Homeಕರ್ನಾಟಕದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ರಾಜ್ಯದ ಜನತೆ ಭಾರತ್‌ ಜೋಡೋ ಯಾತ್ರೆಗೆ ಬೆಂಬಲಿಸಬೇಕು ಎಂದು ಅವರು ವಿನಂತಿಸಿದ್ದಾರೆ

- Advertisement -
- Advertisement -

ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ ಭಾರತ್‌ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕು’ ಎಂಬ ವಿಚಾರದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.

“ನನ್ನಂಥವರು ಬಹಳ ಭರವಸೆಯಿಂದ ಕರ್ನಾಟಕಕ್ಕೆ ಬರುತ್ತೇವೆ. ಭಾರತ್‌ ಜೋಡೋ ಯಾತ್ರೆಯನ್ನು ನಾನು ಭಾರತದ ‘ದಕ್ಷಿಣಾಯಣ ಮೂಮೆಂಟ್‌’ ಎಂದು ಕರೆಯುತ್ತೇನೆ. ಕರ್ನಾಟಕ ಸಾಂಸ್ಕೃತಿಕವಾಗಿ ಬಹಳ ಸಂಪದ್ಭರಿತ ನಾಡು. ಗಿರೀಶ್‌ ಕಾರ್ನಾಡ್‌, ಅನಂತಮೂರ್ತಿ ಮುಂತಾದವರ ಬರಹಗಳನ್ನು ಓದಿ ಬೆಳೆದಿದ್ದೇನೆ. ಸಾರ್ವಜನಿಕ ಬದುಕಿಗೆ ಬರುತ್ತಿದ್ದಂತೆ ಕುವೆಂಪು ಅವರ ಕವಿತೆಗಳು ಪ್ರಭಾವಿಸಿವೆ” ಎಂದು ಅವರು ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರ್ನಾಟಕದ ದಲಿತ ಸಾಹಿತ್ಯದ ಆಳವನ್ನು ಅರಿತಿದ್ದೇವೆ. ಬರಹಗಾರರಾದ ಗೆಳೆಯ ಡಿ.ಆರ್‌. ನಾಗರಾಜ್‌, ದೇವನೂರು ಮಹಾದೇವ ಇವರೆಲ್ಲ ಮಾರ್ಗದರ್ಶಕರು. ಇವರಿಂದ ಇಡೀ ದೇಶ ಕಲಿಯುವುದು ಬಹಳ ಇದೆ. ಇದು ದಕ್ಷಿಣದ ಯೋಚನೆಯೊಂದಿಗೆ ಉತ್ತರಕ್ಕೆ ಪ್ರಯಾಣ. ಇದರಲ್ಲಿ ಎಲ್ಲಾ ರಾಜಕೀಯ ಪಕ್ಷಗಳು, ಜನ ಚಳವಳಿ, ಸಂಘಟನೆಗಳು ಭಾಗವಹಿಸುವುದು ಬಹಳ ಮುಖ್ಯ. ಯಾರೆಲ್ಲ ಇನ್ನೂ ಸೇರಿಕೊಂಡಿಲ್ಲವೋ ತಕ್ಷಣ ಸೇರಿಕೊಳ್ಳಿ” ಎಂದು ಯೋಗೇಂದ್ರ ಯಾದವ್‌ ಕರೆ ನೀಡಿದರು.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

“ಕಾಂಗ್ರೆಸ್‌ನ ಅಭಿಯಾನವಾದ ‘ಭಾರತ್‌ ಜೋಡೋ’ ಪಾದಯಾತ್ರೆ ಇಂದಿನ ಅಗತ್ಯವಾಗಿದೆ. ಬಾಬಾ ಸಾಹೇಬರ ಸಂವಿಧಾನ ಅಪಾಯದಲ್ಲಿದೆ. ನಾಗರಿಕತೆಯ ಅಡಿಪಾಯದ ಮೇಲೆ ದಾಳಿ ನಡೆಯುತ್ತಿದೆ. ಇಂತಹ ಸಂದಿಗ್ಧ ಸಮಯದಲ್ಲಿ ನಾವೆಲ್ಲರೂ ಬೀದಿಯಲ್ಲಿ ನಿಂತು ನಮ್ಮ ಅಸ್ತಿತ್ವವನ್ನು ತೋರಿಸಬೇಕಿದೆ” ಎಂದು ಅವರು ಹೇಳಿದರು.

ಸೆಪ್ಟೆಂಬರ್‌ 30ರಂದು ಗುಂಡ್ಲುಪೇಟೆಯ ಮೂಲಕ ಕರ್ನಾಟಕ ಪ್ರವೇಶಿಸುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಪಾದಯಾತ್ರೆಯಲ್ಲಿ ‘ಭಾವೈಕ್ಯ ಕರ್ನಾಟಕ ಬ್ಯಾನರ್‌ನಡಿ’ ಎಲ್ಲ ಸಮಾನ ಮನಸ್ಕರು, ದೇಶಪ್ರೇಮಿಗಳು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

