Homeಮುಖಪುಟ"ವಾರದಲ್ಲಿ 90 ಗಂಟೆ ಕೆಲಸ ಮಾಡಿ" : ವ್ಯಾಪಕ ಟೀಕೆಗೆ ಗುರಿಯಾದ ಎಲ್‌ ಆ್ಯಂಡ್‌ ಟಿ...

“ವಾರದಲ್ಲಿ 90 ಗಂಟೆ ಕೆಲಸ ಮಾಡಿ” : ವ್ಯಾಪಕ ಟೀಕೆಗೆ ಗುರಿಯಾದ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥನ ಹೇಳಿಕೆ

- Advertisement -
- Advertisement -

“ಮನೆಯಲ್ಲಿ ಕುಳಿತು ಎಷ್ಟು ಹೊತ್ತು ಹೆಂಡತಿಯ ಮುಖ ನೋಡಿಕೊಂಡು ಇರುತ್ತೀರಿ. ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು. ಶ್ರಮವಹಿಸಿ ದುಡಿಯಲು ಭಾನುವಾರದ ರಜೆಯನ್ನೂ ತ್ಯಜಿಸಬೇಕು” ಎಂದು ಎಲ್‌ ಆ್ಯಂಡ್‌ ಟಿ ಕಂಪನಿ ಮುಖ್ಯಸ್ಥ ಎಸ್‌.ಎನ್‌. ಸುಬ್ರಹ್ಮಣ್ಯನ್‌ ಅವರು ನೀಡಿರುವ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು, ಕೆಲ ಸಿನಿಮಾ ಕಲಾವಿದರು ಸೇರಿದಂತೆ ಸಾರ್ವಜನಿಕ ವಲಯದ ಜನರು ಉದ್ಯೋಗಿಗಳ ಮಾನಸಿಕ ಪರಿಸ್ಥಿತಿಯನ್ನು ಉಲ್ಲೇಖಿಸಿ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥನ ಹೇಳಿಕೆ ವಿರೋಧಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ರಜೆ ಕೊಡಬೇಕು ಎಂದು ಒತ್ತಾಯಿಸಿದ್ದ ತನ್ನ ಕಂಪನಿಯ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಎಸ್‌.ಎನ್‌. ಸುಬ್ರಹ್ಮಣ್ಯನ್‌, “ನಿಮ್ಮಿಂದ ಭಾನುವಾರ ಕೂಡ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ನನಗೆ ವಿಷಾದವಾಗುತ್ತಿದೆ. ನಾನು ಭಾನುವಾರವೂ ಕೆಲಸ ಮಾಡುತ್ತೇನೆ. ಅಂದು ಕೂಡ ನಿಮ್ಮಿಂದ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾದರೆ ನಾನು ಹೆಚ್ಚು ಸಂತೋಷ ಪಡುತ್ತೇನೆ” ಎಂದು ಹೇಳಿದ್ದಾರೆ.

“ನೀವು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ. ಎಷ್ಟು ಹೊತ್ತು ಹೆಂಡತಿಯ ಮುಖ ನೋಡುತ್ತೀರಿ. ಆಕೆ ಕೂಡ ಎಷ್ಟು ಹೊತ್ತು ನಿಮ್ಮ ಮುಖ ನೋಡಿಕೊಂಡು ಇರುತ್ತಾರೆ. ಹಾಗಾಗಿ, ಕಚೇರಿಗೆ ಬಂದು ಕೆಲಸ ಮಾಡಿ” ಎಂದಿದ್ದಾರೆ.

ಸುಬ್ರಹ್ಮಣ್ಯನ್‌ ಯಾವಾಗ ಈ ಮಾತುಗಳನ್ನು ಆಡಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿಲ್ಲ. ಆದರೆ, ಅವರ ಹೇಳಿಕೆಯ ವಿಡಿಯೋ ಭಾರೀ ವೈರಲ್ ಆಗಿ, ಟೀಕೆಗೆ ಗುರಿಯಾಗಿದೆ.

