Homeಮುಖಪುಟ"ವಾರದಲ್ಲಿ 90 ಗಂಟೆ ಕೆಲಸ ಮಾಡಿ" : ವ್ಯಾಪಕ ಟೀಕೆಗೆ ಗುರಿಯಾದ ಎಲ್‌ ಆ್ಯಂಡ್‌ ಟಿ...

“ವಾರದಲ್ಲಿ 90 ಗಂಟೆ ಕೆಲಸ ಮಾಡಿ” : ವ್ಯಾಪಕ ಟೀಕೆಗೆ ಗುರಿಯಾದ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥನ ಹೇಳಿಕೆ

- Advertisement -
- Advertisement -

“ಮನೆಯಲ್ಲಿ ಕುಳಿತು ಎಷ್ಟು ಹೊತ್ತು ಹೆಂಡತಿಯ ಮುಖ ನೋಡಿಕೊಂಡು ಇರುತ್ತೀರಿ. ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು. ಶ್ರಮವಹಿಸಿ ದುಡಿಯಲು ಭಾನುವಾರದ ರಜೆಯನ್ನೂ ತ್ಯಜಿಸಬೇಕು” ಎಂದು ಎಲ್‌ ಆ್ಯಂಡ್‌ ಟಿ ಕಂಪನಿ ಮುಖ್ಯಸ್ಥ ಎಸ್‌.ಎನ್‌. ಸುಬ್ರಹ್ಮಣ್ಯನ್‌ ಅವರು ನೀಡಿರುವ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು, ಕೆಲ ಸಿನಿಮಾ ಕಲಾವಿದರು ಸೇರಿದಂತೆ ಸಾರ್ವಜನಿಕ ವಲಯದ ಜನರು ಉದ್ಯೋಗಿಗಳ ಮಾನಸಿಕ ಪರಿಸ್ಥಿತಿಯನ್ನು ಉಲ್ಲೇಖಿಸಿ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥನ ಹೇಳಿಕೆ ವಿರೋಧಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ರಜೆ ಕೊಡಬೇಕು ಎಂದು ಒತ್ತಾಯಿಸಿದ್ದ ತನ್ನ ಕಂಪನಿಯ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಎಸ್‌.ಎನ್‌. ಸುಬ್ರಹ್ಮಣ್ಯನ್‌, “ನಿಮ್ಮಿಂದ ಭಾನುವಾರ ಕೂಡ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ನನಗೆ ವಿಷಾದವಾಗುತ್ತಿದೆ. ನಾನು ಭಾನುವಾರವೂ ಕೆಲಸ ಮಾಡುತ್ತೇನೆ. ಅಂದು ಕೂಡ ನಿಮ್ಮಿಂದ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾದರೆ ನಾನು ಹೆಚ್ಚು ಸಂತೋಷ ಪಡುತ್ತೇನೆ” ಎಂದು ಹೇಳಿದ್ದಾರೆ.

“ನೀವು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ. ಎಷ್ಟು ಹೊತ್ತು ಹೆಂಡತಿಯ ಮುಖ ನೋಡುತ್ತೀರಿ. ಆಕೆ ಕೂಡ ಎಷ್ಟು ಹೊತ್ತು ನಿಮ್ಮ ಮುಖ ನೋಡಿಕೊಂಡು ಇರುತ್ತಾರೆ. ಹಾಗಾಗಿ, ಕಚೇರಿಗೆ ಬಂದು ಕೆಲಸ ಮಾಡಿ” ಎಂದಿದ್ದಾರೆ.

ಸುಬ್ರಹ್ಮಣ್ಯನ್‌ ಯಾವಾಗ ಈ ಮಾತುಗಳನ್ನು ಆಡಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿಲ್ಲ. ಆದರೆ, ಅವರ ಹೇಳಿಕೆಯ ವಿಡಿಯೋ ಭಾರೀ ವೈರಲ್ ಆಗಿ, ಟೀಕೆಗೆ ಗುರಿಯಾಗಿದೆ.

