Homeಕರ್ನಾಟಕದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ರಾಜ್ಯದ ಜನತೆ ಭಾರತ್‌ ಜೋಡೋ ಯಾತ್ರೆಗೆ ಬೆಂಬಲಿಸಬೇಕು ಎಂದು ಅವರು ವಿನಂತಿಸಿದ್ದಾರೆ

- Advertisement -
- Advertisement -

ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ ಭಾರತ್‌ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕು’ ಎಂಬ ವಿಚಾರದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.

“ನನ್ನಂಥವರು ಬಹಳ ಭರವಸೆಯಿಂದ ಕರ್ನಾಟಕಕ್ಕೆ ಬರುತ್ತೇವೆ. ಭಾರತ್‌ ಜೋಡೋ ಯಾತ್ರೆಯನ್ನು ನಾನು ಭಾರತದ ‘ದಕ್ಷಿಣಾಯಣ ಮೂಮೆಂಟ್‌’ ಎಂದು ಕರೆಯುತ್ತೇನೆ. ಕರ್ನಾಟಕ ಸಾಂಸ್ಕೃತಿಕವಾಗಿ ಬಹಳ ಸಂಪದ್ಭರಿತ ನಾಡು. ಗಿರೀಶ್‌ ಕಾರ್ನಾಡ್‌, ಅನಂತಮೂರ್ತಿ ಮುಂತಾದವರ ಬರಹಗಳನ್ನು ಓದಿ ಬೆಳೆದಿದ್ದೇನೆ. ಸಾರ್ವಜನಿಕ ಬದುಕಿಗೆ ಬರುತ್ತಿದ್ದಂತೆ ಕುವೆಂಪು ಅವರ ಕವಿತೆಗಳು ಪ್ರಭಾವಿಸಿವೆ” ಎಂದು ಅವರು ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರ್ನಾಟಕದ ದಲಿತ ಸಾಹಿತ್ಯದ ಆಳವನ್ನು ಅರಿತಿದ್ದೇವೆ. ಬರಹಗಾರರಾದ ಗೆಳೆಯ ಡಿ.ಆರ್‌. ನಾಗರಾಜ್‌, ದೇವನೂರು ಮಹಾದೇವ ಇವರೆಲ್ಲ ಮಾರ್ಗದರ್ಶಕರು. ಇವರಿಂದ ಇಡೀ ದೇಶ ಕಲಿಯುವುದು ಬಹಳ ಇದೆ. ಇದು ದಕ್ಷಿಣದ ಯೋಚನೆಯೊಂದಿಗೆ ಉತ್ತರಕ್ಕೆ ಪ್ರಯಾಣ. ಇದರಲ್ಲಿ ಎಲ್ಲಾ ರಾಜಕೀಯ ಪಕ್ಷಗಳು, ಜನ ಚಳವಳಿ, ಸಂಘಟನೆಗಳು ಭಾಗವಹಿಸುವುದು ಬಹಳ ಮುಖ್ಯ. ಯಾರೆಲ್ಲ ಇನ್ನೂ ಸೇರಿಕೊಂಡಿಲ್ಲವೋ ತಕ್ಷಣ ಸೇರಿಕೊಳ್ಳಿ” ಎಂದು ಯೋಗೇಂದ್ರ ಯಾದವ್‌ ಕರೆ ನೀಡಿದರು.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

“ಕಾಂಗ್ರೆಸ್‌ನ ಅಭಿಯಾನವಾದ ‘ಭಾರತ್‌ ಜೋಡೋ’ ಪಾದಯಾತ್ರೆ ಇಂದಿನ ಅಗತ್ಯವಾಗಿದೆ. ಬಾಬಾ ಸಾಹೇಬರ ಸಂವಿಧಾನ ಅಪಾಯದಲ್ಲಿದೆ. ನಾಗರಿಕತೆಯ ಅಡಿಪಾಯದ ಮೇಲೆ ದಾಳಿ ನಡೆಯುತ್ತಿದೆ. ಇಂತಹ ಸಂದಿಗ್ಧ ಸಮಯದಲ್ಲಿ ನಾವೆಲ್ಲರೂ ಬೀದಿಯಲ್ಲಿ ನಿಂತು ನಮ್ಮ ಅಸ್ತಿತ್ವವನ್ನು ತೋರಿಸಬೇಕಿದೆ” ಎಂದು ಅವರು ಹೇಳಿದರು.

ಸೆಪ್ಟೆಂಬರ್‌ 30ರಂದು ಗುಂಡ್ಲುಪೇಟೆಯ ಮೂಲಕ ಕರ್ನಾಟಕ ಪ್ರವೇಶಿಸುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಪಾದಯಾತ್ರೆಯಲ್ಲಿ ‘ಭಾವೈಕ್ಯ ಕರ್ನಾಟಕ ಬ್ಯಾನರ್‌ನಡಿ’ ಎಲ್ಲ ಸಮಾನ ಮನಸ್ಕರು, ದೇಶಪ್ರೇಮಿಗಳು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

