Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...