ಸುಬ್ರಹ್ಮಣ್ಯನ್‌ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಹಲವರು ಸುಬ್ರಹ್ಮಣ್ಯನ್‌ ಅವರಿಗೆ ಛೀಮಾರಿ ಹಾಕಿದ್ದಾರೆ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕುರಿತು ಪ್ರತಿಕ್ರಿಯಿಸಿದ್ದು, “ಉನ್ನತ ಹುದ್ದೆಯಲ್ಲಿರುವವರು ಈ ರೀತಿಯ ಹೇಳಿಕೆ ನೀಡುತ್ತಿರುವುದು ‘ಆಘಾತಕಾರಿ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. #MentalHealthMatters ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

“ಸುಬ್ರಹ್ಮಣ್ಯನ್‌ ಅವರ ಹೇಳಿಕೆ ಗುಲಾಮಗಿರಿಯನ್ನು ಉತ್ತೇಜಿಸುವುದು ಮಾತ್ರವಲ್ಲದೆ, ಸ್ತ್ರೀ ದ್ವೇಷವನ್ನು ಹೊಂದಿದೆ. ಎಲ್‌ ಆ್ಯಂಡ್‌ ಟಿ ಕಂಪನಿ ಮಹಿಳೆಯರನ್ನು ನೇಮಿಸಿಕೊಳ್ಳುವುದಿಲ್ವಾ? ಸುಬ್ರಹ್ಮಣ್ಯನ್‌ ಅವರ  ಹೇಳಿಕೆ, ಹೆಂಡತಿ ಅಥವಾ ಸಂಗಾತಿಯನ್ನು ಅವಮಾನಿಸುವಂತಿದೆ. ಇದು ನಾಚಿಕೇಗೇಡಿನ ಸಂಗತಿ” ಎಂದು ಖ್ಯಾತೆ ಪತ್ರಕರ್ತೆ ನಿಧಿ ರಝ್ದಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಸ್ಥನ ಹೇಳಿಕೆ ಸಮರ್ಥಿಸಿದ ಎಲ್‌ ಆ್ಯಂಡ್‌ ಟಿ

ಉದ್ಯೋಗಿಗಳು ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು ಎಂಬ ತಮ್ಮ ಮುಖ್ಯಸ್ಥನ ಹೇಳಿಕೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿ ಸಮರ್ಥಿಸಿಕೊಂಡಿದೆ. “ರಾಷ್ಟ್ರ ನಿರ್ಮಾಣದಲ್ಲಿನ ತನ್ನ ಬದ್ಧತೆಯನ್ನು ಸುಬ್ರಹ್ಮಣ್ಯನ್ ಅವರು ತನ್ನ ಹೇಳಿಕೆಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಇದು ಅಸಾಧಾರಣ ಫಲಿತಾಂಶಗಳನ್ನು ಸಾಧಿಸುವ ಅವರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ. ಅಲ್ಲದೆ, ಭಾರತದ ಪ್ರಗತಿಯನ್ನು ಹೆಚ್ಚಿಸಲು ಸಾಮೂಹಿಕ ಸಮರ್ಪಣೆ ಮತ್ತು ಪ್ರಯತ್ನವನ್ನು ಸುಬ್ರಹ್ಮಣ್ಯನ್ ಕೋರಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದೆ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಉದ್ಯೋಗಿಗಳು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಆದರೂ, ಅವರು ತನ್ನ ಹೇಳಿಕೆಯನ್ನು ಪುನರುಚ್ಚರಿಸಿ ಸಮರ್ಥಿಸಿಕೊಂಡಿದ್ದರು. ನಂತರ ಓಲಾ ಸಿಇಒ ಭವೀಷ್ ಅಗರ್ವಾಲ್ ಅವರು ನಾರಾಯಣ ಮೂರ್ತಿಯನ್ನು ಹೇಳಿಕೆಯನ್ನು ಬೆಂಬಲಿಸಿದ್ದರು. ಇದೀಗ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥ 90 ಭಾನುವಾರವೂ ಸೇರಿದಂತೆ 90 ಗಂಟೆ ಕೆಲಸ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ : SC/ST Reservation |’ಕೆನೆಪದರ’ ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...