Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...