Homeಕರ್ನಾಟಕಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಸಿದ್ಧ ಇದ್ದೀರಾ?: ಎಚ್‌ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಸಿದ್ಧ ಇದ್ದೀರಾ?: ಎಚ್‌ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕುಮಾರಸ್ವಾಮಿಯವರೇ, ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಹೆಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ? ಎಂದು ಕೇಳಿದ್ದಾರೆ.

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ-ಟೀಮ್’ ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ ಎಂದಿದ್ದಾರೆ.

ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ. ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು – ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ನಡುವೆ ವಾಕ್ಸಮರ ನಡೆಯುತ್ತಿದೆ. ಆಪರೇಷನ್‌ ಕಮಲಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಅರ್ಥದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...