Homeಕರ್ನಾಟಕಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಸಿದ್ಧ ಇದ್ದೀರಾ?: ಎಚ್‌ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಸಿದ್ಧ ಇದ್ದೀರಾ?: ಎಚ್‌ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕುಮಾರಸ್ವಾಮಿಯವರೇ, ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಹೆಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ? ಎಂದು ಕೇಳಿದ್ದಾರೆ.

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ-ಟೀಮ್’ ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ ಎಂದಿದ್ದಾರೆ.

ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ. ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು – ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ನಡುವೆ ವಾಕ್ಸಮರ ನಡೆಯುತ್ತಿದೆ. ಆಪರೇಷನ್‌ ಕಮಲಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಅರ್ಥದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...