Homeಮುಖಪುಟರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

ರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

- Advertisement -
- Advertisement -

ಸರ್ಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಉಪವಾಸ ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಪುನರುಚ್ಚರಿಸಿದ್ದಾರೆ. ತಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹದ 64ನೇ ದಿನವಾದ ಇಂದು (ಜ.28) ಅವರು ಈ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 12ರಂದು ರೈತರ ಪ್ರತಿಭಟನೆ 2.0ದ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ದೇಶದ ವಿವಿಧ ಭಾಗಗಳಿಂದ ರೈತರು ಖಾನೌರಿ ಗಡಿಗೆ (ಪಂಜಾಬ್ ಮತ್ತು ಹರಿಯಾಣ ಗಡಿ) ಬರುವಂತೆ ದಲ್ಲೆವಾಲ್ ಆಹ್ವಾನಿಸಿದ್ದಾರೆ.

ಜನವರಿ 4ರಂದು ನಡೆದ ಕಿಸಾನ್ ಮಹಾಪಂಚಾಯತ್ ನಂತರ ಮೊದಲ ಬಾರಿಗೆ ಇಂದು ಖಾನೌರಿ ಗಡಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, “ನಮ್ಮ ಪ್ರತಿಭಟನೆಯ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಫೆಬ್ರವರಿ 12ರಂದು ದೇಶದ ವಿವಿಧ ಭಾಗಗಳಿಂದ ರೈತ ಸಮುದಾಯವು ಖಾನೌರಿ ಗಡಿಗೆ ಆಗಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಬೃಹತ್ ಸಭೆಯು ನನಗೆ ಪುನರುಜ್ಜೀವನ ನೀಡಲಿದೆ ಮತ್ತು ಮಾತುಕತೆಗಾಗಿ ಕೇಂದ್ರ ಸರ್ಕಾರದ ನಿಯೋಗದೊಂದಿಗೆ ಸಭೆಯಲ್ಲಿ ಭೌತಿಕವಾಗಿ ಉಪಸ್ಥಿತರಿರುವಂತೆ ನನಗೆ ಶಕ್ತಿಯನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಫೆಬ್ರವರಿ 14ರಂದು ಸರ್ಕಾರ ಮಾತುಕತೆಗೆ ಮುಂದಾದ ನಂತರ ವೈದ್ಯಕೀಯ ನೆರವು ಪಡೆಯಲು ಮಾತ್ರ ಒಪ್ಪಿಕೊಂಡಿದ್ದೇನೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಪ್ರಸ್ತುತ ನನ್ನ ಆರೋಗ್ಯ ಸ್ಥಿತಿಯಿಂದಾಗಿ ಚಂಡೀಗಢಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲು ಸಾಧ್ಯವಾಗುತ್ತಿಲ್ಲ. ನಾನು ಸಾಕಷ್ಟು ಫಿಟ್ ಆಗಿದ್ದರೆ, ಚಂಡೀಗಢದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುತ್ತೇನೆ. ಇಲ್ಲದಿದ್ದರೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಮಿತಿಯ ಮುಂದೆ ಹಾಜರಾಗುತ್ತೇನೆ” ಎಂದಿದ್ದಾರೆ.

ಮೋಗಾದಲ್ಲಿ ನಡೆದ ರೈತ ಮಹಾಪಂಚಾಯತ್ ನಂತರ ಎಸ್‌ಕೆಎಂ ನಾಯಕರು ಒಗ್ಗಟ್ಟಿನ ನಿರ್ಣಯದೊಂದಿಗೆ ಖಾನೌರಿಗೆ ಬಂದಿದ್ದಾರೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಐಕ್ಯರಂಗ ರಚನೆಗೆ ಇಷ್ಟು ಸಮಯ ಏಕೆ ತೆಗೆದುಕೊಳ್ಳುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಹಲವಾರು ಸುತ್ತಿನ ಸಭೆಗಳು ನಡೆಯುತ್ತಿವೆ. ನಾನು ಸಭೆಗಳಿಗೆ ಹೋಗಿಲ್ಲ, ಆದ್ದರಿಂದ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ. ಸರ್ಕಾರದ ನಿಯೋಗವು ಎಸ್‌ಕೆಎಂ ನಾಯಕರೊಂದಿಗೆ ಮಾತುಕತೆ ನಡೆಸಿದೆ. ಆದರೆ, ಅಲ್ಲಿ ಏನು ನಡೆಯುತ್ತಿದೆ ಎಂದು ನನಗೆ ಹೇಳಲಿಲ್ಲ. ಈ ಬಹು ಸಭೆಗಳು ಒಳ್ಳೆಯದಲ್ಲ. ನಾವು ಒಟ್ಟಾಗಿ ಹೋರಾಡಬೇಕು ಎಂಬುವುದು ಸಾರ್ವಜನಿಕರ ಭಾವನೆಯಾಗಿದೆ” ಎಂದು ಇದೇ ವೇಳೆ ರೈತ ನಾಯಕರಿಗೆ ದಲ್ಲೆವಾಲ್ ಕಿವಿಮಾತು ಹೇಳಿದ್ದಾರೆ.

ಇಲ್ಲಿಯವರೆಗೆ ಜನವರಿ 13 ಮತ್ತು ಜನವರಿ 18 ರಂದು ಎಸ್‌ಕೆಎಂ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಡುವೆ ಎರಡು ಸುತ್ತಿನ ಸಭೆಗಳು ನಡೆದಿವೆ. ಇದರಲ್ಲಿ ಎಸ್‌ಕೆಎಂ ನಾಯಕರಾದ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಡಾ. ದರ್ಶನ್ ಪಾಲ್ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರಾದ ಸರ್ವಾನ್ ಸಿಂಗ್ ಪಂಧೇರ್, ಮಂಜಿತ್ ರೈ, ಕಾಕಾ ಸಿಂಗ್ ಕೊಟ್ರಾ ಮತ್ತು ಅಭಿಮನ್ಯು ಕೊಹರ್ ಭಾಗವಹಿಸಿದ್ದರು.

ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...