“ನಮ್ಮ ಮನೆಗೆ ಬೆಂಕಿ ಬಿದ್ದಿದೆ. ನಮಗೆ ಕಾಣುತ್ತಿರುವುದು ಇಬ್ಬರಷ್ಟೇ. ಒಬ್ಬನ ಕೈಯಲ್ಲಿ ಪೆಟ್ರೋಲ್‌ ಬಾಟಲಿಯಿದೆ. ಮತ್ತೊಬ್ಬ ನೀರಿನ ಬಕೆಟ್‌ ಹಿಡಿದು ನಿಂತಿದ್ದಾನೆ. ನೀರಿನ ಬಕೆಟ್‌ ಯಾರೇ ಹಿಡಿದು ಬರಲಿ ಆತ ನಮಗೆ ಗೆಳೆಯನಂತೆ ಕಾಣುತ್ತಾನೆ. ದ್ವೇಷದ ರಾಜಕಾರಣ ತಿರಸ್ಕರಿಸಲು, ಸದುದ್ದೇಶದಿಂದ ಕೂಡಿದ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಗೆ ಎಲ್ಲರೂ ಬೆಂಬಲ ನೀಡಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

“ಕೇವಲ ಎರಡೂವರೆ ವರ್ಷದಲ್ಲಿ ಅದಾನಿಯ ಸಂಪತ್ತು 66 ಸಾವಿರ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಅದನ್ನು ಮರೆಮಾಚಲು ಬಿಜೆಪಿ ಮತ್ತು ಸಂಘಪರಿವಾರ ಹಿಂದೂ-ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತರುತ್ತಿದೆ” ಎಂದು ಅವರು ಆರೋಪಿಸಿದರು.

“ಕರ್ನಾಟಕ ದ್ವೇಷ ರಾಜಕಾರಣದ ಪ್ರಯೋಗಶಾಲೆಯಾಗಿದೆ. ಇದುವರೆಗೆ ಕಂಡು ಕೇಳರಿಯದಂಥ ಭ್ರಷ್ಟಾಚಾರದಲ್ಲಿ ಕರ್ನಾಟಕ ಸರ್ಕಾರ ಮುಳುಗಿದೆ. ನಾವು ದುರಾಡಳಿತದ ಬಗ್ಗೆ ಪ್ರಶ್ನೆ ಮಾತನಾಡಿದರೆ, ಅವರು ಹಿಜಾಬ್‌ ವಿಷಯ ಮುನ್ನೆಲೆಗೆ ತರುತ್ತಾರೆ. ದೇಶದಲ್ಲಿ ಕಳೆದ 40 ವರ್ಷಗಳಲ್ಲೇ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶವನ್ನು ಉಳಿಸಲು ಎಲ್ಲ ಸಂಘಟನೆಗಳು, ಜನಚಳವಳಿಗಳು, ಸಾಮಾಜಿಕ ಕಾರ್ಯಕರ್ತರು ಒಂದಾಗಬೇಕು” ಎಂದು ಅವರು ಸಲಹೆ ನೀಡಿದರು.

ಹಿರಿಯ ಸಾಹಿತಿ ಬಂಜಗೆರೆ ಜಯಪ್ರಕಾಶ್‌ ಮಾತನಾಡಿ, “ಸಮಾಜದಲ್ಲಿ ಪಂಗಡೀಕರಣ ಮತ್ತು ವಿಂಗಡೀಕರಣ ಆಗುತ್ತಿರುವುದು ಬಹಳ ದೊಡ್ಡ ವಿದ್ಯಮಾನ. ಕರ್ನಾಟಕದ ಇತಿಹಾಸ ಸಾಮರಸ್ಯಕ್ಕೆ ಮಾದರಿಯಾಗಿತ್ತು. ಈಗ ಯಾರಿಗೂ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿಲ್ಲ. ಮಾನವಹಕ್ಕು ಹೋರಾಟಗಾರರು, ಸಾಹಿತಿಗಳಿಗೆ ಅಪಾಯ ಬಂದೊದಗಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲ ಇದರ ವಿರುದ್ಧ ಒಂದಾಗಲು ಭಾರತ್‌ ಜೋಡೋಗೆ ಕೈಜೋಡಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

“ಬಹುತ್ವ ಭಾರತ, ಒಕ್ಕೂಟ ಭಾರತ, ಸಮಾನತೆ ಮತ್ತು ಶಿಕ್ಷಣಕ್ಕೆ ಕುತ್ತು ಬರುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಭಾರತ್‌ ಜೋಡೋವನ್ನು ಬೆಂಬಲಿಸಬೇಕಾಗಿದೆ” ಎಂದು ಹಿರಿಯ ಸಾಹಿತಿ ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

ದೇಶದ ಬಗ್ಗೆ ಕಾಳಜಿ ಇರುವವರು, ಪ್ರಜಾಪ್ರಭುತ್ವ ಉಳಿಸಬೇಕೆಂದು ಬಯಸುವ ಎಲ್ಲರೂ ಸೇರಿ ಕರ್ನಾಟಕದಲ್ಲಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ವಿಜ್ಞಾನಿ ಪ್ರಕಾಶ್‌ ಕಮ್ಮರಡಿ ವಿನಂತಿಸಿದರು. “ಭಾರತ್‌ ಜೋಡೋ ಬೆಂಬಲಿಸಿದ ಮಾತ್ರಕ್ಕೆ ನಾವು ಕಾಂಗ್ರೆಸ್‌ ಪರ ಎಂದಲ್ಲ. ಕಾಂಗ್ರೆಸ್‌ನ ನೀತಿಗಳನ್ನೂ ವಿರೋಧಿಸುತ್ತೇವೆ. ಸದ್ಯ ವಿರೋಧಿಸುವ, ಟೀಕಿಸುವ ಸ್ವಾತಂತ್ರ್ಯ ಉಳಿಸುವ ಅಗತ್ಯವಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ, ಚಿಂತಕಿ ಬಿ.ಟಿ. ಲಲಿತಾ ನಾಯಕ್‌ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...