Homeಮುಖಪುಟರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

ರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

- Advertisement -
- Advertisement -

ಸರ್ಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಉಪವಾಸ ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಪುನರುಚ್ಚರಿಸಿದ್ದಾರೆ. ತಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹದ 64ನೇ ದಿನವಾದ ಇಂದು (ಜ.28) ಅವರು ಈ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 12ರಂದು ರೈತರ ಪ್ರತಿಭಟನೆ 2.0ದ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ದೇಶದ ವಿವಿಧ ಭಾಗಗಳಿಂದ ರೈತರು ಖಾನೌರಿ ಗಡಿಗೆ (ಪಂಜಾಬ್ ಮತ್ತು ಹರಿಯಾಣ ಗಡಿ) ಬರುವಂತೆ ದಲ್ಲೆವಾಲ್ ಆಹ್ವಾನಿಸಿದ್ದಾರೆ.

ಜನವರಿ 4ರಂದು ನಡೆದ ಕಿಸಾನ್ ಮಹಾಪಂಚಾಯತ್ ನಂತರ ಮೊದಲ ಬಾರಿಗೆ ಇಂದು ಖಾನೌರಿ ಗಡಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, “ನಮ್ಮ ಪ್ರತಿಭಟನೆಯ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಫೆಬ್ರವರಿ 12ರಂದು ದೇಶದ ವಿವಿಧ ಭಾಗಗಳಿಂದ ರೈತ ಸಮುದಾಯವು ಖಾನೌರಿ ಗಡಿಗೆ ಆಗಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಬೃಹತ್ ಸಭೆಯು ನನಗೆ ಪುನರುಜ್ಜೀವನ ನೀಡಲಿದೆ ಮತ್ತು ಮಾತುಕತೆಗಾಗಿ ಕೇಂದ್ರ ಸರ್ಕಾರದ ನಿಯೋಗದೊಂದಿಗೆ ಸಭೆಯಲ್ಲಿ ಭೌತಿಕವಾಗಿ ಉಪಸ್ಥಿತರಿರುವಂತೆ ನನಗೆ ಶಕ್ತಿಯನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಫೆಬ್ರವರಿ 14ರಂದು ಸರ್ಕಾರ ಮಾತುಕತೆಗೆ ಮುಂದಾದ ನಂತರ ವೈದ್ಯಕೀಯ ನೆರವು ಪಡೆಯಲು ಮಾತ್ರ ಒಪ್ಪಿಕೊಂಡಿದ್ದೇನೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಪ್ರಸ್ತುತ ನನ್ನ ಆರೋಗ್ಯ ಸ್ಥಿತಿಯಿಂದಾಗಿ ಚಂಡೀಗಢಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲು ಸಾಧ್ಯವಾಗುತ್ತಿಲ್ಲ. ನಾನು ಸಾಕಷ್ಟು ಫಿಟ್ ಆಗಿದ್ದರೆ, ಚಂಡೀಗಢದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುತ್ತೇನೆ. ಇಲ್ಲದಿದ್ದರೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಮಿತಿಯ ಮುಂದೆ ಹಾಜರಾಗುತ್ತೇನೆ” ಎಂದಿದ್ದಾರೆ.

ಮೋಗಾದಲ್ಲಿ ನಡೆದ ರೈತ ಮಹಾಪಂಚಾಯತ್ ನಂತರ ಎಸ್‌ಕೆಎಂ ನಾಯಕರು ಒಗ್ಗಟ್ಟಿನ ನಿರ್ಣಯದೊಂದಿಗೆ ಖಾನೌರಿಗೆ ಬಂದಿದ್ದಾರೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಐಕ್ಯರಂಗ ರಚನೆಗೆ ಇಷ್ಟು ಸಮಯ ಏಕೆ ತೆಗೆದುಕೊಳ್ಳುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಹಲವಾರು ಸುತ್ತಿನ ಸಭೆಗಳು ನಡೆಯುತ್ತಿವೆ. ನಾನು ಸಭೆಗಳಿಗೆ ಹೋಗಿಲ್ಲ, ಆದ್ದರಿಂದ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ. ಸರ್ಕಾರದ ನಿಯೋಗವು ಎಸ್‌ಕೆಎಂ ನಾಯಕರೊಂದಿಗೆ ಮಾತುಕತೆ ನಡೆಸಿದೆ. ಆದರೆ, ಅಲ್ಲಿ ಏನು ನಡೆಯುತ್ತಿದೆ ಎಂದು ನನಗೆ ಹೇಳಲಿಲ್ಲ. ಈ ಬಹು ಸಭೆಗಳು ಒಳ್ಳೆಯದಲ್ಲ. ನಾವು ಒಟ್ಟಾಗಿ ಹೋರಾಡಬೇಕು ಎಂಬುವುದು ಸಾರ್ವಜನಿಕರ ಭಾವನೆಯಾಗಿದೆ” ಎಂದು ಇದೇ ವೇಳೆ ರೈತ ನಾಯಕರಿಗೆ ದಲ್ಲೆವಾಲ್ ಕಿವಿಮಾತು ಹೇಳಿದ್ದಾರೆ.

ಇಲ್ಲಿಯವರೆಗೆ ಜನವರಿ 13 ಮತ್ತು ಜನವರಿ 18 ರಂದು ಎಸ್‌ಕೆಎಂ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಡುವೆ ಎರಡು ಸುತ್ತಿನ ಸಭೆಗಳು ನಡೆದಿವೆ. ಇದರಲ್ಲಿ ಎಸ್‌ಕೆಎಂ ನಾಯಕರಾದ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಡಾ. ದರ್ಶನ್ ಪಾಲ್ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರಾದ ಸರ್ವಾನ್ ಸಿಂಗ್ ಪಂಧೇರ್, ಮಂಜಿತ್ ರೈ, ಕಾಕಾ ಸಿಂಗ್ ಕೊಟ್ರಾ ಮತ್ತು ಅಭಿಮನ್ಯು ಕೊಹರ್ ಭಾಗವಹಿಸಿದ್ದರು.

ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...