Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...