Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...