Homeಕರ್ನಾಟಕದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ರಾಜ್ಯದ ಜನತೆ ಭಾರತ್‌ ಜೋಡೋ ಯಾತ್ರೆಗೆ ಬೆಂಬಲಿಸಬೇಕು ಎಂದು ಅವರು ವಿನಂತಿಸಿದ್ದಾರೆ

- Advertisement -
- Advertisement -

ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ ಭಾರತ್‌ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕು’ ಎಂಬ ವಿಚಾರದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.

“ನನ್ನಂಥವರು ಬಹಳ ಭರವಸೆಯಿಂದ ಕರ್ನಾಟಕಕ್ಕೆ ಬರುತ್ತೇವೆ. ಭಾರತ್‌ ಜೋಡೋ ಯಾತ್ರೆಯನ್ನು ನಾನು ಭಾರತದ ‘ದಕ್ಷಿಣಾಯಣ ಮೂಮೆಂಟ್‌’ ಎಂದು ಕರೆಯುತ್ತೇನೆ. ಕರ್ನಾಟಕ ಸಾಂಸ್ಕೃತಿಕವಾಗಿ ಬಹಳ ಸಂಪದ್ಭರಿತ ನಾಡು. ಗಿರೀಶ್‌ ಕಾರ್ನಾಡ್‌, ಅನಂತಮೂರ್ತಿ ಮುಂತಾದವರ ಬರಹಗಳನ್ನು ಓದಿ ಬೆಳೆದಿದ್ದೇನೆ. ಸಾರ್ವಜನಿಕ ಬದುಕಿಗೆ ಬರುತ್ತಿದ್ದಂತೆ ಕುವೆಂಪು ಅವರ ಕವಿತೆಗಳು ಪ್ರಭಾವಿಸಿವೆ” ಎಂದು ಅವರು ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರ್ನಾಟಕದ ದಲಿತ ಸಾಹಿತ್ಯದ ಆಳವನ್ನು ಅರಿತಿದ್ದೇವೆ. ಬರಹಗಾರರಾದ ಗೆಳೆಯ ಡಿ.ಆರ್‌. ನಾಗರಾಜ್‌, ದೇವನೂರು ಮಹಾದೇವ ಇವರೆಲ್ಲ ಮಾರ್ಗದರ್ಶಕರು. ಇವರಿಂದ ಇಡೀ ದೇಶ ಕಲಿಯುವುದು ಬಹಳ ಇದೆ. ಇದು ದಕ್ಷಿಣದ ಯೋಚನೆಯೊಂದಿಗೆ ಉತ್ತರಕ್ಕೆ ಪ್ರಯಾಣ. ಇದರಲ್ಲಿ ಎಲ್ಲಾ ರಾಜಕೀಯ ಪಕ್ಷಗಳು, ಜನ ಚಳವಳಿ, ಸಂಘಟನೆಗಳು ಭಾಗವಹಿಸುವುದು ಬಹಳ ಮುಖ್ಯ. ಯಾರೆಲ್ಲ ಇನ್ನೂ ಸೇರಿಕೊಂಡಿಲ್ಲವೋ ತಕ್ಷಣ ಸೇರಿಕೊಳ್ಳಿ” ಎಂದು ಯೋಗೇಂದ್ರ ಯಾದವ್‌ ಕರೆ ನೀಡಿದರು.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

“ಕಾಂಗ್ರೆಸ್‌ನ ಅಭಿಯಾನವಾದ ‘ಭಾರತ್‌ ಜೋಡೋ’ ಪಾದಯಾತ್ರೆ ಇಂದಿನ ಅಗತ್ಯವಾಗಿದೆ. ಬಾಬಾ ಸಾಹೇಬರ ಸಂವಿಧಾನ ಅಪಾಯದಲ್ಲಿದೆ. ನಾಗರಿಕತೆಯ ಅಡಿಪಾಯದ ಮೇಲೆ ದಾಳಿ ನಡೆಯುತ್ತಿದೆ. ಇಂತಹ ಸಂದಿಗ್ಧ ಸಮಯದಲ್ಲಿ ನಾವೆಲ್ಲರೂ ಬೀದಿಯಲ್ಲಿ ನಿಂತು ನಮ್ಮ ಅಸ್ತಿತ್ವವನ್ನು ತೋರಿಸಬೇಕಿದೆ” ಎಂದು ಅವರು ಹೇಳಿದರು.

ಸೆಪ್ಟೆಂಬರ್‌ 30ರಂದು ಗುಂಡ್ಲುಪೇಟೆಯ ಮೂಲಕ ಕರ್ನಾಟಕ ಪ್ರವೇಶಿಸುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಪಾದಯಾತ್ರೆಯಲ್ಲಿ ‘ಭಾವೈಕ್ಯ ಕರ್ನಾಟಕ ಬ್ಯಾನರ್‌ನಡಿ’ ಎಲ್ಲ ಸಮಾನ ಮನಸ್ಕರು, ದೇಶಪ್ರೇಮಿಗಳು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

