Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....