Homeಮುಖಪುಟರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

ರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

- Advertisement -
- Advertisement -

ಸರ್ಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಉಪವಾಸ ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಪುನರುಚ್ಚರಿಸಿದ್ದಾರೆ. ತಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹದ 64ನೇ ದಿನವಾದ ಇಂದು (ಜ.28) ಅವರು ಈ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 12ರಂದು ರೈತರ ಪ್ರತಿಭಟನೆ 2.0ದ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ದೇಶದ ವಿವಿಧ ಭಾಗಗಳಿಂದ ರೈತರು ಖಾನೌರಿ ಗಡಿಗೆ (ಪಂಜಾಬ್ ಮತ್ತು ಹರಿಯಾಣ ಗಡಿ) ಬರುವಂತೆ ದಲ್ಲೆವಾಲ್ ಆಹ್ವಾನಿಸಿದ್ದಾರೆ.

ಜನವರಿ 4ರಂದು ನಡೆದ ಕಿಸಾನ್ ಮಹಾಪಂಚಾಯತ್ ನಂತರ ಮೊದಲ ಬಾರಿಗೆ ಇಂದು ಖಾನೌರಿ ಗಡಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, “ನಮ್ಮ ಪ್ರತಿಭಟನೆಯ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಫೆಬ್ರವರಿ 12ರಂದು ದೇಶದ ವಿವಿಧ ಭಾಗಗಳಿಂದ ರೈತ ಸಮುದಾಯವು ಖಾನೌರಿ ಗಡಿಗೆ ಆಗಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಬೃಹತ್ ಸಭೆಯು ನನಗೆ ಪುನರುಜ್ಜೀವನ ನೀಡಲಿದೆ ಮತ್ತು ಮಾತುಕತೆಗಾಗಿ ಕೇಂದ್ರ ಸರ್ಕಾರದ ನಿಯೋಗದೊಂದಿಗೆ ಸಭೆಯಲ್ಲಿ ಭೌತಿಕವಾಗಿ ಉಪಸ್ಥಿತರಿರುವಂತೆ ನನಗೆ ಶಕ್ತಿಯನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಫೆಬ್ರವರಿ 14ರಂದು ಸರ್ಕಾರ ಮಾತುಕತೆಗೆ ಮುಂದಾದ ನಂತರ ವೈದ್ಯಕೀಯ ನೆರವು ಪಡೆಯಲು ಮಾತ್ರ ಒಪ್ಪಿಕೊಂಡಿದ್ದೇನೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಪ್ರಸ್ತುತ ನನ್ನ ಆರೋಗ್ಯ ಸ್ಥಿತಿಯಿಂದಾಗಿ ಚಂಡೀಗಢಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲು ಸಾಧ್ಯವಾಗುತ್ತಿಲ್ಲ. ನಾನು ಸಾಕಷ್ಟು ಫಿಟ್ ಆಗಿದ್ದರೆ, ಚಂಡೀಗಢದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುತ್ತೇನೆ. ಇಲ್ಲದಿದ್ದರೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಮಿತಿಯ ಮುಂದೆ ಹಾಜರಾಗುತ್ತೇನೆ” ಎಂದಿದ್ದಾರೆ.

ಮೋಗಾದಲ್ಲಿ ನಡೆದ ರೈತ ಮಹಾಪಂಚಾಯತ್ ನಂತರ ಎಸ್‌ಕೆಎಂ ನಾಯಕರು ಒಗ್ಗಟ್ಟಿನ ನಿರ್ಣಯದೊಂದಿಗೆ ಖಾನೌರಿಗೆ ಬಂದಿದ್ದಾರೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಐಕ್ಯರಂಗ ರಚನೆಗೆ ಇಷ್ಟು ಸಮಯ ಏಕೆ ತೆಗೆದುಕೊಳ್ಳುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಹಲವಾರು ಸುತ್ತಿನ ಸಭೆಗಳು ನಡೆಯುತ್ತಿವೆ. ನಾನು ಸಭೆಗಳಿಗೆ ಹೋಗಿಲ್ಲ, ಆದ್ದರಿಂದ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ. ಸರ್ಕಾರದ ನಿಯೋಗವು ಎಸ್‌ಕೆಎಂ ನಾಯಕರೊಂದಿಗೆ ಮಾತುಕತೆ ನಡೆಸಿದೆ. ಆದರೆ, ಅಲ್ಲಿ ಏನು ನಡೆಯುತ್ತಿದೆ ಎಂದು ನನಗೆ ಹೇಳಲಿಲ್ಲ. ಈ ಬಹು ಸಭೆಗಳು ಒಳ್ಳೆಯದಲ್ಲ. ನಾವು ಒಟ್ಟಾಗಿ ಹೋರಾಡಬೇಕು ಎಂಬುವುದು ಸಾರ್ವಜನಿಕರ ಭಾವನೆಯಾಗಿದೆ” ಎಂದು ಇದೇ ವೇಳೆ ರೈತ ನಾಯಕರಿಗೆ ದಲ್ಲೆವಾಲ್ ಕಿವಿಮಾತು ಹೇಳಿದ್ದಾರೆ.

ಇಲ್ಲಿಯವರೆಗೆ ಜನವರಿ 13 ಮತ್ತು ಜನವರಿ 18 ರಂದು ಎಸ್‌ಕೆಎಂ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಡುವೆ ಎರಡು ಸುತ್ತಿನ ಸಭೆಗಳು ನಡೆದಿವೆ. ಇದರಲ್ಲಿ ಎಸ್‌ಕೆಎಂ ನಾಯಕರಾದ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಡಾ. ದರ್ಶನ್ ಪಾಲ್ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರಾದ ಸರ್ವಾನ್ ಸಿಂಗ್ ಪಂಧೇರ್, ಮಂಜಿತ್ ರೈ, ಕಾಕಾ ಸಿಂಗ್ ಕೊಟ್ರಾ ಮತ್ತು ಅಭಿಮನ್ಯು ಕೊಹರ್ ಭಾಗವಹಿಸಿದ್ದರು.

ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...