Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...