Homeಮುಖಪುಟರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

ರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

- Advertisement -
- Advertisement -

ಸರ್ಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಉಪವಾಸ ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಪುನರುಚ್ಚರಿಸಿದ್ದಾರೆ. ತಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹದ 64ನೇ ದಿನವಾದ ಇಂದು (ಜ.28) ಅವರು ಈ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 12ರಂದು ರೈತರ ಪ್ರತಿಭಟನೆ 2.0ದ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ದೇಶದ ವಿವಿಧ ಭಾಗಗಳಿಂದ ರೈತರು ಖಾನೌರಿ ಗಡಿಗೆ (ಪಂಜಾಬ್ ಮತ್ತು ಹರಿಯಾಣ ಗಡಿ) ಬರುವಂತೆ ದಲ್ಲೆವಾಲ್ ಆಹ್ವಾನಿಸಿದ್ದಾರೆ.

ಜನವರಿ 4ರಂದು ನಡೆದ ಕಿಸಾನ್ ಮಹಾಪಂಚಾಯತ್ ನಂತರ ಮೊದಲ ಬಾರಿಗೆ ಇಂದು ಖಾನೌರಿ ಗಡಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, “ನಮ್ಮ ಪ್ರತಿಭಟನೆಯ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಫೆಬ್ರವರಿ 12ರಂದು ದೇಶದ ವಿವಿಧ ಭಾಗಗಳಿಂದ ರೈತ ಸಮುದಾಯವು ಖಾನೌರಿ ಗಡಿಗೆ ಆಗಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಬೃಹತ್ ಸಭೆಯು ನನಗೆ ಪುನರುಜ್ಜೀವನ ನೀಡಲಿದೆ ಮತ್ತು ಮಾತುಕತೆಗಾಗಿ ಕೇಂದ್ರ ಸರ್ಕಾರದ ನಿಯೋಗದೊಂದಿಗೆ ಸಭೆಯಲ್ಲಿ ಭೌತಿಕವಾಗಿ ಉಪಸ್ಥಿತರಿರುವಂತೆ ನನಗೆ ಶಕ್ತಿಯನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಫೆಬ್ರವರಿ 14ರಂದು ಸರ್ಕಾರ ಮಾತುಕತೆಗೆ ಮುಂದಾದ ನಂತರ ವೈದ್ಯಕೀಯ ನೆರವು ಪಡೆಯಲು ಮಾತ್ರ ಒಪ್ಪಿಕೊಂಡಿದ್ದೇನೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಪ್ರಸ್ತುತ ನನ್ನ ಆರೋಗ್ಯ ಸ್ಥಿತಿಯಿಂದಾಗಿ ಚಂಡೀಗಢಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲು ಸಾಧ್ಯವಾಗುತ್ತಿಲ್ಲ. ನಾನು ಸಾಕಷ್ಟು ಫಿಟ್ ಆಗಿದ್ದರೆ, ಚಂಡೀಗಢದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುತ್ತೇನೆ. ಇಲ್ಲದಿದ್ದರೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಮಿತಿಯ ಮುಂದೆ ಹಾಜರಾಗುತ್ತೇನೆ” ಎಂದಿದ್ದಾರೆ.

ಮೋಗಾದಲ್ಲಿ ನಡೆದ ರೈತ ಮಹಾಪಂಚಾಯತ್ ನಂತರ ಎಸ್‌ಕೆಎಂ ನಾಯಕರು ಒಗ್ಗಟ್ಟಿನ ನಿರ್ಣಯದೊಂದಿಗೆ ಖಾನೌರಿಗೆ ಬಂದಿದ್ದಾರೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಐಕ್ಯರಂಗ ರಚನೆಗೆ ಇಷ್ಟು ಸಮಯ ಏಕೆ ತೆಗೆದುಕೊಳ್ಳುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಹಲವಾರು ಸುತ್ತಿನ ಸಭೆಗಳು ನಡೆಯುತ್ತಿವೆ. ನಾನು ಸಭೆಗಳಿಗೆ ಹೋಗಿಲ್ಲ, ಆದ್ದರಿಂದ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ. ಸರ್ಕಾರದ ನಿಯೋಗವು ಎಸ್‌ಕೆಎಂ ನಾಯಕರೊಂದಿಗೆ ಮಾತುಕತೆ ನಡೆಸಿದೆ. ಆದರೆ, ಅಲ್ಲಿ ಏನು ನಡೆಯುತ್ತಿದೆ ಎಂದು ನನಗೆ ಹೇಳಲಿಲ್ಲ. ಈ ಬಹು ಸಭೆಗಳು ಒಳ್ಳೆಯದಲ್ಲ. ನಾವು ಒಟ್ಟಾಗಿ ಹೋರಾಡಬೇಕು ಎಂಬುವುದು ಸಾರ್ವಜನಿಕರ ಭಾವನೆಯಾಗಿದೆ” ಎಂದು ಇದೇ ವೇಳೆ ರೈತ ನಾಯಕರಿಗೆ ದಲ್ಲೆವಾಲ್ ಕಿವಿಮಾತು ಹೇಳಿದ್ದಾರೆ.

ಇಲ್ಲಿಯವರೆಗೆ ಜನವರಿ 13 ಮತ್ತು ಜನವರಿ 18 ರಂದು ಎಸ್‌ಕೆಎಂ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಡುವೆ ಎರಡು ಸುತ್ತಿನ ಸಭೆಗಳು ನಡೆದಿವೆ. ಇದರಲ್ಲಿ ಎಸ್‌ಕೆಎಂ ನಾಯಕರಾದ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಡಾ. ದರ್ಶನ್ ಪಾಲ್ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರಾದ ಸರ್ವಾನ್ ಸಿಂಗ್ ಪಂಧೇರ್, ಮಂಜಿತ್ ರೈ, ಕಾಕಾ ಸಿಂಗ್ ಕೊಟ್ರಾ ಮತ್ತು ಅಭಿಮನ್ಯು ಕೊಹರ್ ಭಾಗವಹಿಸಿದ್ದರು.

ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...