ಸುಬ್ರಹ್ಮಣ್ಯನ್‌ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಹಲವರು ಸುಬ್ರಹ್ಮಣ್ಯನ್‌ ಅವರಿಗೆ ಛೀಮಾರಿ ಹಾಕಿದ್ದಾರೆ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕುರಿತು ಪ್ರತಿಕ್ರಿಯಿಸಿದ್ದು, “ಉನ್ನತ ಹುದ್ದೆಯಲ್ಲಿರುವವರು ಈ ರೀತಿಯ ಹೇಳಿಕೆ ನೀಡುತ್ತಿರುವುದು ‘ಆಘಾತಕಾರಿ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. #MentalHealthMatters ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

“ಸುಬ್ರಹ್ಮಣ್ಯನ್‌ ಅವರ ಹೇಳಿಕೆ ಗುಲಾಮಗಿರಿಯನ್ನು ಉತ್ತೇಜಿಸುವುದು ಮಾತ್ರವಲ್ಲದೆ, ಸ್ತ್ರೀ ದ್ವೇಷವನ್ನು ಹೊಂದಿದೆ. ಎಲ್‌ ಆ್ಯಂಡ್‌ ಟಿ ಕಂಪನಿ ಮಹಿಳೆಯರನ್ನು ನೇಮಿಸಿಕೊಳ್ಳುವುದಿಲ್ವಾ? ಸುಬ್ರಹ್ಮಣ್ಯನ್‌ ಅವರ  ಹೇಳಿಕೆ, ಹೆಂಡತಿ ಅಥವಾ ಸಂಗಾತಿಯನ್ನು ಅವಮಾನಿಸುವಂತಿದೆ. ಇದು ನಾಚಿಕೇಗೇಡಿನ ಸಂಗತಿ” ಎಂದು ಖ್ಯಾತೆ ಪತ್ರಕರ್ತೆ ನಿಧಿ ರಝ್ದಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಸ್ಥನ ಹೇಳಿಕೆ ಸಮರ್ಥಿಸಿದ ಎಲ್‌ ಆ್ಯಂಡ್‌ ಟಿ

ಉದ್ಯೋಗಿಗಳು ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು ಎಂಬ ತಮ್ಮ ಮುಖ್ಯಸ್ಥನ ಹೇಳಿಕೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿ ಸಮರ್ಥಿಸಿಕೊಂಡಿದೆ. “ರಾಷ್ಟ್ರ ನಿರ್ಮಾಣದಲ್ಲಿನ ತನ್ನ ಬದ್ಧತೆಯನ್ನು ಸುಬ್ರಹ್ಮಣ್ಯನ್ ಅವರು ತನ್ನ ಹೇಳಿಕೆಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಇದು ಅಸಾಧಾರಣ ಫಲಿತಾಂಶಗಳನ್ನು ಸಾಧಿಸುವ ಅವರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ. ಅಲ್ಲದೆ, ಭಾರತದ ಪ್ರಗತಿಯನ್ನು ಹೆಚ್ಚಿಸಲು ಸಾಮೂಹಿಕ ಸಮರ್ಪಣೆ ಮತ್ತು ಪ್ರಯತ್ನವನ್ನು ಸುಬ್ರಹ್ಮಣ್ಯನ್ ಕೋರಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದೆ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಉದ್ಯೋಗಿಗಳು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಆದರೂ, ಅವರು ತನ್ನ ಹೇಳಿಕೆಯನ್ನು ಪುನರುಚ್ಚರಿಸಿ ಸಮರ್ಥಿಸಿಕೊಂಡಿದ್ದರು. ನಂತರ ಓಲಾ ಸಿಇಒ ಭವೀಷ್ ಅಗರ್ವಾಲ್ ಅವರು ನಾರಾಯಣ ಮೂರ್ತಿಯನ್ನು ಹೇಳಿಕೆಯನ್ನು ಬೆಂಬಲಿಸಿದ್ದರು. ಇದೀಗ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥ 90 ಭಾನುವಾರವೂ ಸೇರಿದಂತೆ 90 ಗಂಟೆ ಕೆಲಸ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ : SC/ST Reservation |’ಕೆನೆಪದರ’ ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...