“ನಮ್ಮ ಮನೆಗೆ ಬೆಂಕಿ ಬಿದ್ದಿದೆ. ನಮಗೆ ಕಾಣುತ್ತಿರುವುದು ಇಬ್ಬರಷ್ಟೇ. ಒಬ್ಬನ ಕೈಯಲ್ಲಿ ಪೆಟ್ರೋಲ್‌ ಬಾಟಲಿಯಿದೆ. ಮತ್ತೊಬ್ಬ ನೀರಿನ ಬಕೆಟ್‌ ಹಿಡಿದು ನಿಂತಿದ್ದಾನೆ. ನೀರಿನ ಬಕೆಟ್‌ ಯಾರೇ ಹಿಡಿದು ಬರಲಿ ಆತ ನಮಗೆ ಗೆಳೆಯನಂತೆ ಕಾಣುತ್ತಾನೆ. ದ್ವೇಷದ ರಾಜಕಾರಣ ತಿರಸ್ಕರಿಸಲು, ಸದುದ್ದೇಶದಿಂದ ಕೂಡಿದ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಗೆ ಎಲ್ಲರೂ ಬೆಂಬಲ ನೀಡಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

“ಕೇವಲ ಎರಡೂವರೆ ವರ್ಷದಲ್ಲಿ ಅದಾನಿಯ ಸಂಪತ್ತು 66 ಸಾವಿರ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಅದನ್ನು ಮರೆಮಾಚಲು ಬಿಜೆಪಿ ಮತ್ತು ಸಂಘಪರಿವಾರ ಹಿಂದೂ-ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತರುತ್ತಿದೆ” ಎಂದು ಅವರು ಆರೋಪಿಸಿದರು.

“ಕರ್ನಾಟಕ ದ್ವೇಷ ರಾಜಕಾರಣದ ಪ್ರಯೋಗಶಾಲೆಯಾಗಿದೆ. ಇದುವರೆಗೆ ಕಂಡು ಕೇಳರಿಯದಂಥ ಭ್ರಷ್ಟಾಚಾರದಲ್ಲಿ ಕರ್ನಾಟಕ ಸರ್ಕಾರ ಮುಳುಗಿದೆ. ನಾವು ದುರಾಡಳಿತದ ಬಗ್ಗೆ ಪ್ರಶ್ನೆ ಮಾತನಾಡಿದರೆ, ಅವರು ಹಿಜಾಬ್‌ ವಿಷಯ ಮುನ್ನೆಲೆಗೆ ತರುತ್ತಾರೆ. ದೇಶದಲ್ಲಿ ಕಳೆದ 40 ವರ್ಷಗಳಲ್ಲೇ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶವನ್ನು ಉಳಿಸಲು ಎಲ್ಲ ಸಂಘಟನೆಗಳು, ಜನಚಳವಳಿಗಳು, ಸಾಮಾಜಿಕ ಕಾರ್ಯಕರ್ತರು ಒಂದಾಗಬೇಕು” ಎಂದು ಅವರು ಸಲಹೆ ನೀಡಿದರು.

ಹಿರಿಯ ಸಾಹಿತಿ ಬಂಜಗೆರೆ ಜಯಪ್ರಕಾಶ್‌ ಮಾತನಾಡಿ, “ಸಮಾಜದಲ್ಲಿ ಪಂಗಡೀಕರಣ ಮತ್ತು ವಿಂಗಡೀಕರಣ ಆಗುತ್ತಿರುವುದು ಬಹಳ ದೊಡ್ಡ ವಿದ್ಯಮಾನ. ಕರ್ನಾಟಕದ ಇತಿಹಾಸ ಸಾಮರಸ್ಯಕ್ಕೆ ಮಾದರಿಯಾಗಿತ್ತು. ಈಗ ಯಾರಿಗೂ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿಲ್ಲ. ಮಾನವಹಕ್ಕು ಹೋರಾಟಗಾರರು, ಸಾಹಿತಿಗಳಿಗೆ ಅಪಾಯ ಬಂದೊದಗಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲ ಇದರ ವಿರುದ್ಧ ಒಂದಾಗಲು ಭಾರತ್‌ ಜೋಡೋಗೆ ಕೈಜೋಡಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

“ಬಹುತ್ವ ಭಾರತ, ಒಕ್ಕೂಟ ಭಾರತ, ಸಮಾನತೆ ಮತ್ತು ಶಿಕ್ಷಣಕ್ಕೆ ಕುತ್ತು ಬರುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಭಾರತ್‌ ಜೋಡೋವನ್ನು ಬೆಂಬಲಿಸಬೇಕಾಗಿದೆ” ಎಂದು ಹಿರಿಯ ಸಾಹಿತಿ ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

ದೇಶದ ಬಗ್ಗೆ ಕಾಳಜಿ ಇರುವವರು, ಪ್ರಜಾಪ್ರಭುತ್ವ ಉಳಿಸಬೇಕೆಂದು ಬಯಸುವ ಎಲ್ಲರೂ ಸೇರಿ ಕರ್ನಾಟಕದಲ್ಲಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ವಿಜ್ಞಾನಿ ಪ್ರಕಾಶ್‌ ಕಮ್ಮರಡಿ ವಿನಂತಿಸಿದರು. “ಭಾರತ್‌ ಜೋಡೋ ಬೆಂಬಲಿಸಿದ ಮಾತ್ರಕ್ಕೆ ನಾವು ಕಾಂಗ್ರೆಸ್‌ ಪರ ಎಂದಲ್ಲ. ಕಾಂಗ್ರೆಸ್‌ನ ನೀತಿಗಳನ್ನೂ ವಿರೋಧಿಸುತ್ತೇವೆ. ಸದ್ಯ ವಿರೋಧಿಸುವ, ಟೀಕಿಸುವ ಸ್ವಾತಂತ್ರ್ಯ ಉಳಿಸುವ ಅಗತ್ಯವಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ, ಚಿಂತಕಿ ಬಿ.ಟಿ. ಲಲಿತಾ ನಾಯಕ್‌ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...