Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...