“ನಮ್ಮ ಮನೆಗೆ ಬೆಂಕಿ ಬಿದ್ದಿದೆ. ನಮಗೆ ಕಾಣುತ್ತಿರುವುದು ಇಬ್ಬರಷ್ಟೇ. ಒಬ್ಬನ ಕೈಯಲ್ಲಿ ಪೆಟ್ರೋಲ್‌ ಬಾಟಲಿಯಿದೆ. ಮತ್ತೊಬ್ಬ ನೀರಿನ ಬಕೆಟ್‌ ಹಿಡಿದು ನಿಂತಿದ್ದಾನೆ. ನೀರಿನ ಬಕೆಟ್‌ ಯಾರೇ ಹಿಡಿದು ಬರಲಿ ಆತ ನಮಗೆ ಗೆಳೆಯನಂತೆ ಕಾಣುತ್ತಾನೆ. ದ್ವೇಷದ ರಾಜಕಾರಣ ತಿರಸ್ಕರಿಸಲು, ಸದುದ್ದೇಶದಿಂದ ಕೂಡಿದ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಗೆ ಎಲ್ಲರೂ ಬೆಂಬಲ ನೀಡಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

“ಕೇವಲ ಎರಡೂವರೆ ವರ್ಷದಲ್ಲಿ ಅದಾನಿಯ ಸಂಪತ್ತು 66 ಸಾವಿರ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಅದನ್ನು ಮರೆಮಾಚಲು ಬಿಜೆಪಿ ಮತ್ತು ಸಂಘಪರಿವಾರ ಹಿಂದೂ-ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತರುತ್ತಿದೆ” ಎಂದು ಅವರು ಆರೋಪಿಸಿದರು.

“ಕರ್ನಾಟಕ ದ್ವೇಷ ರಾಜಕಾರಣದ ಪ್ರಯೋಗಶಾಲೆಯಾಗಿದೆ. ಇದುವರೆಗೆ ಕಂಡು ಕೇಳರಿಯದಂಥ ಭ್ರಷ್ಟಾಚಾರದಲ್ಲಿ ಕರ್ನಾಟಕ ಸರ್ಕಾರ ಮುಳುಗಿದೆ. ನಾವು ದುರಾಡಳಿತದ ಬಗ್ಗೆ ಪ್ರಶ್ನೆ ಮಾತನಾಡಿದರೆ, ಅವರು ಹಿಜಾಬ್‌ ವಿಷಯ ಮುನ್ನೆಲೆಗೆ ತರುತ್ತಾರೆ. ದೇಶದಲ್ಲಿ ಕಳೆದ 40 ವರ್ಷಗಳಲ್ಲೇ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶವನ್ನು ಉಳಿಸಲು ಎಲ್ಲ ಸಂಘಟನೆಗಳು, ಜನಚಳವಳಿಗಳು, ಸಾಮಾಜಿಕ ಕಾರ್ಯಕರ್ತರು ಒಂದಾಗಬೇಕು” ಎಂದು ಅವರು ಸಲಹೆ ನೀಡಿದರು.

ಹಿರಿಯ ಸಾಹಿತಿ ಬಂಜಗೆರೆ ಜಯಪ್ರಕಾಶ್‌ ಮಾತನಾಡಿ, “ಸಮಾಜದಲ್ಲಿ ಪಂಗಡೀಕರಣ ಮತ್ತು ವಿಂಗಡೀಕರಣ ಆಗುತ್ತಿರುವುದು ಬಹಳ ದೊಡ್ಡ ವಿದ್ಯಮಾನ. ಕರ್ನಾಟಕದ ಇತಿಹಾಸ ಸಾಮರಸ್ಯಕ್ಕೆ ಮಾದರಿಯಾಗಿತ್ತು. ಈಗ ಯಾರಿಗೂ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿಲ್ಲ. ಮಾನವಹಕ್ಕು ಹೋರಾಟಗಾರರು, ಸಾಹಿತಿಗಳಿಗೆ ಅಪಾಯ ಬಂದೊದಗಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲ ಇದರ ವಿರುದ್ಧ ಒಂದಾಗಲು ಭಾರತ್‌ ಜೋಡೋಗೆ ಕೈಜೋಡಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

“ಬಹುತ್ವ ಭಾರತ, ಒಕ್ಕೂಟ ಭಾರತ, ಸಮಾನತೆ ಮತ್ತು ಶಿಕ್ಷಣಕ್ಕೆ ಕುತ್ತು ಬರುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಭಾರತ್‌ ಜೋಡೋವನ್ನು ಬೆಂಬಲಿಸಬೇಕಾಗಿದೆ” ಎಂದು ಹಿರಿಯ ಸಾಹಿತಿ ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

ದೇಶದ ಬಗ್ಗೆ ಕಾಳಜಿ ಇರುವವರು, ಪ್ರಜಾಪ್ರಭುತ್ವ ಉಳಿಸಬೇಕೆಂದು ಬಯಸುವ ಎಲ್ಲರೂ ಸೇರಿ ಕರ್ನಾಟಕದಲ್ಲಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ವಿಜ್ಞಾನಿ ಪ್ರಕಾಶ್‌ ಕಮ್ಮರಡಿ ವಿನಂತಿಸಿದರು. “ಭಾರತ್‌ ಜೋಡೋ ಬೆಂಬಲಿಸಿದ ಮಾತ್ರಕ್ಕೆ ನಾವು ಕಾಂಗ್ರೆಸ್‌ ಪರ ಎಂದಲ್ಲ. ಕಾಂಗ್ರೆಸ್‌ನ ನೀತಿಗಳನ್ನೂ ವಿರೋಧಿಸುತ್ತೇವೆ. ಸದ್ಯ ವಿರೋಧಿಸುವ, ಟೀಕಿಸುವ ಸ್ವಾತಂತ್ರ್ಯ ಉಳಿಸುವ ಅಗತ್ಯವಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ, ಚಿಂತಕಿ ಬಿ.ಟಿ. ಲಲಿತಾ ನಾಯಕ್‌ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...