Homeಮುಖಪುಟರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

ರೈತರ ಬೇಡಿಕೆಗಳು ಈಡೇರುವವರೆಗೂ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೆವಾಲ್

- Advertisement -
- Advertisement -

ಸರ್ಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಉಪವಾಸ ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಪುನರುಚ್ಚರಿಸಿದ್ದಾರೆ. ತಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹದ 64ನೇ ದಿನವಾದ ಇಂದು (ಜ.28) ಅವರು ಈ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 12ರಂದು ರೈತರ ಪ್ರತಿಭಟನೆ 2.0ದ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ದೇಶದ ವಿವಿಧ ಭಾಗಗಳಿಂದ ರೈತರು ಖಾನೌರಿ ಗಡಿಗೆ (ಪಂಜಾಬ್ ಮತ್ತು ಹರಿಯಾಣ ಗಡಿ) ಬರುವಂತೆ ದಲ್ಲೆವಾಲ್ ಆಹ್ವಾನಿಸಿದ್ದಾರೆ.

ಜನವರಿ 4ರಂದು ನಡೆದ ಕಿಸಾನ್ ಮಹಾಪಂಚಾಯತ್ ನಂತರ ಮೊದಲ ಬಾರಿಗೆ ಇಂದು ಖಾನೌರಿ ಗಡಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್, “ನಮ್ಮ ಪ್ರತಿಭಟನೆಯ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಫೆಬ್ರವರಿ 12ರಂದು ದೇಶದ ವಿವಿಧ ಭಾಗಗಳಿಂದ ರೈತ ಸಮುದಾಯವು ಖಾನೌರಿ ಗಡಿಗೆ ಆಗಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಬೃಹತ್ ಸಭೆಯು ನನಗೆ ಪುನರುಜ್ಜೀವನ ನೀಡಲಿದೆ ಮತ್ತು ಮಾತುಕತೆಗಾಗಿ ಕೇಂದ್ರ ಸರ್ಕಾರದ ನಿಯೋಗದೊಂದಿಗೆ ಸಭೆಯಲ್ಲಿ ಭೌತಿಕವಾಗಿ ಉಪಸ್ಥಿತರಿರುವಂತೆ ನನಗೆ ಶಕ್ತಿಯನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಫೆಬ್ರವರಿ 14ರಂದು ಸರ್ಕಾರ ಮಾತುಕತೆಗೆ ಮುಂದಾದ ನಂತರ ವೈದ್ಯಕೀಯ ನೆರವು ಪಡೆಯಲು ಮಾತ್ರ ಒಪ್ಪಿಕೊಂಡಿದ್ದೇನೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಪ್ರಸ್ತುತ ನನ್ನ ಆರೋಗ್ಯ ಸ್ಥಿತಿಯಿಂದಾಗಿ ಚಂಡೀಗಢಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲು ಸಾಧ್ಯವಾಗುತ್ತಿಲ್ಲ. ನಾನು ಸಾಕಷ್ಟು ಫಿಟ್ ಆಗಿದ್ದರೆ, ಚಂಡೀಗಢದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುತ್ತೇನೆ. ಇಲ್ಲದಿದ್ದರೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಮಿತಿಯ ಮುಂದೆ ಹಾಜರಾಗುತ್ತೇನೆ” ಎಂದಿದ್ದಾರೆ.

ಮೋಗಾದಲ್ಲಿ ನಡೆದ ರೈತ ಮಹಾಪಂಚಾಯತ್ ನಂತರ ಎಸ್‌ಕೆಎಂ ನಾಯಕರು ಒಗ್ಗಟ್ಟಿನ ನಿರ್ಣಯದೊಂದಿಗೆ ಖಾನೌರಿಗೆ ಬಂದಿದ್ದಾರೆ ಎಂದು ದಲ್ಲೆವಾಲ್ ಹೇಳಿದ್ದಾರೆ.

“ಐಕ್ಯರಂಗ ರಚನೆಗೆ ಇಷ್ಟು ಸಮಯ ಏಕೆ ತೆಗೆದುಕೊಳ್ಳುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಹಲವಾರು ಸುತ್ತಿನ ಸಭೆಗಳು ನಡೆಯುತ್ತಿವೆ. ನಾನು ಸಭೆಗಳಿಗೆ ಹೋಗಿಲ್ಲ, ಆದ್ದರಿಂದ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ. ಸರ್ಕಾರದ ನಿಯೋಗವು ಎಸ್‌ಕೆಎಂ ನಾಯಕರೊಂದಿಗೆ ಮಾತುಕತೆ ನಡೆಸಿದೆ. ಆದರೆ, ಅಲ್ಲಿ ಏನು ನಡೆಯುತ್ತಿದೆ ಎಂದು ನನಗೆ ಹೇಳಲಿಲ್ಲ. ಈ ಬಹು ಸಭೆಗಳು ಒಳ್ಳೆಯದಲ್ಲ. ನಾವು ಒಟ್ಟಾಗಿ ಹೋರಾಡಬೇಕು ಎಂಬುವುದು ಸಾರ್ವಜನಿಕರ ಭಾವನೆಯಾಗಿದೆ” ಎಂದು ಇದೇ ವೇಳೆ ರೈತ ನಾಯಕರಿಗೆ ದಲ್ಲೆವಾಲ್ ಕಿವಿಮಾತು ಹೇಳಿದ್ದಾರೆ.

ಇಲ್ಲಿಯವರೆಗೆ ಜನವರಿ 13 ಮತ್ತು ಜನವರಿ 18 ರಂದು ಎಸ್‌ಕೆಎಂ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಡುವೆ ಎರಡು ಸುತ್ತಿನ ಸಭೆಗಳು ನಡೆದಿವೆ. ಇದರಲ್ಲಿ ಎಸ್‌ಕೆಎಂ ನಾಯಕರಾದ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಡಾ. ದರ್ಶನ್ ಪಾಲ್ ಮತ್ತು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರಾದ ಸರ್ವಾನ್ ಸಿಂಗ್ ಪಂಧೇರ್, ಮಂಜಿತ್ ರೈ, ಕಾಕಾ ಸಿಂಗ್ ಕೊಟ್ರಾ ಮತ್ತು ಅಭಿಮನ್ಯು ಕೊಹರ್ ಭಾಗವಹಿಸಿದ್ದರು.

ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...