಾವಾಗ ತಡೆಹಿಡಿಯುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸಾಲಿಸಿಟರ್ ಜನರಲ್, ಮಸೂದೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಅಥವಾ ಅಪೇಕ್ಷಣೀಯವಲ್ಲದ ನಿಬಂಧನೆಗಳನ್ನು ಹೊಂದಿರುವಾಗ ತಡೆಹಿಡಿಯಲಾಗುತ್ತದೆ ಎಂದಿದ್ದಾರೆ.

ತಡೆಹಿಡಿಯುವ ಅಧಿಕಾರವನ್ನು ವಿರಳವಾಗಿ ಬಳಸಬೇಕು ಮತ್ತು ಮೊದಲ ಹಂತದಲ್ಲಿ ಮಾತ್ರ ಬಳಸಬೇಕು ಏಕೆಂದರೆ ಅದು ಮಸೂದೆಯ ಮರಣಕ್ಕೆ ಕಾರಣವಾಗುತ್ತದೆ ಎಂದು ತುಷಾರ್ ಮೆಹ್ತಾ ವಿವರಿಸಿದ್ಧಾರೆ.

ಮುಂದುವರಿದು, “ರಾಜ್ಯಪಾಲರು ಕೇವಲ ಒಬ್ಬರು ಪೋಸ್ಟ್‌ಮ್ಯಾನ್ ಅಲ್ಲ. ಅವರು ರಾಷ್ಟ್ರಪತಿಗಳಿಂದ ನೇಮಕಗೊಂಡ ಭಾರತ ಒಕ್ಕೂಟವನ್ನು ಪ್ರತಿನಿಧಿಸುತ್ತಾರೆ. ರಾಷ್ಟ್ರಪತಿಯನ್ನು ಇಡೀ ರಾಷ್ಟ್ರವು ಸಂಪೂರ್ಣ ಚುನಾವಣೆಯ ಮೂಲಕ ಆಯ್ಕೆ ಮಾಡುತ್ತದೆ. ಅದು ಪ್ರಜಾಪ್ರಭುತ್ವದ ಅಭಿವ್ಯಕ್ತಿಯ ಒಂದು ಮಾರ್ಗವಾಗಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿದಾಗಲೂ, ‘ರಾಜಕೀಯ ಪ್ರಕ್ರಿಯೆಯು’ ಅವರ ಬಾಗಿಲನ್ನು ತಟ್ಟಬಹುದು ಮತ್ತು ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ವಾಪಸ್ ಕಳುಹಿಸಬಹುದು” ಎಂದು ನ್ಯಾಯಾಲಯ ತಿಳಿಸಿದೆ.

“ನಾನು ಮಸೂದೆಯನ್ನು ತಡೆ ಹಿಡಿದಿದ್ದೇನೆ. ಇಲ್ಲಿಗೆ ಈ ವಿಷಯ ಮುಗಿಯಿತು” ಮೊದಲನೇ ಬಾರಿಗೆ ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಹೇಳಿದ್ದಾರೆ.

ಗುರುವಾರವೂ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಹಲವಾರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳದೆ, ನಂತರ ಅವುಗಳನ್ನು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಕ್ಕಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ರಾಜ್ಯಪಾಲರು ಮಸೂದೆಗಳನ್ನು ಸಮಂಜಸವಾದ ಸಮಯದೊಳಗೆ ನಿರ್ಧರಿಸಬೇಕು. ಸಂವಿಧಾನದ ವಿಧಿ 200ರ ಅಡಿಯಲ್ಲಿ ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅದೇ ರೀತಿ, ರಾಷ್ಟ್ರಪತಿಗಳು ಸಂವಿಧಾನದ ವಿಧಿ  201ರ ಅಡಿಯಲ್ಲಿ ಮೂರು ತಿಂಗಳೊಳಗೆ ಮಸೂದೆಗಳ ಕುರಿತು ನಿರ್ಧರಿಸಬೇಕು. ಅದಕ್ಕಿಂತ ಹೆಚ್ಚಿನ ವಿಳಂಬವನ್ನು ವಿವರಿಸಬೇಕು. ರಾಜ್ಯ ಸರ್ಕಾರಕ್ಕೆ ತಿಳಿಸಬೇಕು ಎಂದಿತ್ತು.

ಆದೇಶ ನೀಡುವ ವೇಳೆ ದೀರ್ಘಾವಧಿಯ ನಿಷ್ಕ್ರಿಯತೆಯ ಪ್ರಕರಣಗಳಲ್ಲಿ ‘ಪರಿಗಣಿತ ಒಪ್ಪಿಗೆ’ ಎಂಬ ಪರಿಕಲ್ಪನೆಯನ್ನು ಸುಪ್ರೀಂ ಕೋರ್ಟ್ ಪರಿಚಯಿಸಿತ್ತು. ಬಾಕಿ ಇದ್ದ ಮಸೂದೆಗಳು ಅನುಮೋದನೆಗೊಂಡಿವೆ ಎಂದಿತ್ತು.

ಮೇ ತಿಂಗಳಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 8ರ ತೀರ್ಪಿಗೆ ಸಂಬಂಧಿಸಿದಂತೆ ಸಂವಿಧಾನದ 143(1) ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ಕೆಲವು ಉಲ್ಲೇಖಗಳನ್ನು ಮಾಡಿದ್ದರು.

143(1) ನೇ ವಿಧಿಯು ರಾಷ್ಟ್ರಪತಿಗಳು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ನ್ಯಾಯಾಲಯದ ಅಭಿಪ್ರಾಯ ಮತ್ತು ಸಲಹೆಯನ್ನು ಕೇಳಲು ಅವಕಾಶ ನೀಡುತ್ತದೆ.

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...